Homeಕರ್ನಾಟಕ’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

’ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದಿದ್ದಾರೆ.

- Advertisement -
- Advertisement -

’ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ’ ಎಂದುಬ ಹೇಳಿ ಇತ್ತಿಚೆಗಷ್ಟೇ ವಿವಾದಕ್ಕೀಡಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ತನ್ನ ಹೇಳಿಕೆಗೆ ಮಲಯಾಳಂ ಭಾಷೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು, “ಕೈ ಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ. ಗೋಹತ್ಯೆ ನಿಷೇಧಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಸ್ವಾಗತಾರ್ಹ” ಎಂದು ಹೇಳಿದ್ದರು.

ಅವರ ಹೇಳಿಕೆಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು. ತನ್ನ ಹೇಳಿಕೆಯ ಬಗ್ಗೆ ಸ್ವತಃ ತಾವೇ ವಿಡಿಯೋ ಮಾಡಿ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿವೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

ವಿಡಿಯೋದಲ್ಲಿ, “ತಾನು ಪ್ರಸ್ತುತ ಕರ್ನಾಕಟದಾದ್ಯಂತ ಪ್ರವಾಸದಲ್ಲಿದ್ದು, ಕೆಲ ಸ್ನೇಹಿತರು ’ನಾನು ಮುಸ್ಲಿಮರೊಂದಿಗೆ ಗೋಮಾಂಸ ತಿನ್ನಬೇಡಿ’ ಎಂದು ಬೇಡಿಕೊಂಡಿದ್ದಾಗಿ ಮಾಧ್ಯಮಗಳಲ್ಲಿ ಬರುತ್ತಿರುದನ್ನು ಕರೆ ಮಾಡಿ ತಿಳಿಸಿದ್ದಾರೆ. ಇದನ್ನು ಕೇಳಿ ನನಗೆ ತುಂಬಾ ಆಶ್ಚರ್ಯವಾಗಿದೆ. ಬಿಜೆಪಿ ಜಾರಿಗೆ ತರಬೇಕೆಂದು ಉದ್ದೇಶಿಸಿದ್ದ ಮಸೂದೆಯನ್ನು ಪರಿಷತ್‌ನಲ್ಲಿ ವಿರೋಧಿಸಲು ಕಾಂಗ್ರೆಸ್‌ನೊಂದಿಗೆ ಸಂಖ್ಯಾಬಲ ಇರಲಿಲ್ಲವಾದ್ದರಿಂದ ದೇವೇಗೌಡರೊಂದಿಗೆ ಚರ್ಚಿಸಿ ಜನತಾದಳದೊಂದಿಗೆ ಸೇರಿ ವಿರೋಧಿಸಿದ್ದರಿಂದ ಪರಿಷತ್‌ನಲ್ಲಿ ಬಿಜೆಪಿ ಅದನ್ನು ತಂದಿಲ್ಲ” ಎಂದು ಹೇಳಿದ್ದಾರೆ.

ಇದೀಗ ಸುಗ್ರಿವಾಜ್ಞೆ ತರುತ್ತೇವೆಂದು ಬಿಜೆಪಿ ಹೊರಟಿದೆ. ಅದರ ವಿರುದ್ದ ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಗೋಹತ್ಯೆ ಮಾಡಬೇಡಿ ಎಂದು ಹೇಳುತ್ತಿರುವ ಸರ್ಕಾರದೊಂದಿಗೆ ಹಿಂದಿನಿಂದಲೂ ನನ್ನ ಪ್ರಶ್ನೆ ಏನೆಂದರೆ, ’50 ಸಾವಿರ ನೀಡಿ ನಾನೊಂದು ದನವನ್ನು ಖರೀದಿಸಿ, ಅದರ ಹಾಲಿನಿಂದ ಜೀವಿಸುತ್ತಾ ಇರುತ್ತೇನೆ. ಐದಾರು ವರ್ಷಗಳ ನಂತರ ಅದು ಹಾಲು ನೀಡುವುದನ್ನು ನಿಲ್ಲಿಸಿದರೆ ಅದನ್ನು ಮಾರಾಟ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ನಾನು ಯಾರಿಗೆ ನೀಡಲಿ ಅದನ್ನು? ಖರೀದಿಸುವವನು ಅದನ್ನು ಸಾಕಲು ಬೇಕಾಗಿ ಖರೀದಿಸುವುದಿಲ್ಲ, ಮಾಂಸಕ್ಕಾಗಿ ಖರೀದಿತ್ತಾನೆ. ಈ ಬಗ್ಗೆ ಸರ್ಕಾರ ಏನು ಹೇಳುತ್ತದೆ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಗೋಹತ್ಯೆ ನಿಷೇದ ಮಸೂದೆ-2020’ ರ ವಿರೋಧಿ ಜನಾಂದೋಲನದ ಪೂರ್ವಭಾವಿ ಸಭೆ ನಾಳೆ

ಅಂಕಿ ಅಂಶದಂತೆ ರಾಜ್ಯದಲ್ಲಿ ಒಂದು ವರ್ಷಕ್ಕೆ 20 ಲಕ್ಷ ಜಾನುವಾರು ಹೆಚ್ಚಾಗುತ್ತವೆ. ಇದರಲ್ಲಿ ಹೋರಿ ಕರುಗಳು ಇದ್ದರೆ ಏನು ಮಾಡಬೇಕು? ಅವುಗಳನ್ನು ಯಾರು ಸಾಕುತ್ತಾರೆ? ಜೆರ್ಸಿ ತಳಿಯನ್ನು ಕೃಷಿಗೆ ಉಪಯೋಗಿಸುವುದಿಲ್ಲ. ಎಮ್ಮೆ, ಆಡನ್ನು ಮಾಂಸಕ್ಕೆ ಬಳಸಬಹುದು ಆದರೆ ಹಾಲು ನೀಡದ ಹಸುವನ್ನು ಮಾಂಸಕ್ಕೆ ಬಳಸಬಾರದು ಎಂದರೆ ಕೃಷಿಕನಾದ ನನ್ನ ಹಸುವನ್ನು ನೀವು ಖರೀದಿಸಿ, ಆ ದುಡ್ಡಿನಿಂದ ನಾನು ಬೇರೆ ಹಸು ಖರೀದಿಸಿ ಹಾಲು ಮಾರಿ ಜೀವಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿರುವ ಸಿ.ಎಂ. ಇಬ್ರಾಹಿಂ, “ಇದನ್ನೇ ನಾನು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು, ಆದರೆ ಮಾಧ್ಯಮಗಳು ಇದನ್ನು ತಿರುಚಿವೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ನಾನು ಏನೆಂದು ಕರ್ನಾಟಕದ ಜನತೆಗೆ ಗೊತ್ತಿದೆ. ಮಸೂದೆಯನ್ನು ವಿರೋಧಿಸಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸಿದ್ದೇನೆ. ಬಿಜೆಪಿಗೆ ಸಂವಿಧಾನಾತ್ಮಕವಾಗಿ ಈ ಮಸೂದೆಯನ್ನು ತರಲು ಸಾಧ್ಯವಿಲ್ಲ. ಸುಗ್ರೀವಾಜ್ಞೆ ತಂದರೆ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಅದಾಗ್ಯೂ ಈ ನಿಯಮ ಬಂದರೆ ಅದನ್ನು ವಿರೋಧಿಸಿ ಕೋಟ್ಯಾಂತರ ರೈತರು ಬೀದಿಗಿಳಿಯಲಿದ್ದಾರೆ” ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...