Homeಕರ್ನಾಟಕಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

- Advertisement -
- Advertisement -

“ಈ ಪ್ರವಾಸೋದ್ಯಮ ಇಲಾಖೆ ಸಚಿವ ಅಂದ್ರೆ ನಾವೊಂಥರ ಟೂರಿಸ್ಟ್ ಗೈಡ್‍ಗಳು ಇದ್ದಂಗೆ ಅಷ್ಟೇ.. ಇದರಲ್ಲೇನು ಪ್ರಯೋಜನವಿಲ್ಲ” ಹೀಗಂತ ಹೇಳಿದ್ದವರು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಾ.ರಾ ಮಹೇಶ್..

ಈಗ ಅವರ ಮಾತನ್ನು ಪುನರುಚ್ಚರಿಸಿ ನನಗೆ ಆ ಖಾತೆ ಬೇಡ, ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡ್ತೀನಿ ಅಂತ ಅಳ್ತಾ ಇರೋದು ಬಿಜೆಪಿ ಸರ್ಕಾರ ಮಾನ್ಯ ಸಿ.ಟಿ ರವಿಯವರು.. ಏಕೆಂದರೆ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಸಿ.ಟಿ ರವಿಗೆ ಪ್ರವಾಸೋದ್ಯಮ ಇಲಾಖೆ ಸಚಿವ ನೀಡಲಾಗಿದೆ. ಇದು ಅವರ ಹೊಟ್ಟೆಯಲ್ಲಿ ಇಲಿಮರಿ ಓಡಾಡಿದ ಹಾಗೆ ಆಗುತ್ತಿದೆ. ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ್ಥಾನ ಕೊಟ್ಟಿದ್ದರೂ ಅದನ್ನು ಯಾವಾಗ ವಾಪಸ್ ಕಿತ್ತುಕೊಳ್ಳುತ್ತಾರೋ ಗೊತ್ತಿಲ್ಲ..

ಅವರಿಗೆ ಒಳ್ಳೆಯ ಖಾತೆ ಬೇಕಂತೆ. ಈ ಒಳ್ಳೇಯ ಪದಕ್ಕೆ ಏನು ಅರ್ಥ ಎಂಬುದು ಆ ಶಿವನೇ ಬಲ್ಲ. ಒಟ್ಟಿನಲ್ಲಿ ಅಂತೂ ಇಂತೂ ಯಡಿಯೂರಪ್ಪ ಸರ್ಕಾರದ ಖಾತೆ ಹಂಚಿಕೆಯಾಗಿದೆ. ಎಲ್ಲರೂ ತಮ್ಮ ಪಾಲಿಗೆ ಬಂದ ಪಂಚಾಮೃತ ಸೇವಿಸುತ್ತಿದ್ದರೆ ಸಿ.ಟಿ ರವಿ ಮಾತ್ರ ತಮ್ಮ ಖಾತೆ ಬಗ್ಗೆ ಕ್ಯಾತೆ ತೆಗೆದಿದ್ದಾರೆ.

ಮುಳಬಾಗಿಲಿನ ಪಕ್ಷೇತರ ಶಾಸಕ ಎಚ್.ನಾಗೇಶ್ ಮೈತ್ರಿ ಸರ್ಕಾರದಲ್ಲಿ ಕೊನೆ ಗಳಿಗೆಯಲ್ಲಿ ಸಣ್ಣ ಕೈಗಾರಿಕೆಯ ಸಚಿವನಾಗಿದ್ದರು. ಅವರಿಗೆ ಒಳ್ಳೆಯ ಸಚಿವ ಸ್ಥಾನ ಬೇಕೆಂದು ಆಪರೇಷನ್ ಕಮಲಕ್ಕೆ ಸ್ಪಂದಿಸಿದ್ದರಿಂದ ಅವರಿಗೆ ಅಬಕಾರಿ ಸಚಿವ ಸ್ಥಾನ ಸಿಕ್ಕಿದೆ. ಬಹುಶಃ ಸಿ.ಟಿ ರವಿಯವರು ಕೇಳುತ್ತಿರುವ ಒಳ್ಳೆಯ ಖಾತೆ ಅಂದ್ರೆ ಇದೇ ಇರಬಹುದೇನೋ?

ಸಿ.ಟಿ ರವಿಯವರು ಚಿಕ್ಕಮಗಳೂರಿನಲ್ಲಿ ಟೂರಿಸ್ಟ್ ಗೈಡ್ ಆಗಲು ಸುತಾರಂ ಒಪ್ಪುತ್ತಿಲ್ಲ. ನೋಡೋಣ ಅವರ ಬಂಡಾಯ ಶಮನವಾಗತ್ತೋ ಇಲ್ಲ ಉಲ್ಭಣಿಸುತ್ತೋ ಎಂದು…

ಇದನ್ನೂ ಓದಿ: ‘ನೀಲಿ’ ಕಣ್ಣಿನ ಹುಡುಗ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...