HomeಮುಖಪುಟCAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ...

CAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ…

ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಪಿಎಫ್ಐ ಮತ್ತು ಆರ್.ಎಫ್.ಐ ಪಾತ್ರವಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ NRC ಮತ್ತು CAA ವಿರುದ್ದ ನಡೆಸುತ್ತಿರುವ ಕೆಲವು ಹೋರಾಟಕ್ಕೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಘಟನೆಗಳು ಹಣಕಾಸು ನೆರವು ನೀಡಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ IANS ವರದಿ ಮಾಡಿದೆ ಎಂದು ದಿ ವೈರ್.ಕಾಮ್ ಸುದ್ದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಯನ್ನು ಬ್ರೇಕ್ ಮಾಡಿರುವ IANS ಯಾವುದೇ ಅಧಿಕಾರಿಯ ಹೆಸರನ್ನಾಗಲಿ ಬಹಿರಂಗಪಡಿಸಿಲ್ಲ. ಪಾಪುಲರ್ ಫ್ರೆಂಟ್ ಆಫ್ ಇಂಡಿಯ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಸ್ಥೆಗಳ ವಿರುದ್ಧ ಬಾರಿ ಹಣ ವರ್ಗಾವಣೆಯಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಜೊತೆಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ದುಶ್ಯಂತ್ ಧವೆ, ಇಂದಿರಾ ಜೈಸಿಂಗ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂವರ ಖಾತೆಗಳಿಗೆ ಆರ್.ಟಿ.ಜಿ.ಎಸ್. ಎನ್.ಇ.ಎಫ್.ಟಿ. ಮತ್ತು ಐಎಂಪಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು IANS ವರದಿ ಮಾಡಿದೆ. ಆದರೆ ಈ ಆರೋಪವನ್ನು ಇಂದಿರಾ ಜೈಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಇಂದಿರಾ ಜೈಸಿಂಗ್ ಸಿಎಎ ಮತ್ತು ಎನ್.ಆರ್.ಸಿ ವಿರೋಧಿ ಹೋರಾಟಕ್ಕೆ ಪಿಎಫ್ ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು 73 ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಿದ್ದೇವೆ. ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದು ಎರಡು ತಿಂಗಳಲ್ಲಿ ನಡೆದಿರುವ ವರ್ಗಾವಣೆ ಯಾಗಿದೆ. 27 ಖಾತೆಗಳು ಪಿಎಫ್ಐಗೆ ಸೇರಿದ್ದರೆ, 37 ಖಾತೆಗಳು ಆರ್.ಎಫ್ಐ.ಗೆ ಸೇರಿವೆ. 17 ವಿವಿಧ ಬ್ಯಾಂಕ್ ಖಾತೆಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ ಎಂದು ವರದಿ ಮಾಡಿದೆ.

ಇದೆಲ್ಲಾ ಸುಳ್ಳು

ಪಾಪ್ಯುಲರ್ ಫ್ರಂಟ್ ಈ ಆರೋಪವನ್ನು ಅಲ್ಲಗೆಳೆದಿದ್ದು ನಮ್ಮ ಸಂಘಟನೆಯ ವಿರುದ್ಧದ ವ್ಯವಸ್ಥಿತ ಸಂಚು ಎಂದು ಆರೋಪಿಸಿದೆ. ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅನೀಸ್ ಅಹ್ಮದ್ ಮಾತನಾಡಿ “ಎಲ್ಲಾ ಆರೋಪಗಳು ನಿರಾಧಾರವಾಗಿವೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಆರೋಪಗಳೂ ಕೂಡಾ ಈ ಹಿಂದೆ ನಮ್ಮ ವಿರುದ್ಧ ಮಾಡಿದ್ದ ಆರೋಪಗಳಂತೆಯೇ ಆಗಲಿರುವುದು. ಏಕೆಂದರೆ ಇದನ್ನೂ ಕೂಡಾ ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೌರತ್ವ ವಿರೋಧಿ ಪ್ರತಿಭಟನೆಗಳಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಯಾವುದೋ ಒಂದು ರಹಸ್ಯ ಸಂಸ್ಥೆ ನೀಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ED ಸಂಸ್ಥೆಯ ಹೆಸರು ಪ್ರಸ್ತಾಪಿಸಲಾಗಿದೆಯಾದರೂ, ಅನ್ಯ ಮೂಲಗಳ ಹೆಸರು ಹೇಳಲಾಗುತ್ತಿದೆ. ಈ ವಿಷಯದಲ್ಲಿ ED ಯು ಪಾಪ್ಯುಲರ್ ಫ್ರಂಟ್ ಅನ್ನು ಸಂಪರ್ಕಿಸಿಲ್ಲ, ಅಥವಾ ಈ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಇದು ಯಾವುದೋ ಆಧಾರವಿಲ್ಲದ ಮೂಲಗಳ ವರದಿ ಆಧರಿಸಿ ಊಹಾಪೋಹಗಳನ್ನು ಪ್ರಚಾರಪಡಿಸಲಾಗುತ್ತಿದೆ. ಹಾಗಾಗಿ ಇದನ್ನು ಸಾಬೀತುಪಡಿಸುವುದು, ಈ ಆರೋಪಗಳನ್ನು ಮಾಡುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಹಾದಿಯಾ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ 2017 ರಲ್ಲಿ ಹೋರಾಡಿತ್ತು. ಇದಕ್ಕಾಗಿ ಜನರ ಬಳಿ ತೆರಳಿ ಧನ ಸಹಾಯ ಸಂಗ್ರಹಿಸಿತ್ತು. ಇದೇನು ರಹಸ್ಯವಾಗಿ ನಡೆದಿದ್ದಲ್ಲ. ಈ ಕೇಸಿನ ವಕೀಲರಾಗಿದ್ದ ಕಪಿಲ್ ಸಿಬಲ್, ಇಂದಿರಾ ಜೈಸಿಂಗ್, ದುಷ್ಯಂತ್ ಧವೆ ಮುಂತಾದ ವಕೀಲರ ಫೀಸ್ ಅನ್ನು ಪಾಪ್ಯುಲರ್ ಫ್ರಂಟ್ 2017 ರಲ್ಲಿ ಬ್ಯಾಂಕ್ ಖಾತೆಯ ಮುಖಾಂತರ ವರ್ಗಾವಣೆ ಮಾಡಿತ್ತು. ಇದೀಗ 2017 ರಲ್ಲಿ ಬ್ಯಾಂಕ್ ವರ್ಗಾವಣೆಯಾಗಿರುವ ಹಣವನ್ನು 2019 ರ ಪೌರತ್ವ ಕಾಯ್ದೆ ವಿರೋಧಿ ಗಲಭೆಗಳಿಗೆ ತಳುಕು ಹಾಕುತ್ತಿರುವುದು ನೋಡಿದರೆ, ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪಾಪ್ಯುಲರ್ ಫ್ರಂಟ್ ಮಾತ್ರ ಕಾರಣ ಎಂಬಂತೆ ಬಿಂಬಿಸುವ ಅಭಿಯಾನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...