HomeಮುಖಪುಟCAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ...

CAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ…

ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಪಿಎಫ್ಐ ಮತ್ತು ಆರ್.ಎಫ್.ಐ ಪಾತ್ರವಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ NRC ಮತ್ತು CAA ವಿರುದ್ದ ನಡೆಸುತ್ತಿರುವ ಕೆಲವು ಹೋರಾಟಕ್ಕೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಘಟನೆಗಳು ಹಣಕಾಸು ನೆರವು ನೀಡಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ IANS ವರದಿ ಮಾಡಿದೆ ಎಂದು ದಿ ವೈರ್.ಕಾಮ್ ಸುದ್ದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಯನ್ನು ಬ್ರೇಕ್ ಮಾಡಿರುವ IANS ಯಾವುದೇ ಅಧಿಕಾರಿಯ ಹೆಸರನ್ನಾಗಲಿ ಬಹಿರಂಗಪಡಿಸಿಲ್ಲ. ಪಾಪುಲರ್ ಫ್ರೆಂಟ್ ಆಫ್ ಇಂಡಿಯ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಸ್ಥೆಗಳ ವಿರುದ್ಧ ಬಾರಿ ಹಣ ವರ್ಗಾವಣೆಯಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಜೊತೆಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ದುಶ್ಯಂತ್ ಧವೆ, ಇಂದಿರಾ ಜೈಸಿಂಗ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂವರ ಖಾತೆಗಳಿಗೆ ಆರ್.ಟಿ.ಜಿ.ಎಸ್. ಎನ್.ಇ.ಎಫ್.ಟಿ. ಮತ್ತು ಐಎಂಪಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು IANS ವರದಿ ಮಾಡಿದೆ. ಆದರೆ ಈ ಆರೋಪವನ್ನು ಇಂದಿರಾ ಜೈಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಇಂದಿರಾ ಜೈಸಿಂಗ್ ಸಿಎಎ ಮತ್ತು ಎನ್.ಆರ್.ಸಿ ವಿರೋಧಿ ಹೋರಾಟಕ್ಕೆ ಪಿಎಫ್ ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು 73 ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಿದ್ದೇವೆ. ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದು ಎರಡು ತಿಂಗಳಲ್ಲಿ ನಡೆದಿರುವ ವರ್ಗಾವಣೆ ಯಾಗಿದೆ. 27 ಖಾತೆಗಳು ಪಿಎಫ್ಐಗೆ ಸೇರಿದ್ದರೆ, 37 ಖಾತೆಗಳು ಆರ್.ಎಫ್ಐ.ಗೆ ಸೇರಿವೆ. 17 ವಿವಿಧ ಬ್ಯಾಂಕ್ ಖಾತೆಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ ಎಂದು ವರದಿ ಮಾಡಿದೆ.

ಇದೆಲ್ಲಾ ಸುಳ್ಳು

ಪಾಪ್ಯುಲರ್ ಫ್ರಂಟ್ ಈ ಆರೋಪವನ್ನು ಅಲ್ಲಗೆಳೆದಿದ್ದು ನಮ್ಮ ಸಂಘಟನೆಯ ವಿರುದ್ಧದ ವ್ಯವಸ್ಥಿತ ಸಂಚು ಎಂದು ಆರೋಪಿಸಿದೆ. ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅನೀಸ್ ಅಹ್ಮದ್ ಮಾತನಾಡಿ “ಎಲ್ಲಾ ಆರೋಪಗಳು ನಿರಾಧಾರವಾಗಿವೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಆರೋಪಗಳೂ ಕೂಡಾ ಈ ಹಿಂದೆ ನಮ್ಮ ವಿರುದ್ಧ ಮಾಡಿದ್ದ ಆರೋಪಗಳಂತೆಯೇ ಆಗಲಿರುವುದು. ಏಕೆಂದರೆ ಇದನ್ನೂ ಕೂಡಾ ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೌರತ್ವ ವಿರೋಧಿ ಪ್ರತಿಭಟನೆಗಳಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಯಾವುದೋ ಒಂದು ರಹಸ್ಯ ಸಂಸ್ಥೆ ನೀಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ED ಸಂಸ್ಥೆಯ ಹೆಸರು ಪ್ರಸ್ತಾಪಿಸಲಾಗಿದೆಯಾದರೂ, ಅನ್ಯ ಮೂಲಗಳ ಹೆಸರು ಹೇಳಲಾಗುತ್ತಿದೆ. ಈ ವಿಷಯದಲ್ಲಿ ED ಯು ಪಾಪ್ಯುಲರ್ ಫ್ರಂಟ್ ಅನ್ನು ಸಂಪರ್ಕಿಸಿಲ್ಲ, ಅಥವಾ ಈ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಇದು ಯಾವುದೋ ಆಧಾರವಿಲ್ಲದ ಮೂಲಗಳ ವರದಿ ಆಧರಿಸಿ ಊಹಾಪೋಹಗಳನ್ನು ಪ್ರಚಾರಪಡಿಸಲಾಗುತ್ತಿದೆ. ಹಾಗಾಗಿ ಇದನ್ನು ಸಾಬೀತುಪಡಿಸುವುದು, ಈ ಆರೋಪಗಳನ್ನು ಮಾಡುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಹಾದಿಯಾ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ 2017 ರಲ್ಲಿ ಹೋರಾಡಿತ್ತು. ಇದಕ್ಕಾಗಿ ಜನರ ಬಳಿ ತೆರಳಿ ಧನ ಸಹಾಯ ಸಂಗ್ರಹಿಸಿತ್ತು. ಇದೇನು ರಹಸ್ಯವಾಗಿ ನಡೆದಿದ್ದಲ್ಲ. ಈ ಕೇಸಿನ ವಕೀಲರಾಗಿದ್ದ ಕಪಿಲ್ ಸಿಬಲ್, ಇಂದಿರಾ ಜೈಸಿಂಗ್, ದುಷ್ಯಂತ್ ಧವೆ ಮುಂತಾದ ವಕೀಲರ ಫೀಸ್ ಅನ್ನು ಪಾಪ್ಯುಲರ್ ಫ್ರಂಟ್ 2017 ರಲ್ಲಿ ಬ್ಯಾಂಕ್ ಖಾತೆಯ ಮುಖಾಂತರ ವರ್ಗಾವಣೆ ಮಾಡಿತ್ತು. ಇದೀಗ 2017 ರಲ್ಲಿ ಬ್ಯಾಂಕ್ ವರ್ಗಾವಣೆಯಾಗಿರುವ ಹಣವನ್ನು 2019 ರ ಪೌರತ್ವ ಕಾಯ್ದೆ ವಿರೋಧಿ ಗಲಭೆಗಳಿಗೆ ತಳುಕು ಹಾಕುತ್ತಿರುವುದು ನೋಡಿದರೆ, ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪಾಪ್ಯುಲರ್ ಫ್ರಂಟ್ ಮಾತ್ರ ಕಾರಣ ಎಂಬಂತೆ ಬಿಂಬಿಸುವ ಅಭಿಯಾನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...