Homeಮುಖಪುಟಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಏಕಾಏಕಿ ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಲಾಕ್‌ಡೌನ್ ವಿಧಿಸಿದ್ದರಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿಳಂಬವಾಗಿದ್ದು, ಶೀಘ್ರದಲ್ಲೇ ಅದನ್ನು ಜಾರಿಗೆ ತರಲಾಗುವುದು ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಸೋಮವಾರ ಹೇಳಿದ್ದಾರೆ.

ಜೆ.ಪಿ.ನಡ್ಡಾ ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿವೆ.

– ಬಿಜೆಪಿ ಮತ್ತು ಮೋದಿ ಜಿ ಅವರ ಮೂಲ ನೀತಿ ಒಳಗೊಳ್ಳುವಿಕೆಯಾಗಿದ್ದು, ಇದರ ಸಾಕಾರವೇ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಆದರೆ ಇತರ ಪಕ್ಷಗಳ ನೀತಿ, ಸಮಾಜವನ್ನು ವಿಭಜಿಸಿ, ಅದನ್ನು ಪ್ರತ್ಯೇಕವಾಗಿರಿಸಿ ಆಳ್ವಿಕೆ ಮಾಡಿ ಎಂಬುದಾಗಿದೆ.

– ಮಮತಾ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ಸಮುದಾಯಕ್ಕೆ ಸಾಕಷ್ಟು ಹೊಡೆತ ಬಿದ್ದಿರುವುದನ್ನು ನೀವು ನೋಡಿರಬಹುದು. ಈಗ ಇದನ್ನು ಅರಿತುಕೊಂಡಿರುವ ಅವರು, ಸಮಾಜದ ಪ್ರತಿಯೊಬ್ಬ ಸದಸ್ಯರನ್ನು ಒಳಗೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ಇವರು ಮತ ಬ್ಯಾಂಕ್ ರಾಜಕೀಯವನ್ನು ಮಾತ್ರ ಮಾಡುತ್ತಿದ್ದು, ಅಧಿಕಾರದಲ್ಲಿರಲು ಮಾತ್ರ ರಾಜಕೀಯ ಮಾಡುತ್ತಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

– ದೇಬೇಂದ್ರ ನಾಥ್ ರೇ ಘಟನೆಯಿಂದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ನೋವುಂಟಾಗಿದೆ. ಅವರು ಸಾಮಾಜಿಕ ಪ್ರತಿನಿಧಿಯಾಗಿದ್ದರು. ಸರಿಯಾದ ತೀರ್ಮಾನಕ್ಕೆ ಬರಲು ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ.

– ಪಶ್ಚಿಮ ಬಂಗಾಳದ ಸ್ಥಳೀಯ ಉತ್ಪನ್ನಗಳ ಪಟ್ಟಿಯನ್ನು ತಯಾರಿಸಲು, ಅವರಿಗೆ ಮಾರ್ಗಸೂಚಿ ಮತ್ತು ಯೋಜನೆಯನ್ನು ರೂಪಿಸಲು ನಾನು ನಮ್ಮ ಸಂಸದರಿಗೆ ಕರೆ ನೀಡುತ್ತೇನೆ. ಮೋದಿ ಸರ್ಕಾರವು ಅದನ್ನು ಸರಿಯಾಗಿ ಬ್ರಾಂಡ್ ಮಾಡಿ, ರಾಜ್ಯದ ಸ್ಥಳೀಯ ವ್ಯಾಪಾರಿಗಳಿಗೆ ಸರಿಯಾದ ಮಾರುಕಟ್ಟೆಯನ್ನು ತರುತ್ತದೆ.

– ಆತ್ಮ ನಿರ್ಭರ ಭಾರತ್ ಪ್ಯಾಕೇಜ್ ಅಡಿಯಲ್ಲಿ ಎಫ್‌ಪಿಒ ಮತ್ತು ಕೃಷಿ ಮೂಲಸೌಕರ್ಯಗಳಿಗಾಗಿ 1 ಲಕ್ಷ ಕೋಟಿ ರೂ. ಮೀಸಲಿಟ್ಟು, ನಮ್ಮ ರೈತರಿಗಾಗಿ ಕೋಲ್ಡ್ ಸ್ಟೋರೇಜ್‌ಗಳು ಮತ್ತು ಸಾಮಾನ್ಯ ಸ್ಟೋರೇಜ್‌ಗಳನ್ನು ನಿರ್ಮಿಸಲಾಗುವುದು.

– ಪಶ್ಚಿಮ ಬಂಗಾಳದಲ್ಲಿ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನಕ್ಕೆ ಮಮತಾ ಸರ್ಕಾರ ಅವಕಾಶ ನೀಡಿಲ್ಲ. ನಾವು ಬಂಗಾಳದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ರೈತರಿಗೆ ಈ ಯೋಜನೆಯನ್ನು ಜಾರಿ ಮಾಡುತ್ತೇವೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...