Homeಕರ್ನಾಟಕಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

- Advertisement -
- Advertisement -

ರಮೇಶ್‌ ಜಾರಕಿಹೊಳಿ ಸಿಡಿ ಹಗರಣದ ವಿಡಿಯೋದಲ್ಲಿ ಇದ್ದವರು ಎನ್ನಲಾಗಿರುವ ಯುವತಿ ಇದೀಗ ತನ್ನ ಹೇಳಿಕೆಯ ಐದನೆ ವಿಡಿಯೋವನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೊದಲ್ಲಿ ಯುವತಿಯು, “ತನ್ನ ತಂದೆ ತಾಯಿಗೆ ಏನೂ ಗೊತ್ತಿಲ್ಲ. ಅವರಿಗೆ ಬ್ಲಾಕ್‌ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಶನಿವಾರ ಬೆಳಿಗ್ಗೆ ತನ್ನ ನಾಲ್ಕನೆ ವಿಡಿಯೋದಲ್ಲಿ, “ಕಳೆದ 24 ದಿನದಿಂದ ನನಗೆ ತೀವ್ರ ಕಿರುಕುಳವಾಗುತ್ತಿದೆ. ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಇದರ ನಂತರ ಯುವತಿಯ ಪೋಷಕರು ಪೊಲೀಸರ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡುತ್ತಾ, ಡಿ.ಕೆ. ಶಿವಕುಮಾರ್‌ ಅವರೇ ಇದಕ್ಕೆಲ್ಲ ಕಾರಣ ಎಂದು ನೇರವಾಗಿ ಆರೋಪ ಹೊರಿಸಿದ್ದರು. ಇದರ ನಂತರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡಾ, ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಶನಿವಾರ ಸಂಜೆ ಆರೋಪಿಸಿದ್ದರು. ಆದರೆ ಡಿ.ಕೆ. ಶಿವಕುಮಾರ್‌ ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಯುವತಿ ನನ್ನ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವತಿ ತನ್ನ ಹೇಳಿಕೆಯ ಐದನೆ ವಿಡಿಯೊ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಯುವತಿ, “ಬೆಳಿಗ್ಗೆಯಿಂದ ಆಗಿರುವ ಬೆಳವಣಿಗೆ ನೋಡುತ್ತಾ ಇದ್ದರೆ ನನಗೆ ಭಯ ಆಗುತ್ತಿದೆ. ನಮ್ಮ ಅಪ್ಪ- ಅಮ್ಮನಿಗೆ ಏನೂ ಗೊತ್ತೆ ಇಲ್ಲ. ಅವರನ್ನು ಪ್ರಭಾವ ಬೀರಿ, ಅಷ್ಟು ಬ್ಲಾಕ್​ಮೇಲ್ ಮಾಡಿ, ಎಲ್ಲೊ ಇರಿಸಿ, ಅವರಿಂದ ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

‘‘ನನ್ನ ತಂದೆ ತಾಯಿಗೆ ಏನಾಗಿದೆ ಎಂದು ಗೊತ್ತಿಲ್ಲ. ಈ ಕೇಸಲ್ಲಿ ಅನ್ಯಾಯ ಆಗಿರುವುದು ನನಗೆ. ಅನ್ಯಾಯ ಮಾಡಿರುವುದು ಅವರಾಗಿವುದಿಂದ ಅವರ ಮನೆಯವರನ್ನು ಕರೆದುಕೊಂಡು ಬಂದು ಯಾರೂ ವಿಚಾರಣೆ ಮಾಡುತ್ತಿಲ್ಲ. ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿ, ಏನೇನೋ ಹೆಸರು ಹೇಳಿಸಿ ಬಿಟ್ಟು, ಈ ಕೇಸನ್ನು ಬೇರೆ ರೀತಿ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ. ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಅವರ ಬಗ್ಗೆ ಇವರ ಬಗ್ಗೆ ನನಗೆ ಬೇಕಿಲ್ಲ. ಅದೆಲ್ಲ ಅವರ ವೈಯಕ್ತಿಕ” ಎಂದು ಯುವತಿ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

“ಈಗ ನನಗೆ ಅಲ್ಲಿಗೆ ಬಂದು ಹೇಳಿಕೆ ನೀಡಲು ಭಯವಾಗ್ತಾ ಇದೆ. ಇಷ್ಟು ಪ್ರಭಾವ ಬೀರಿ, ನಮ್ಮ ಅಪ್ಪ-ಅಮ್ಮನಿಗೆ ಏನೇನೋ ಹೇಳಿಸಿ, ಪ್ರಕರಣ ಬದಲಾಯಿಸಲು ಪ್ರಯತ್ನಿಸುತ್ತಾ ಇರುವವರು, ನಾಳೆ ನಾನು ಅಲ್ಲಿಗೆ ಬಂದು ಹೇಳಿಕೆ ನೀಡುವಾಗ ಏನಾಗುತ್ತೋ ಗೊತ್ತಿಲ್ಲ” ಎಂದು ಯುವತಿ ಆತಂಕ ವ್ಯಕ್ತಪಡಿಸಿದ್ದಾರೆ.

“ಹಾಗಾಗಿ, ನಾನು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ, ಗೃಹ ಸಚಿವ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರಿಗೆ ಇವರೆಲ್ಲರಿಗೂ, ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದೇನೆ. ನನ್ನ ಏನೇನು ಹೇಳಿಕೆ ಇದೆಯೋ ಪ್ರತಿಯೊಂದನ್ನು ನೀಡುತ್ತೇನೆ. ಇವರು ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ. ನಾನು ನ್ಯಾಯಾಧೀಶರ ಮುಂದೆಯೇ ಬಂದು ಹೇಳಿಕೆ ನೀಡಬೇಕು ಎಂದುಕೊಂಡಿದ್ದೇನೆ. ಇದಕ್ಕಾಗಿ ನನಗೆ ಎಲ್ಲರೂ ಸಹಾಯ ಮಾಡಬೇಕು” ಎಂದು ಸಂತ್ರಸ್ತ ಯುವತಿಯು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...