Homeಕರ್ನಾಟಕ’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

- Advertisement -
- Advertisement -

’ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ’ ಎಂದುಬ ಹೇಳಿ ಇತ್ತಿಚೆಗಷ್ಟೇ ವಿವಾದಕ್ಕೀಡಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ತನ್ನ ಹೇಳಿಕೆಗೆ ಮಲಯಾಳಂ ಭಾಷೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು, “ಕೈ ಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ. ಗೋಹತ್ಯೆ ನಿಷೇಧಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಸ್ವಾಗತಾರ್ಹ” ಎಂದು ಹೇಳಿದ್ದರು.

ಅವರ ಹೇಳಿಕೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ತನ್ನ ಹೇಳಿಕೆಯ ಬಗ್ಗೆ ಸ್ವತಃ ತಾವೇ ವಿಡಿಯೋ ಮಾಡಿ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

ವಿಡಿಯೋದಲ್ಲಿ, “ತಾನು ಪ್ರಸ್ತುತ ಕರ್ನಾಕಟದಾದ್ಯಂತ ಪ್ರವಾಸದಲ್ಲಿದ್ದು, ಕೆಲ ಸ್ನೇಹಿತರು ’ನಾನು ಮುಸ್ಲಿಮರೊಂದಿಗೆ ಗೋಮಾಂಸ ತಿನ್ನಬೇಡಿ’ ಎಂದು ಬೇಡಿಕೊಂಡಿದ್ದಾಗಿ ಮಾಧ್ಯಮಗಳಲ್ಲಿ ಬರುತ್ತಿರುದನ್ನು ಕರೆ ಮಾಡಿ ತಿಳಿಸಿದ್ದಾರೆ. ಇದನ್ನು ಕೇಳಿ ನನಗೆ ತುಂಬಾ ಆಶ್ಚರ್ಯವಾಗಿದೆ. ಬಿಜೆಪಿ ಜಾರಿಗೆ ತರಬೇಕೆಂದು ಉದ್ದೇಶಿಸಿದ್ದ ಮಸೂದೆಯನ್ನು ಪರಿಷತ್‌ನಲ್ಲಿ ವಿರೋಧಿಸಲು ಕಾಂಗ್ರೆಸ್‌ನೊಂದಿಗೆ ಸಂಖ್ಯಾಬಲ ಇರಲಿಲ್ಲವಾದ್ದರಿಂದ ದೇವೇಗೌಡರೊಂದಿಗೆ ಚರ್ಚಿಸಿ ಜನತಾದಳದೊಂದಿಗೆ ಸೇರಿ ವಿರೋಧಿಸಿದ್ದರಿಂದ ಪರಿಷತ್‌ನಲ್ಲಿ ಬಿಜೆಪಿ ಅದನ್ನು ತಂದಿಲ್ಲ” ಎಂದು ಹೇಳಿದ್ದಾರೆ.

ಇದೀಗ ಸುಗ್ರಿವಾಜ್ಞೆ ತರುತ್ತೇವೆಂದು ಬಿಜೆಪಿ ಹೊರಟಿದೆ. ಅದರ ವಿರುದ್ದ ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಗೋಹತ್ಯೆ ಮಾಡಬೇಡಿ ಎಂದು ಹೇಳುತ್ತಿರುವ ಸರ್ಕಾರದೊಂದಿಗೆ ಹಿಂದಿನಿಂದಲೂ ನನ್ನ ಪ್ರಶ್ನೆ ಏನೆಂದರೆ, ’50 ಸಾವಿರ ನೀಡಿ ನಾನೊಂದು ದನವನ್ನು ಖರೀದಿಸಿ, ಅದರ ಹಾಲಿನಿಂದ ಜೀವಿಸುತ್ತಾ ಇರುತ್ತೇನೆ. ಐದಾರು ವರ್ಷಗಳ ನಂತರ ಅದು ಹಾಲು ನೀಡುವುದನ್ನು ನಿಲ್ಲಿಸಿದರೆ ಅದನ್ನು ಮಾರಾಟ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ನಾನು ಯಾರಿಗೆ ನೀಡಲಿ ಅದನ್ನು? ಖರೀದಿಸುವವನು ಅದನ್ನು ಸಾಕಲು ಬೇಕಾಗಿ ಖರೀದಿಸುವುದಿಲ್ಲ, ಮಾಂಸಕ್ಕಾಗಿ ಖರೀದಿತ್ತಾನೆ. ಈ ಬಗ್ಗೆ ಸರ್ಕಾರ ಏನು ಹೇಳುತ್ತದೆ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಗೋಹತ್ಯೆ ನಿಷೇದ ಮಸೂದೆ-2020’ ರ ವಿರೋಧಿ ಜನಾಂದೋಲನದ ಪೂರ್ವಭಾವಿ ಸಭೆ ನಾಳೆ

ಅಂಕಿ ಅಂಶದಂತೆ ರಾಜ್ಯದಲ್ಲಿ ಒಂದು ವರ್ಷಕ್ಕೆ 20 ಲಕ್ಷ ಜಾನುವಾರು ಹೆಚ್ಚಾಗುತ್ತವೆ. ಇದರಲ್ಲಿ ಹೋರಿ ಕರುಗಳು ಇದ್ದರೆ ಏನು ಮಾಡಬೇಕು? ಅವುಗಳನ್ನು ಯಾರು ಸಾಕುತ್ತಾರೆ? ಜೆರ್ಸಿ ತಳಿಯನ್ನು ಕೃಷಿಗೆ ಉಪಯೋಗಿಸುವುದಿಲ್ಲ. ಎಮ್ಮೆ, ಆಡನ್ನು ಮಾಂಸಕ್ಕೆ ಬಳಸಬಹುದು ಆದರೆ ಹಾಲು ನೀಡದ ಹಸುವನ್ನು ಮಾಂಸಕ್ಕೆ ಬಳಸಬಾರದು ಎಂದರೆ ಕೃಷಿಕನಾದ ನನ್ನ ಹಸುವನ್ನು ನೀವು ಖರೀದಿಸಿ, ಆ ದುಡ್ಡಿನಿಂದ ನಾನು ಬೇರೆ ಹಸು ಖರೀದಿಸಿ ಹಾಲು ಮಾರಿ ಜೀವಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿರುವ ಸಿ.ಎಂ. ಇಬ್ರಾಹಿಂ, “ಇದನ್ನೇ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಆದರೆ ಮಾಧ್ಯಮಗಳು ಇದನ್ನು ತಿರುಚಿವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ನಾನು ಏನೆಂದು ಕರ್ನಾಟಕದ ಜನತೆಗೆ ಗೊತ್ತಿದೆ. ಮಸೂದೆಯನ್ನು ವಿರೋಧಿಸಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸಿದ್ದೇನೆ. ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಅದಾಗ್ಯೂ ಈ ನಿಯಮ ಬಂದರೆ ಅದನ್ನು ವಿರೋಧಿಸಿ ಕೋಟ್ಯಾಂತರ ರೈತರು ಬೀದಿಗಿಳಿಯಲಿದ್ದಾರೆ” ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...