Homeಮುಖಪುಟಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಏಕಾಏಕಿ ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಲಾಕ್‌ಡೌನ್ ವಿಧಿಸಿದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿಳಂಬವಾಗಿದ್ದು, ಶೀಘ್ರದಲ್ಲೇ ಅದನ್ನು ಜಾರಿಗೆ ತರಲಾಗುವುದು ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಸೋಮವಾರ ಹೇಳಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿವೆ.

– ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ.

– ಮಮತಾ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ಸಮುದಾಯಕ್ಕೆ ಸಾಕಷ್ಟು ಹೊಡೆತ ಬಿದ್ದಿರುವುದನ್ನು ನೀವು ನೋಡಿರಬಹುದು. ಈಗ ಇದನ್ನು ಅರಿತುಕೊಂಡಿರುವ ಅವರು, ಸಮಾಜದ ಪ್ರತಿಯೊಬ್ಬ ಸದಸ್ಯರನ್ನು ಒಳಗೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇವರು ಮತ ಬ್ಯಾಂಕ್ ರಾಜಕೀಯವನ್ನು ಮಾತ್ರ ಮಾಡುತ್ತಿದ್ದು, ಅಧಿಕಾರದಲ್ಲಿರಲು ಮಾತ್ರ ರಾಜಕೀಯ ಮಾಡುತ್ತಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

– ದೇಬೇಂದ್ರ ನಾಥ್ ರೇ ಘಟನೆಯಿಂದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ. ಅವರು ಸಾಮಾಜಿಕ ಪ್ರತಿನಿಧಿಯಾಗಿದ್ದರು. ಸರಿಯಾದ ತೀರ್ಮಾನಕ್ಕೆ ಬರಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

– ಪಶ್ಚಿಮ ಬಂಗಾಳದ ಸ್ಥಳೀಯ ಉತ್ಪನ್ನಗಳ ಪಟ್ಟಿಯನ್ನು ತಯಾರಿಸಲು, ಅವರಿಗೆ ಮಾರ್ಗಸೂಚಿ ಮತ್ತು ಯೋಜನೆಯನ್ನು ರೂಪಿಸಲು ನಾನು ನಮ್ಮ ಸಂಸದರಿಗೆ ಕರೆ ನೀಡುತ್ತೇನೆ. ಮೋದಿ ಸರ್ಕಾರವು ಅದನ್ನು ಸರಿಯಾಗಿ ಬ್ರಾಂಡ್ ಮಾಡಿ, ರಾಜ್ಯದ ಸ್ಥಳೀಯ ವ್ಯಾಪಾರಿಗಳಿಗೆ ಸರಿಯಾದ ಮಾರುಕಟ್ಟೆಯನ್ನು ತರುತ್ತದೆ.

– ಆತ್ಮ ನಿರ್ಭರ ಭಾರತ್ ಪ್ಯಾಕೇಜ್ ಅಡಿಯಲ್ಲಿ ಎಫ್‌ಪಿಒ ಮತ್ತು ಕೃಷಿ ಮೂಲಸೌಕರ್ಯಗಳಿಗಾಗಿ 1 ಲಕ್ಷ ಕೋಟಿ ರೂ. ಮೀಸಲಿಟ್ಟು, ನಮ್ಮ ರೈತರಿಗಾಗಿ ಕೋಲ್ಡ್ ಸ್ಟೋರೇಜ್‌ಗಳು ಮತ್ತು ಸಾಮಾನ್ಯ ಸ್ಟೋರೇಜ್‌ಗಳನ್ನು ನಿರ್ಮಿಸಲಾಗುವುದು.

– ಪಶ್ಚಿಮ ಬಂಗಾಳದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನಕ್ಕೆ ಮಮತಾ ಸರ್ಕಾರ ಅವಕಾಶ ನೀಡಿಲ್ಲ. ನಾವು ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ರೈತರಿಗೆ ಈ ಯೋಜನೆಯನ್ನು ಜಾರಿ ಮಾಡುತ್ತೇವೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...