Homeಮುಖಪುಟಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಏಕಾಏಕಿ ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಲಾಕ್‌ಡೌನ್ ವಿಧಿಸಿದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿಳಂಬವಾಗಿದ್ದು, ಶೀಘ್ರದಲ್ಲೇ ಅದನ್ನು ಜಾರಿಗೆ ತರಲಾಗುವುದು ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಸೋಮವಾರ ಹೇಳಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿವೆ.

– ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ.

– ಮಮತಾ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ಸಮುದಾಯಕ್ಕೆ ಸಾಕಷ್ಟು ಹೊಡೆತ ಬಿದ್ದಿರುವುದನ್ನು ನೀವು ನೋಡಿರಬಹುದು. ಈಗ ಇದನ್ನು ಅರಿತುಕೊಂಡಿರುವ ಅವರು, ಸಮಾಜದ ಪ್ರತಿಯೊಬ್ಬ ಸದಸ್ಯರನ್ನು ಒಳಗೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇವರು ಮತ ಬ್ಯಾಂಕ್ ರಾಜಕೀಯವನ್ನು ಮಾತ್ರ ಮಾಡುತ್ತಿದ್ದು, ಅಧಿಕಾರದಲ್ಲಿರಲು ಮಾತ್ರ ರಾಜಕೀಯ ಮಾಡುತ್ತಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

– ದೇಬೇಂದ್ರ ನಾಥ್ ರೇ ಘಟನೆಯಿಂದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ. ಅವರು ಸಾಮಾಜಿಕ ಪ್ರತಿನಿಧಿಯಾಗಿದ್ದರು. ಸರಿಯಾದ ತೀರ್ಮಾನಕ್ಕೆ ಬರಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

– ಪಶ್ಚಿಮ ಬಂಗಾಳದ ಸ್ಥಳೀಯ ಉತ್ಪನ್ನಗಳ ಪಟ್ಟಿಯನ್ನು ತಯಾರಿಸಲು, ಅವರಿಗೆ ಮಾರ್ಗಸೂಚಿ ಮತ್ತು ಯೋಜನೆಯನ್ನು ರೂಪಿಸಲು ನಾನು ನಮ್ಮ ಸಂಸದರಿಗೆ ಕರೆ ನೀಡುತ್ತೇನೆ. ಮೋದಿ ಸರ್ಕಾರವು ಅದನ್ನು ಸರಿಯಾಗಿ ಬ್ರಾಂಡ್ ಮಾಡಿ, ರಾಜ್ಯದ ಸ್ಥಳೀಯ ವ್ಯಾಪಾರಿಗಳಿಗೆ ಸರಿಯಾದ ಮಾರುಕಟ್ಟೆಯನ್ನು ತರುತ್ತದೆ.

– ಆತ್ಮ ನಿರ್ಭರ ಭಾರತ್ ಪ್ಯಾಕೇಜ್ ಅಡಿಯಲ್ಲಿ ಎಫ್‌ಪಿಒ ಮತ್ತು ಕೃಷಿ ಮೂಲಸೌಕರ್ಯಗಳಿಗಾಗಿ 1 ಲಕ್ಷ ಕೋಟಿ ರೂ. ಮೀಸಲಿಟ್ಟು, ನಮ್ಮ ರೈತರಿಗಾಗಿ ಕೋಲ್ಡ್ ಸ್ಟೋರೇಜ್‌ಗಳು ಮತ್ತು ಸಾಮಾನ್ಯ ಸ್ಟೋರೇಜ್‌ಗಳನ್ನು ನಿರ್ಮಿಸಲಾಗುವುದು.

– ಪಶ್ಚಿಮ ಬಂಗಾಳದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನಕ್ಕೆ ಮಮತಾ ಸರ್ಕಾರ ಅವಕಾಶ ನೀಡಿಲ್ಲ. ನಾವು ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ರೈತರಿಗೆ ಈ ಯೋಜನೆಯನ್ನು ಜಾರಿ ಮಾಡುತ್ತೇವೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...