Homeಮುಖಪುಟಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಏಕಾಏಕಿ ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಲಾಕ್‌ಡೌನ್ ವಿಧಿಸಿದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿಳಂಬವಾಗಿದ್ದು, ಶೀಘ್ರದಲ್ಲೇ ಅದನ್ನು ಜಾರಿಗೆ ತರಲಾಗುವುದು ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಸೋಮವಾರ ಹೇಳಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿವೆ.

– ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ.

– ಮಮತಾ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ಸಮುದಾಯಕ್ಕೆ ಸಾಕಷ್ಟು ಹೊಡೆತ ಬಿದ್ದಿರುವುದನ್ನು ನೀವು ನೋಡಿರಬಹುದು. ಈಗ ಇದನ್ನು ಅರಿತುಕೊಂಡಿರುವ ಅವರು, ಸಮಾಜದ ಪ್ರತಿಯೊಬ್ಬ ಸದಸ್ಯರನ್ನು ಒಳಗೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇವರು ಮತ ಬ್ಯಾಂಕ್ ರಾಜಕೀಯವನ್ನು ಮಾತ್ರ ಮಾಡುತ್ತಿದ್ದು, ಅಧಿಕಾರದಲ್ಲಿರಲು ಮಾತ್ರ ರಾಜಕೀಯ ಮಾಡುತ್ತಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

– ದೇಬೇಂದ್ರ ನಾಥ್ ರೇ ಘಟನೆಯಿಂದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ. ಅವರು ಸಾಮಾಜಿಕ ಪ್ರತಿನಿಧಿಯಾಗಿದ್ದರು. ಸರಿಯಾದ ತೀರ್ಮಾನಕ್ಕೆ ಬರಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

– ಪಶ್ಚಿಮ ಬಂಗಾಳದ ಸ್ಥಳೀಯ ಉತ್ಪನ್ನಗಳ ಪಟ್ಟಿಯನ್ನು ತಯಾರಿಸಲು, ಅವರಿಗೆ ಮಾರ್ಗಸೂಚಿ ಮತ್ತು ಯೋಜನೆಯನ್ನು ರೂಪಿಸಲು ನಾನು ನಮ್ಮ ಸಂಸದರಿಗೆ ಕರೆ ನೀಡುತ್ತೇನೆ. ಮೋದಿ ಸರ್ಕಾರವು ಅದನ್ನು ಸರಿಯಾಗಿ ಬ್ರಾಂಡ್ ಮಾಡಿ, ರಾಜ್ಯದ ಸ್ಥಳೀಯ ವ್ಯಾಪಾರಿಗಳಿಗೆ ಸರಿಯಾದ ಮಾರುಕಟ್ಟೆಯನ್ನು ತರುತ್ತದೆ.

– ಆತ್ಮ ನಿರ್ಭರ ಭಾರತ್ ಪ್ಯಾಕೇಜ್ ಅಡಿಯಲ್ಲಿ ಎಫ್‌ಪಿಒ ಮತ್ತು ಕೃಷಿ ಮೂಲಸೌಕರ್ಯಗಳಿಗಾಗಿ 1 ಲಕ್ಷ ಕೋಟಿ ರೂ. ಮೀಸಲಿಟ್ಟು, ನಮ್ಮ ರೈತರಿಗಾಗಿ ಕೋಲ್ಡ್ ಸ್ಟೋರೇಜ್‌ಗಳು ಮತ್ತು ಸಾಮಾನ್ಯ ಸ್ಟೋರೇಜ್‌ಗಳನ್ನು ನಿರ್ಮಿಸಲಾಗುವುದು.

– ಪಶ್ಚಿಮ ಬಂಗಾಳದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನಕ್ಕೆ ಮಮತಾ ಸರ್ಕಾರ ಅವಕಾಶ ನೀಡಿಲ್ಲ. ನಾವು ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ರೈತರಿಗೆ ಈ ಯೋಜನೆಯನ್ನು ಜಾರಿ ಮಾಡುತ್ತೇವೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...