HomeಮುಖಪುಟCAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ...

CAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ…

ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಪಿಎಫ್ಐ ಮತ್ತು ಆರ್.ಎಫ್.ಐ ಪಾತ್ರವಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ NRC ಮತ್ತು CAA ವಿರುದ್ದ ನಡೆಸುತ್ತಿರುವ ಕೆಲವು ಹೋರಾಟಕ್ಕೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಘಟನೆಗಳು ಹಣಕಾಸು ನೆರವು ನೀಡಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ IANS ವರದಿ ಮಾಡಿದೆ ಎಂದು ದಿ ವೈರ್.ಕಾಮ್ ಸುದ್ದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಯನ್ನು ಬ್ರೇಕ್ ಮಾಡಿರುವ IANS ಯಾವುದೇ ಅಧಿಕಾರಿಯ ಹೆಸರನ್ನಾಗಲಿ ಬಹಿರಂಗಪಡಿಸಿಲ್ಲ. ಪಾಪುಲರ್ ಫ್ರೆಂಟ್ ಆಫ್ ಇಂಡಿಯ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಸ್ಥೆಗಳ ವಿರುದ್ಧ ಬಾರಿ ಹಣ ವರ್ಗಾವಣೆಯಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಜೊತೆಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ದುಶ್ಯಂತ್ ಧವೆ, ಇಂದಿರಾ ಜೈಸಿಂಗ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂವರ ಖಾತೆಗಳಿಗೆ ಆರ್.ಟಿ.ಜಿ.ಎಸ್. ಎನ್.ಇ.ಎಫ್.ಟಿ. ಮತ್ತು ಐಎಂಪಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು IANS ವರದಿ ಮಾಡಿದೆ. ಆದರೆ ಈ ಆರೋಪವನ್ನು ಇಂದಿರಾ ಜೈಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಇಂದಿರಾ ಜೈಸಿಂಗ್ ಸಿಎಎ ಮತ್ತು ಎನ್.ಆರ್.ಸಿ ವಿರೋಧಿ ಹೋರಾಟಕ್ಕೆ ಪಿಎಫ್ ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು 73 ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಿದ್ದೇವೆ. ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದು ಎರಡು ತಿಂಗಳಲ್ಲಿ ನಡೆದಿರುವ ವರ್ಗಾವಣೆ ಯಾಗಿದೆ. 27 ಖಾತೆಗಳು ಪಿಎಫ್ಐಗೆ ಸೇರಿದ್ದರೆ, 37 ಖಾತೆಗಳು ಆರ್.ಎಫ್ಐ.ಗೆ ಸೇರಿವೆ. 17 ವಿವಿಧ ಬ್ಯಾಂಕ್ ಖಾತೆಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ ಎಂದು ವರದಿ ಮಾಡಿದೆ.

ಇದೆಲ್ಲಾ ಸುಳ್ಳು

ಪಾಪ್ಯುಲರ್ ಫ್ರಂಟ್ ಈ ಆರೋಪವನ್ನು ಅಲ್ಲಗೆಳೆದಿದ್ದು ನಮ್ಮ ಸಂಘಟನೆಯ ವಿರುದ್ಧದ ವ್ಯವಸ್ಥಿತ ಸಂಚು ಎಂದು ಆರೋಪಿಸಿದೆ. ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅನೀಸ್ ಅಹ್ಮದ್ ಮಾತನಾಡಿ “ಎಲ್ಲಾ ಆರೋಪಗಳು ನಿರಾಧಾರವಾಗಿವೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಆರೋಪಗಳೂ ಕೂಡಾ ಈ ಹಿಂದೆ ನಮ್ಮ ವಿರುದ್ಧ ಮಾಡಿದ್ದ ಆರೋಪಗಳಂತೆಯೇ ಆಗಲಿರುವುದು. ಏಕೆಂದರೆ ಇದನ್ನೂ ಕೂಡಾ ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೌರತ್ವ ವಿರೋಧಿ ಪ್ರತಿಭಟನೆಗಳಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಯಾವುದೋ ಒಂದು ರಹಸ್ಯ ಸಂಸ್ಥೆ ನೀಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ED ಸಂಸ್ಥೆಯ ಹೆಸರು ಪ್ರಸ್ತಾಪಿಸಲಾಗಿದೆಯಾದರೂ, ಅನ್ಯ ಮೂಲಗಳ ಹೆಸರು ಹೇಳಲಾಗುತ್ತಿದೆ. ಈ ವಿಷಯದಲ್ಲಿ ED ಯು ಪಾಪ್ಯುಲರ್ ಫ್ರಂಟ್ ಅನ್ನು ಸಂಪರ್ಕಿಸಿಲ್ಲ, ಅಥವಾ ಈ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಇದು ಯಾವುದೋ ಆಧಾರವಿಲ್ಲದ ಮೂಲಗಳ ವರದಿ ಆಧರಿಸಿ ಊಹಾಪೋಹಗಳನ್ನು ಪ್ರಚಾರಪಡಿಸಲಾಗುತ್ತಿದೆ. ಹಾಗಾಗಿ ಇದನ್ನು ಸಾಬೀತುಪಡಿಸುವುದು, ಈ ಆರೋಪಗಳನ್ನು ಮಾಡುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಹಾದಿಯಾ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ 2017 ರಲ್ಲಿ ಹೋರಾಡಿತ್ತು. ಇದಕ್ಕಾಗಿ ಜನರ ಬಳಿ ತೆರಳಿ ಧನ ಸಹಾಯ ಸಂಗ್ರಹಿಸಿತ್ತು. ಇದೇನು ರಹಸ್ಯವಾಗಿ ನಡೆದಿದ್ದಲ್ಲ. ಈ ಕೇಸಿನ ವಕೀಲರಾಗಿದ್ದ ಕಪಿಲ್ ಸಿಬಲ್, ಇಂದಿರಾ ಜೈಸಿಂಗ್, ದುಷ್ಯಂತ್ ಧವೆ ಮುಂತಾದ ವಕೀಲರ ಫೀಸ್ ಅನ್ನು ಪಾಪ್ಯುಲರ್ ಫ್ರಂಟ್ 2017 ರಲ್ಲಿ ಬ್ಯಾಂಕ್ ಖಾತೆಯ ಮುಖಾಂತರ ವರ್ಗಾವಣೆ ಮಾಡಿತ್ತು. ಇದೀಗ 2017 ರಲ್ಲಿ ಬ್ಯಾಂಕ್ ವರ್ಗಾವಣೆಯಾಗಿರುವ ಹಣವನ್ನು 2019 ರ ಪೌರತ್ವ ಕಾಯ್ದೆ ವಿರೋಧಿ ಗಲಭೆಗಳಿಗೆ ತಳುಕು ಹಾಕುತ್ತಿರುವುದು ನೋಡಿದರೆ, ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪಾಪ್ಯುಲರ್ ಫ್ರಂಟ್ ಮಾತ್ರ ಕಾರಣ ಎಂಬಂತೆ ಬಿಂಬಿಸುವ ಅಭಿಯಾನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...