Homeಮುಖಪುಟಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

"ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ" ಎಂದು ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ತಮ್ಮ 12 ಸದಸ್ಯರ ಅಮಾನತು ಪ್ರಶ್ನಿಸಿದ ಪ್ರತಿಪಕ್ಷಗಳು ಸಭಾ ತ್ಯಾಗ ಮಾಡಿದ ನಡುವೆಯೇ ಮಂಗಳವಾರ ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ ಮಂಡಿಸಿದರು.

ಮಂಡಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021ರಂದು ಮಸೂದೆಯನ್ನು ಅಂಗೀಕರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರ ಜಾಗೃತ ಆಯೋಗದ (ತಿದ್ದುಪಡಿ) ಮಸೂದೆ, 2021 ಅನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಧ್ವನಿ ಮತದ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದರು.

ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ದೇಶಕರ ಅವಧಿಯನ್ನು ಎರಡು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಲು ಮಸೂದೆ ಪ್ರಯತ್ನಿಸುತ್ತದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ ಪರಿಚಯಿಸಿದ ಸಚಿವ ಜೀತೇಂದ್ರ ಸಿಂಗ್‌, “ಈ ತಿದ್ದುಪಡಿಗಳನ್ನು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಮತ್ತು ಆರ್ಥಿಕ ಸ್ಥಿರತೆಗಾಗಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಭ್ರಷ್ಟಾಚಾರವನ್ನು ತಡೆಗಟ್ಟಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಪಾರದರ್ಶಕತೆಗಾಗಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.

ಇತ್ತೀಚಿನ ವರ್ಷಗಳಲ್ಲಿ ದೇಶವು ಭ್ರಷ್ಟಾಚಾರ, ಕಪ್ಪುಹಣ, ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಆತಂಕಗಳನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಆತಂಕಕಾರಿಯಾಗಿವೆ ಎಂದು ಹೇಳಿದರು.

ಅಪರಾಧದ ವಿಧಾನವು ಬದಲಾಗಿದೆ. ಅದು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಹೀಗಾಗಿ ಅಪರಾಧ ತನಿಖೆ ಹೆಚ್ಚು ಕಷ್ಟಕರವಾಗಿದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭಾತ್ಯಾಗ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಅವರು ಅಮಾನತು ರದ್ದುಗೊಳಿಸುವಂತೆ ಮತ್ತು ಅಮಾನತುಗೊಂಡ 12 ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು. ಡಿಎಂಕೆಯ ತಿರುಚಿ ಶಿವ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರೂ ಅವರನ್ನು ಬೆಂಬಲಿಸಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಹುತೇಕ ಪ್ರತಿಪಕ್ಷ ಸದಸ್ಯರು ಮೇಲ್ಮನೆಯಿಂದ ಹೊರ ನಡೆದರು.

ಪ್ರಜಾಪ್ರಭುತ್ವದ ಹತ್ಯೆ: ರಾಹುಲ್ ಕಿಡಿ

ಸದಸ್ಯರ ಅಮಾನತು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, “ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಜನರ ಧ್ವನಿಯನ್ನು ದಮನ ಮಾಡಿರುವ ಸಂಕೇತವಿದು. ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಸಂಸತ್ತಿನಲ್ಲಿ ಗದ್ದಲದ ನಡುವೆ ವಿಧೇಯಕ ಅಂಗೀಕಾರವಾಗುತ್ತಿದೆ. ಇದು ಸಂಸತ್ತನ್ನು ನಡೆಸುವ ವಿಧಾನವಲ್ಲ. ಪ್ರಧಾನಿ ಸದನಕ್ಕೆ ಬರುವುದಿಲ್ಲ. ರಾಷ್ಟ್ರೀಯ ಮಹತ್ವದ ಯಾವುದೇ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: 12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...