HomeಮುಖಪುಟCAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ...

CAA, NRC ಹೋರಾಟಕ್ಕೆ ಹಣ ದೇಣಿಗೆ ನೀಡಿದೆಯೆಂಬ ಇಡಿ ಆರೋಪವನ್ನು ತಿರಸ್ಕರಿಸಿದ ಪಿಎಫ್ಐ…

ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಪಿಎಫ್ಐ ಮತ್ತು ಆರ್.ಎಫ್.ಐ ಪಾತ್ರವಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ NRC ಮತ್ತು CAA ವಿರುದ್ದ ನಡೆಸುತ್ತಿರುವ ಕೆಲವು ಹೋರಾಟಕ್ಕೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಘಟನೆಗಳು ಹಣಕಾಸು ನೆರವು ನೀಡಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ IANS ವರದಿ ಮಾಡಿದೆ ಎಂದು ದಿ ವೈರ್.ಕಾಮ್ ಸುದ್ದಿ ಮಾಡಿದೆ.

ಜಾರಿ ನಿರ್ದೇಶನಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿಯನ್ನು ಬ್ರೇಕ್ ಮಾಡಿರುವ IANS ಯಾವುದೇ ಅಧಿಕಾರಿಯ ಹೆಸರನ್ನಾಗಲಿ ಬಹಿರಂಗಪಡಿಸಿಲ್ಲ. ಪಾಪುಲರ್ ಫ್ರೆಂಟ್ ಆಫ್ ಇಂಡಿಯ ಮತ್ತು ರೆಹಬ್ ಫೌಂಡೇಷನ್ ಇಂಡಿಯಾ ಸಂಸ್ಥೆಗಳ ವಿರುದ್ಧ ಬಾರಿ ಹಣ ವರ್ಗಾವಣೆಯಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

ಜೊತೆಗೆ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ದುಶ್ಯಂತ್ ಧವೆ, ಇಂದಿರಾ ಜೈಸಿಂಗ್ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ನೋಂದಣಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೂವರ ಖಾತೆಗಳಿಗೆ ಆರ್.ಟಿ.ಜಿ.ಎಸ್. ಎನ್.ಇ.ಎಫ್.ಟಿ. ಮತ್ತು ಐಎಂಪಿಎಸ್ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು IANS ವರದಿ ಮಾಡಿದೆ. ಆದರೆ ಈ ಆರೋಪವನ್ನು ಇಂದಿರಾ ಜೈಸಿಂಗ್ ನಿರಾಕರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಇಂದಿರಾ ಜೈಸಿಂಗ್ ಸಿಎಎ ಮತ್ತು ಎನ್.ಆರ್.ಸಿ ವಿರೋಧಿ ಹೋರಾಟಕ್ಕೆ ಪಿಎಫ್ ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಯಿಂದ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು 73 ಬ್ಯಾಂಕ್ ಖಾತೆಗಳನ್ನು ಪತ್ತೆ ಮಾಡಿದ್ದೇವೆ. ಸಿಎಎ ಮತ್ತು ಎನ್ಆರ್ ಸಿ ವಿರೋಧಿ ಪ್ರತಿಭಟನೆಗೆ 120 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ. ಇದು ಎರಡು ತಿಂಗಳಲ್ಲಿ ನಡೆದಿರುವ ವರ್ಗಾವಣೆ ಯಾಗಿದೆ. 27 ಖಾತೆಗಳು ಪಿಎಫ್ಐಗೆ ಸೇರಿದ್ದರೆ, 37 ಖಾತೆಗಳು ಆರ್.ಎಫ್ಐ.ಗೆ ಸೇರಿವೆ. 17 ವಿವಿಧ ಬ್ಯಾಂಕ್ ಖಾತೆಗಳಾಗಿವೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ಹೇಳಿವೆ ಎಂದು ವರದಿ ಮಾಡಿದೆ.

ಇದೆಲ್ಲಾ ಸುಳ್ಳು

ಪಾಪ್ಯುಲರ್ ಫ್ರಂಟ್ ಈ ಆರೋಪವನ್ನು ಅಲ್ಲಗೆಳೆದಿದ್ದು ನಮ್ಮ ಸಂಘಟನೆಯ ವಿರುದ್ಧದ ವ್ಯವಸ್ಥಿತ ಸಂಚು ಎಂದು ಆರೋಪಿಸಿದೆ. ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ಅನೀಸ್ ಅಹ್ಮದ್ ಮಾತನಾಡಿ “ಎಲ್ಲಾ ಆರೋಪಗಳು ನಿರಾಧಾರವಾಗಿವೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಆರೋಪಗಳೂ ಕೂಡಾ ಈ ಹಿಂದೆ ನಮ್ಮ ವಿರುದ್ಧ ಮಾಡಿದ್ದ ಆರೋಪಗಳಂತೆಯೇ ಆಗಲಿರುವುದು. ಏಕೆಂದರೆ ಇದನ್ನೂ ಕೂಡಾ ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪೌರತ್ವ ವಿರೋಧಿ ಪ್ರತಿಭಟನೆಗಳಿಗೆ ವಿವಿಧ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ವರದಿಯನ್ನು ಯಾವುದೋ ಒಂದು ರಹಸ್ಯ ಸಂಸ್ಥೆ ನೀಡಿದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ED ಸಂಸ್ಥೆಯ ಹೆಸರು ಪ್ರಸ್ತಾಪಿಸಲಾಗಿದೆಯಾದರೂ, ಅನ್ಯ ಮೂಲಗಳ ಹೆಸರು ಹೇಳಲಾಗುತ್ತಿದೆ. ಈ ವಿಷಯದಲ್ಲಿ ED ಯು ಪಾಪ್ಯುಲರ್ ಫ್ರಂಟ್ ಅನ್ನು ಸಂಪರ್ಕಿಸಿಲ್ಲ, ಅಥವಾ ಈ ಬಗ್ಗೆ ಯಾವುದೇ ಅಧಿಕೃತ ವರದಿಯನ್ನು ಜಾರಿಗೊಳಿಸಿಲ್ಲ. ಹಾಗಾಗಿ ಇದು ಯಾವುದೋ ಆಧಾರವಿಲ್ಲದ ಮೂಲಗಳ ವರದಿ ಆಧರಿಸಿ ಊಹಾಪೋಹಗಳನ್ನು ಪ್ರಚಾರಪಡಿಸಲಾಗುತ್ತಿದೆ. ಹಾಗಾಗಿ ಇದನ್ನು ಸಾಬೀತುಪಡಿಸುವುದು, ಈ ಆರೋಪಗಳನ್ನು ಮಾಡುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಹಾದಿಯಾ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ 2017 ರಲ್ಲಿ ಹೋರಾಡಿತ್ತು. ಇದಕ್ಕಾಗಿ ಜನರ ಬಳಿ ತೆರಳಿ ಧನ ಸಹಾಯ ಸಂಗ್ರಹಿಸಿತ್ತು. ಇದೇನು ರಹಸ್ಯವಾಗಿ ನಡೆದಿದ್ದಲ್ಲ. ಈ ಕೇಸಿನ ವಕೀಲರಾಗಿದ್ದ ಕಪಿಲ್ ಸಿಬಲ್, ಇಂದಿರಾ ಜೈಸಿಂಗ್, ದುಷ್ಯಂತ್ ಧವೆ ಮುಂತಾದ ವಕೀಲರ ಫೀಸ್ ಅನ್ನು ಪಾಪ್ಯುಲರ್ ಫ್ರಂಟ್ 2017 ರಲ್ಲಿ ಬ್ಯಾಂಕ್ ಖಾತೆಯ ಮುಖಾಂತರ ವರ್ಗಾವಣೆ ಮಾಡಿತ್ತು. ಇದೀಗ 2017 ರಲ್ಲಿ ಬ್ಯಾಂಕ್ ವರ್ಗಾವಣೆಯಾಗಿರುವ ಹಣವನ್ನು 2019 ರ ಪೌರತ್ವ ಕಾಯ್ದೆ ವಿರೋಧಿ ಗಲಭೆಗಳಿಗೆ ತಳುಕು ಹಾಕುತ್ತಿರುವುದು ನೋಡಿದರೆ, ಭಾರತದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪಾಪ್ಯುಲರ್ ಫ್ರಂಟ್ ಮಾತ್ರ ಕಾರಣ ಎಂಬಂತೆ ಬಿಂಬಿಸುವ ಅಭಿಯಾನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...