Homeಮುಖಪುಟಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

"ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ" ಎಂದು ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ತಮ್ಮ 12 ಸದಸ್ಯರ ಅಮಾನತು ಪ್ರಶ್ನಿಸಿದ ಪ್ರತಿಪಕ್ಷಗಳು ಸಭಾ ತ್ಯಾಗ ಮಾಡಿದ ನಡುವೆಯೇ ಮಂಗಳವಾರ ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ ಮಂಡಿಸಿದರು.

ಮಂಡಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021ರಂದು ಮಸೂದೆಯನ್ನು ಅಂಗೀಕರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರ ಜಾಗೃತ ಆಯೋಗದ (ತಿದ್ದುಪಡಿ) ಮಸೂದೆ, 2021 ಅನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಧ್ವನಿ ಮತದ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದರು.

ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ದೇಶಕರ ಅವಧಿಯನ್ನು ಎರಡು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಲು ಮಸೂದೆ ಪ್ರಯತ್ನಿಸುತ್ತದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ ಪರಿಚಯಿಸಿದ ಸಚಿವ ಜೀತೇಂದ್ರ ಸಿಂಗ್‌, “ಈ ತಿದ್ದುಪಡಿಗಳನ್ನು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಮತ್ತು ಆರ್ಥಿಕ ಸ್ಥಿರತೆಗಾಗಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಭ್ರಷ್ಟಾಚಾರವನ್ನು ತಡೆಗಟ್ಟಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಪಾರದರ್ಶಕತೆಗಾಗಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.

ಇತ್ತೀಚಿನ ವರ್ಷಗಳಲ್ಲಿ ದೇಶವು ಭ್ರಷ್ಟಾಚಾರ, ಕಪ್ಪುಹಣ, ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಆತಂಕಗಳನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಆತಂಕಕಾರಿಯಾಗಿವೆ ಎಂದು ಹೇಳಿದರು.

ಅಪರಾಧದ ವಿಧಾನವು ಬದಲಾಗಿದೆ. ಅದು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಹೀಗಾಗಿ ಅಪರಾಧ ತನಿಖೆ ಹೆಚ್ಚು ಕಷ್ಟಕರವಾಗಿದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭಾತ್ಯಾಗ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಅವರು ಅಮಾನತು ರದ್ದುಗೊಳಿಸುವಂತೆ ಮತ್ತು ಅಮಾನತುಗೊಂಡ 12 ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು. ಡಿಎಂಕೆಯ ತಿರುಚಿ ಶಿವ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರೂ ಅವರನ್ನು ಬೆಂಬಲಿಸಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಹುತೇಕ ಪ್ರತಿಪಕ್ಷ ಸದಸ್ಯರು ಮೇಲ್ಮನೆಯಿಂದ ಹೊರ ನಡೆದರು.

ಪ್ರಜಾಪ್ರಭುತ್ವದ ಹತ್ಯೆ: ರಾಹುಲ್ ಕಿಡಿ

ಸದಸ್ಯರ ಅಮಾನತು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, “ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಜನರ ಧ್ವನಿಯನ್ನು ದಮನ ಮಾಡಿರುವ ಸಂಕೇತವಿದು. ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಸಂಸತ್ತಿನಲ್ಲಿ ಗದ್ದಲದ ನಡುವೆ ವಿಧೇಯಕ ಅಂಗೀಕಾರವಾಗುತ್ತಿದೆ. ಇದು ಸಂಸತ್ತನ್ನು ನಡೆಸುವ ವಿಧಾನವಲ್ಲ. ಪ್ರಧಾನಿ ಸದನಕ್ಕೆ ಬರುವುದಿಲ್ಲ. ರಾಷ್ಟ್ರೀಯ ಮಹತ್ವದ ಯಾವುದೇ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: 12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...