Homeಕರ್ನಾಟಕಸಿ.ಟಿ.ರವಿ ಬಂಧನ: ಪೊಲೀಸ್ ಠಾಣೆಗೆ ಬಿಜೆಪಿ ನಾಯಕರಿಗೆ ಅವಕಾಶ ನೀಡಿದ ಇನ್ಸ್‌ಪೆಕ್ಟರ್ ಅಮಾನತು

ಸಿ.ಟಿ.ರವಿ ಬಂಧನ: ಪೊಲೀಸ್ ಠಾಣೆಗೆ ಬಿಜೆಪಿ ನಾಯಕರಿಗೆ ಅವಕಾಶ ನೀಡಿದ ಇನ್ಸ್‌ಪೆಕ್ಟರ್ ಅಮಾನತು

- Advertisement -
- Advertisement -

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ ವಿವಾದಕ್ಕೆ ಸಿಲುಕಿರುವ ಎಂಎಲ್‌ಸಿ ಸಿ.ಟಿ.ರವಿ ಬಂಧನದ ವೇಳೆ ಬಿಜೆಪಿ ಮುಖಂಡರನ್ನು ಠಾಣೆಯೊಳಗೆ ಬಿಡುವ ಮೂಲಕ ಮೇಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅವರನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಈ ಸಂಬಂಧ ಐಜಿಪಿ (ಉತ್ತರ ವಲಯ) ವಿಕಾಶ್ ಕುಮಾರ್ ವಿಕಾಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

“ಡಿ.19ರಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸ್ ಠಾಣೆಯಿಂದ ಖಾನಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಠಾಣೆಯೊಳಗೆ ಯಾರನ್ನೂ ಬಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಪೊಲೀಸ್ ಠಾಣೆಯ ಲಭ್ಯ ಸಿಬ್ಬಂದಿಯೊಂದಿಗೆ ಭದ್ರತೆ ಏರ್ಪಡಿಸಲು ಸೂಚನೆ ನೀಡಲಾಗಿದೆ” ಎಂದು ಐಜಿಪಿ ತಿಳಿಸಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ನಾಯಕ್ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿರಲಿಲ್ಲ. ಪೊಲೀಸ್ ಠಾಣೆಯೊಳಗೆ ರಾಜಕೀಯ ಮುಖಂಡರು ವಾಗ್ದಾಳಿ ನಡೆಸಿದರು. ಇದರಿಂದ ಪೊಲೀಸ್ ಠಾಣೆಯ ಆವರಣದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ರಾಜಕೀಯ ಮುಖಂಡರ ಪ್ರವೇಶ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಐಜಿಪಿ ಹೇಳಿದರು.

ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ, ಕರ್ತವ್ಯಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿ ವರ್ತನೆಗೆ ಸಂಬಂಧಿಸಿದಂತೆ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.

ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು ವಿರೋಧಿಸಿ ಬಿಜೆಪಿ, ದಲಿತ ಹಾಗೂ ಕನ್ನಡ ಪರ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿರುವ ಬೆಳವಣಿಗೆ ರಾಜಕೀಯ ತಿರುವು ಪಡೆದುಕೊಂಡಿದೆ.

ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಸಿ.ಟಿ.ರವಿ ಅವರ ವಿಚಾರ ಸಭೆಯಲ್ಲಿ ಚರ್ಚೆಯಾಗಿಲ್ಲ, ಸದ್ಯ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ದಳ (ಸಿಐಡಿ) ನಡೆಸುತ್ತಿದೆ, ಪ್ರಕರಣದ ತನಿಖೆ ನಡೆಯುತ್ತಿರುವಾಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಮಂಜುನಾಥ್ ನಾಯಕ್ ಅವರನ್ನು ಅಮಾನತುಗೊಳಿಸುವ ನಿರ್ಧಾರವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ತೆಗೆದುಕೊಂಡಿದ್ದಾರೆ, ಯಾವುದೇ ಸಂದರ್ಭದಲ್ಲಿ ಸರ್ಕಾರವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಅವರು ಸಮರ್ಥಿಸಿಕೊಂಡರು. ಖಾನಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡರ ಸಭೆಗೆ ಉಪ ಮುಖ್ಯಮಂತ್ರಿ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಬಿಜೆಪಿಯ ಹಿರಿಯ ಮುಖಂಡರಾದ ಅನಿಲ್ ಬೆನಕೆ, ಸುಭಾಷ್ ಪಾಟೀಲ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಬುಧವಾರ ಐಜಿಪಿ ವಿಕಾಸ್ ಕುಮಾರ್ ಮತ್ತು ಬೆಳಗಾವಿ ಪೊಲೀಸ್ ಕಮಿಷನರ್ ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ ಅವರನ್ನು ಭೇಟಿ ಮಾಡಿ ಸುವರ್ಣ ವಿಧಾನಸೌಧದಲ್ಲಿ ರವಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿತು.

ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅವಹೇಳನಕಾರಿ ಹೇಳಿಕೆ ಪ್ರಕರಣದ ತನಿಖೆಯಲ್ಲಿ ಮಧ್ಯಸ್ಥಿಕೆ ವಹಿಸಬೇಕು, ನ್ಯಾಯಾಂಗ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ.

ಕರ್ನಾಟಕದಲ್ಲಿ ಪೊಲೀಸ್ ಠಾಣೆಗಳು ಪರಿಣಾಮಕಾರಿಯಾಗಿ ಕಾಂಗ್ರೆಸ್ ಕಚೇರಿಗಳಾಗಿ ಬದಲಾಗಿವೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡ ಆರ್.ಅಶೋಕ, ಪೊಲೀಸ್ ತನಿಖೆಯ ನಿಷ್ಪಕ್ಷಪಾತದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 19 ರಂದು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಬಿಸಿಬಿಸಿ ಚರ್ಚೆಯ ವೇಳೆ ಗಲಾಟೆ ಭುಗಿಲೆದ್ದಿತು.

ಇದನ್ನೂ ಓದಿ; ಸಿ.ಟಿ ರವಿ ಪ್ರಕರಣ ಸಿಐಡಿ ಹೆಗಲಿಗೆ : ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...