Homeಕರ್ನಾಟಕಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

- Advertisement -
- Advertisement -

ರಮೇಶ್‌ ಜಾರಕಿಹೊಳಿ ಸಿಡಿ ಹಗರಣದ ವಿಡಿಯೋದಲ್ಲಿ ಇದ್ದವರು ಎನ್ನಲಾಗಿರುವ ಯುವತಿ ಇದೀಗ ತನ್ನ ಹೇಳಿಕೆಯ ಐದನೆ ವಿಡಿಯೋವನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದ್ದಾರೆ. ಈ ವಿಡಿಯೊದಲ್ಲಿ ಯುವತಿಯು, “ತನ್ನ ತಂದೆ ತಾಯಿಗೆ ಏನೂ ಗೊತ್ತಿಲ್ಲ. ಅವರಿಗೆ ಬ್ಲಾಕ್‌ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಶನಿವಾರ ಬೆಳಿಗ್ಗೆ ತನ್ನ ನಾಲ್ಕನೆ ವಿಡಿಯೋದಲ್ಲಿ, “ಕಳೆದ 24 ದಿನದಿಂದ ನನಗೆ ತೀವ್ರ ಕಿರುಕುಳವಾಗುತ್ತಿದೆ. ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಇದರ ನಂತರ ಯುವತಿಯ ಪೋಷಕರು ಪೊಲೀಸರ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡುತ್ತಾ, ಡಿ.ಕೆ. ಶಿವಕುಮಾರ್‌ ಅವರೇ ಇದಕ್ಕೆಲ್ಲ ಕಾರಣ ಎಂದು ನೇರವಾಗಿ ಆರೋಪ ಹೊರಿಸಿದ್ದರು. ಇದರ ನಂತರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡಾ, ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಶನಿವಾರ ಸಂಜೆ ಆರೋಪಿಸಿದ್ದರು. ಆದರೆ ಡಿ.ಕೆ. ಶಿವಕುಮಾರ್‌ ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಯುವತಿ ನನ್ನ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೀಗ ಯುವತಿ ತನ್ನ ಹೇಳಿಕೆಯ ಐದನೆ ವಿಡಿಯೊ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಯುವತಿ, “ಬೆಳಿಗ್ಗೆಯಿಂದ ಆಗಿರುವ ಬೆಳವಣಿಗೆ ನೋಡುತ್ತಾ ಇದ್ದರೆ ನನಗೆ ಭಯ ಆಗುತ್ತಿದೆ. ನಮ್ಮ ಅಪ್ಪ- ಅಮ್ಮನಿಗೆ ಏನೂ ಗೊತ್ತೆ ಇಲ್ಲ. ಅವರನ್ನು ಪ್ರಭಾವ ಬೀರಿ, ಅಷ್ಟು ಬ್ಲಾಕ್​ಮೇಲ್ ಮಾಡಿ, ಎಲ್ಲೊ ಇರಿಸಿ, ಅವರಿಂದ ಹೇಳಿಕೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

‘‘ನನ್ನ ತಂದೆ ತಾಯಿಗೆ ಏನಾಗಿದೆ ಎಂದು ಗೊತ್ತಿಲ್ಲ. ಈ ಕೇಸಲ್ಲಿ ಅನ್ಯಾಯ ಆಗಿರುವುದು ನನಗೆ. ಅನ್ಯಾಯ ಮಾಡಿರುವುದು ಅವರಾಗಿವುದಿಂದ ಅವರ ಮನೆಯವರನ್ನು ಕರೆದುಕೊಂಡು ಬಂದು ಯಾರೂ ವಿಚಾರಣೆ ಮಾಡುತ್ತಿಲ್ಲ. ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಿ, ಏನೇನೋ ಹೆಸರು ಹೇಳಿಸಿ ಬಿಟ್ಟು, ಈ ಕೇಸನ್ನು ಬೇರೆ ರೀತಿ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ. ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಅವರ ಬಗ್ಗೆ ಇವರ ಬಗ್ಗೆ ನನಗೆ ಬೇಕಿಲ್ಲ. ಅದೆಲ್ಲ ಅವರ ವೈಯಕ್ತಿಕ” ಎಂದು ಯುವತಿ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

“ಈಗ ನನಗೆ ಅಲ್ಲಿಗೆ ಬಂದು ಹೇಳಿಕೆ ನೀಡಲು ಭಯವಾಗ್ತಾ ಇದೆ. ಇಷ್ಟು ಪ್ರಭಾವ ಬೀರಿ, ನಮ್ಮ ಅಪ್ಪ-ಅಮ್ಮನಿಗೆ ಏನೇನೋ ಹೇಳಿಸಿ, ಪ್ರಕರಣ ಬದಲಾಯಿಸಲು ಪ್ರಯತ್ನಿಸುತ್ತಾ ಇರುವವರು, ನಾಳೆ ನಾನು ಅಲ್ಲಿಗೆ ಬಂದು ಹೇಳಿಕೆ ನೀಡುವಾಗ ಏನಾಗುತ್ತೋ ಗೊತ್ತಿಲ್ಲ” ಎಂದು ಯುವತಿ ಆತಂಕ ವ್ಯಕ್ತಪಡಿಸಿದ್ದಾರೆ.

“ಹಾಗಾಗಿ, ನಾನು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ, ಗೃಹ ಸಚಿವ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರಿಗೆ ಇವರೆಲ್ಲರಿಗೂ, ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದೇನೆ. ನನ್ನ ಏನೇನು ಹೇಳಿಕೆ ಇದೆಯೋ ಪ್ರತಿಯೊಂದನ್ನು ನೀಡುತ್ತೇನೆ. ಇವರು ನನಗೆ ಏನೇನು ಅನ್ಯಾಯ ಮಾಡಿದ್ದಾರೆ ಎಲ್ಲವನ್ನೂ ಎಳೆಎಳೆಯಾಗಿ ಬಿಚ್ಚಿಡುತ್ತೇನೆ. ನಾನು ನ್ಯಾಯಾಧೀಶರ ಮುಂದೆಯೇ ಬಂದು ಹೇಳಿಕೆ ನೀಡಬೇಕು ಎಂದುಕೊಂಡಿದ್ದೇನೆ. ಇದಕ್ಕಾಗಿ ನನಗೆ ಎಲ್ಲರೂ ಸಹಾಯ ಮಾಡಬೇಕು” ಎಂದು ಸಂತ್ರಸ್ತ ಯುವತಿಯು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...