Homeಕರ್ನಾಟಕಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

- Advertisement -
- Advertisement -

ರಮೇಶ್‌ ಜಾರಕಿಹೊಳಿ ಸಿಡಿ ಹಗರಣದ ವಿಡಿಯೋದಲ್ಲಿ ಇದ್ದವರು ಎನ್ನಲಾಗಿರುವ ಯುವತಿ ಇದೀಗ ತನ್ನ ಹೇಳಿಕೆಯ ಐದನೆ ವಿಡಿಯೋವನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೊದಲ್ಲಿ ಯುವತಿಯು, “ತನ್ನ ತಂದೆ ತಾಯಿಗೆ ಏನೂ ಗೊತ್ತಿಲ್ಲ. ಅವರಿಗೆ ಬ್ಲಾಕ್‌ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಶನಿವಾರ ಬೆಳಿಗ್ಗೆ ತನ್ನ ನಾಲ್ಕನೆ ವಿಡಿಯೋದಲ್ಲಿ, “ಕಳೆದ 24 ದಿನದಿಂದ ನನಗೆ ತೀವ್ರ ಕಿರುಕುಳವಾಗುತ್ತಿದೆ. ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಇದರ ನಂತರ ಯುವತಿಯ ಪೋಷಕರು ಪೊಲೀಸರ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡುತ್ತಾ, ಡಿ.ಕೆ. ಶಿವಕುಮಾರ್‌ ಅವರೇ ಇದಕ್ಕೆಲ್ಲ ಕಾರಣ ಎಂದು ನೇರವಾಗಿ ಆರೋಪ ಹೊರಿಸಿದ್ದರು. ಇದರ ನಂತರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡಾ, ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಶನಿವಾರ ಸಂಜೆ ಆರೋಪಿಸಿದ್ದರು. ಆದರೆ ಡಿ.ಕೆ. ಶಿವಕುಮಾರ್‌ ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಯುವತಿ ನನ್ನ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವತಿ ತನ್ನ ಹೇಳಿಕೆಯ ಐದನೆ ವಿಡಿಯೊ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಯುವತಿ, “ಬೆಳಿಗ್ಗೆಯಿಂದ ಆಗಿರುವ ಬೆಳವಣಿಗೆ ನೋಡುತ್ತಾ ಇದ್ದರೆ ನನಗೆ ಭಯ ಆಗುತ್ತಿದೆ. ನಮ್ಮ ಅಪ್ಪ- ಅಮ್ಮನಿಗೆ ಏನೂ ಗೊತ್ತೆ ಇಲ್ಲ. ಅವರನ್ನು ಪ್ರಭಾವ ಬೀರಿ, ಅಷ್ಟು ಬ್ಲಾಕ್​ಮೇಲ್ ಮಾಡಿ, ಎಲ್ಲೊ ಇರಿಸಿ, ಅವರಿಂದ ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

‘‘ನನ್ನ ತಂದೆ ತಾಯಿಗೆ ಏನಾಗಿದೆ ಎಂದು ಗೊತ್ತಿಲ್ಲ. ಈ ಕೇಸಲ್ಲಿ ಅನ್ಯಾಯ ಆಗಿರುವುದು ನನಗೆ. ಅನ್ಯಾಯ ಮಾಡಿರುವುದು ಅವರಾಗಿವುದಿಂದ ಅವರ ಮನೆಯವರನ್ನು ಕರೆದುಕೊಂಡು ಬಂದು ಯಾರೂ ವಿಚಾರಣೆ ಮಾಡುತ್ತಿಲ್ಲ. ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿ, ಏನೇನೋ ಹೆಸರು ಹೇಳಿಸಿ ಬಿಟ್ಟು, ಈ ಕೇಸನ್ನು ಬೇರೆ ರೀತಿ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ. ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಅವರ ಬಗ್ಗೆ ಇವರ ಬಗ್ಗೆ ನನಗೆ ಬೇಕಿಲ್ಲ. ಅದೆಲ್ಲ ಅವರ ವೈಯಕ್ತಿಕ” ಎಂದು ಯುವತಿ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

“ಈಗ ನನಗೆ ಅಲ್ಲಿಗೆ ಬಂದು ಹೇಳಿಕೆ ನೀಡಲು ಭಯವಾಗ್ತಾ ಇದೆ. ಇಷ್ಟು ಪ್ರಭಾವ ಬೀರಿ, ನಮ್ಮ ಅಪ್ಪ-ಅಮ್ಮನಿಗೆ ಏನೇನೋ ಹೇಳಿಸಿ, ಪ್ರಕರಣ ಬದಲಾಯಿಸಲು ಪ್ರಯತ್ನಿಸುತ್ತಾ ಇರುವವರು, ನಾಳೆ ನಾನು ಅಲ್ಲಿಗೆ ಬಂದು ಹೇಳಿಕೆ ನೀಡುವಾಗ ಏನಾಗುತ್ತೋ ಗೊತ್ತಿಲ್ಲ” ಎಂದು ಯುವತಿ ಆತಂಕ ವ್ಯಕ್ತಪಡಿಸಿದ್ದಾರೆ.

“ಹಾಗಾಗಿ, ನಾನು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ, ಗೃಹ ಸಚಿವ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರಿಗೆ ಇವರೆಲ್ಲರಿಗೂ, ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದೇನೆ. ನನ್ನ ಏನೇನು ಹೇಳಿಕೆ ಇದೆಯೋ ಪ್ರತಿಯೊಂದನ್ನು ನೀಡುತ್ತೇನೆ. ಇವರು ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ. ನಾನು ನ್ಯಾಯಾಧೀಶರ ಮುಂದೆಯೇ ಬಂದು ಹೇಳಿಕೆ ನೀಡಬೇಕು ಎಂದುಕೊಂಡಿದ್ದೇನೆ. ಇದಕ್ಕಾಗಿ ನನಗೆ ಎಲ್ಲರೂ ಸಹಾಯ ಮಾಡಬೇಕು” ಎಂದು ಸಂತ್ರಸ್ತ ಯುವತಿಯು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...