HomeಮುಖಪುಟCAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ...

CAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ…

ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಪಿಎಫ್ಐ ಮತ್ತು ಆರ್.ಎಫ್.ಐ ಪಾತ್ರವಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ NRC ಮತ್ತು CAA ವಿರುದ್ದ ನಡೆಸುತ್ತಿರುವ ಕೆಲವು ಹೋರಾಟಕ್ಕೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಘಟನೆಗಳು ಹಣಕಾಸು ನೆರವು ನೀಡಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ IANS ವರದಿ ಮಾಡಿದೆ ಎಂದು ದಿ ವೈರ್.ಕಾಮ್ ಸುದ್ದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಯನ್ನು ಬ್ರೇಕ್ ಮಾಡಿರುವ IANS ಯಾವುದೇ ಅಧಿಕಾರಿಯ ಹೆಸರನ್ನಾಗಲಿ ಬಹಿರಂಗಪಡಿಸಿಲ್ಲ. ಪಾಪುಲರ್ ಫ್ರೆಂಟ್ ಆಫ್ ಇಂಡಿಯ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಸ್ಥೆಗಳ ವಿರುದ್ಧ ಬಾರಿ ಹಣ ವರ್ಗಾವಣೆಯಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಜೊತೆಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ದುಶ್ಯಂತ್ ಧವೆ, ಇಂದಿರಾ ಜೈಸಿಂಗ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂವರ ಖಾತೆಗಳಿಗೆ ಆರ್.ಟಿ.ಜಿ.ಎಸ್. ಎನ್.ಇ.ಎಫ್.ಟಿ. ಮತ್ತು ಐಎಂಪಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು IANS ವರದಿ ಮಾಡಿದೆ. ಆದರೆ ಈ ಆರೋಪವನ್ನು ಇಂದಿರಾ ಜೈಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಇಂದಿರಾ ಜೈಸಿಂಗ್ ಸಿಎಎ ಮತ್ತು ಎನ್.ಆರ್.ಸಿ ವಿರೋಧಿ ಹೋರಾಟಕ್ಕೆ ಪಿಎಫ್ ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು 73 ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಿದ್ದೇವೆ. ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದು ಎರಡು ತಿಂಗಳಲ್ಲಿ ನಡೆದಿರುವ ವರ್ಗಾವಣೆ ಯಾಗಿದೆ. 27 ಖಾತೆಗಳು ಪಿಎಫ್ಐಗೆ ಸೇರಿದ್ದರೆ, 37 ಖಾತೆಗಳು ಆರ್.ಎಫ್ಐ.ಗೆ ಸೇರಿವೆ. 17 ವಿವಿಧ ಬ್ಯಾಂಕ್ ಖಾತೆಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ ಎಂದು ವರದಿ ಮಾಡಿದೆ.

ಇದೆಲ್ಲಾ ಸುಳ್ಳು

ಪಾಪ್ಯುಲರ್ ಫ್ರಂಟ್ ಈ ಆರೋಪವನ್ನು ಅಲ್ಲಗೆಳೆದಿದ್ದು ನಮ್ಮ ಸಂಘಟನೆಯ ವಿರುದ್ಧದ ವ್ಯವಸ್ಥಿತ ಸಂಚು ಎಂದು ಆರೋಪಿಸಿದೆ. ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅನೀಸ್ ಅಹ್ಮದ್ ಮಾತನಾಡಿ “ಎಲ್ಲಾ ಆರೋಪಗಳು ನಿರಾಧಾರವಾಗಿವೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಆರೋಪಗಳೂ ಕೂಡಾ ಈ ಹಿಂದೆ ನಮ್ಮ ವಿರುದ್ಧ ಮಾಡಿದ್ದ ಆರೋಪಗಳಂತೆಯೇ ಆಗಲಿರುವುದು. ಏಕೆಂದರೆ ಇದನ್ನೂ ಕೂಡಾ ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೌರತ್ವ ವಿರೋಧಿ ಪ್ರತಿಭಟನೆಗಳಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಯಾವುದೋ ಒಂದು ರಹಸ್ಯ ಸಂಸ್ಥೆ ನೀಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ED ಸಂಸ್ಥೆಯ ಹೆಸರು ಪ್ರಸ್ತಾಪಿಸಲಾಗಿದೆಯಾದರೂ, ಅನ್ಯ ಮೂಲಗಳ ಹೆಸರು ಹೇಳಲಾಗುತ್ತಿದೆ. ಈ ವಿಷಯದಲ್ಲಿ ED ಯು ಪಾಪ್ಯುಲರ್ ಫ್ರಂಟ್ ಅನ್ನು ಸಂಪರ್ಕಿಸಿಲ್ಲ, ಅಥವಾ ಈ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಇದು ಯಾವುದೋ ಆಧಾರವಿಲ್ಲದ ಮೂಲಗಳ ವರದಿ ಆಧರಿಸಿ ಊಹಾಪೋಹಗಳನ್ನು ಪ್ರಚಾರಪಡಿಸಲಾಗುತ್ತಿದೆ. ಹಾಗಾಗಿ ಇದನ್ನು ಸಾಬೀತುಪಡಿಸುವುದು, ಈ ಆರೋಪಗಳನ್ನು ಮಾಡುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಹಾದಿಯಾ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ 2017 ರಲ್ಲಿ ಹೋರಾಡಿತ್ತು. ಇದಕ್ಕಾಗಿ ಜನರ ಬಳಿ ತೆರಳಿ ಧನ ಸಹಾಯ ಸಂಗ್ರಹಿಸಿತ್ತು. ಇದೇನು ರಹಸ್ಯವಾಗಿ ನಡೆದಿದ್ದಲ್ಲ. ಈ ಕೇಸಿನ ವಕೀಲರಾಗಿದ್ದ ಕಪಿಲ್ ಸಿಬಲ್, ಇಂದಿರಾ ಜೈಸಿಂಗ್, ದುಷ್ಯಂತ್ ಧವೆ ಮುಂತಾದ ವಕೀಲರ ಫೀಸ್ ಅನ್ನು ಪಾಪ್ಯುಲರ್ ಫ್ರಂಟ್ 2017 ರಲ್ಲಿ ಬ್ಯಾಂಕ್ ಖಾತೆಯ ಮುಖಾಂತರ ವರ್ಗಾವಣೆ ಮಾಡಿತ್ತು. ಇದೀಗ 2017 ರಲ್ಲಿ ಬ್ಯಾಂಕ್ ವರ್ಗಾವಣೆಯಾಗಿರುವ ಹಣವನ್ನು 2019 ರ ಪೌರತ್ವ ಕಾಯ್ದೆ ವಿರೋಧಿ ಗಲಭೆಗಳಿಗೆ ತಳುಕು ಹಾಕುತ್ತಿರುವುದು ನೋಡಿದರೆ, ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪಾಪ್ಯುಲರ್ ಫ್ರಂಟ್ ಮಾತ್ರ ಕಾರಣ ಎಂಬಂತೆ ಬಿಂಬಿಸುವ ಅಭಿಯಾನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...