Homeಚಳವಳಿಸಿಎಎ ಜಾರಿ ವಿಳಂಬ: ನಿಯಮ ರೂಪಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರ

ಸಿಎಎ ಜಾರಿ ವಿಳಂಬ: ನಿಯಮ ರೂಪಿಸುವಲ್ಲಿ ವಿಫಲವಾದ ಕೇಂದ್ರ ಸರ್ಕಾರ

ಸಂಸದೀಯ ಸಂಪ್ರದಾಯದಂತೆ ಕಾಯ್ದೆಯ ಅಧಿಸೂಚನೆ ಹೊರಡಿಸಿದ ದಿನದಿಂದ ಆರು ತಿಂಗಳ ಅವಧಿ ಒಳಗೆ ಕಾಯ್ದೆ ಜಾರಿಗೊಳಿಸಬೇಕು.

- Advertisement -
- Advertisement -

ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ವಿಳಂಬವಾಗಲಿದ್ದು, ತಿದ್ದುಪಡಿ ಕಾಯ್ದೆಯನ್ನು ನಿಗದಿತ ಆರು ತಿಂಗಳ ಅವಧಿಯೊಳಗೆ ನಿಯಮಗಳನ್ನು ರೂಪಿಸುವಲ್ಲಿ ಮತ್ತು ಅರ್ಜಿಯನ್ನು ಅಂತಿಮಗೊಳಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ವಿವಿಧ ವರದಿಗಳನ್ನು ಉಲ್ಲೇಖಿಸಿ thewire.in ತಿಳಿಸಿದೆ.

ಸಂಸದೀಯ ಸಂಪ್ರದಾಯದಂತೆ ಈ ಕಾಯ್ದೆಯ ಅಧಿಸೂಚನೆ ಹೊರಡಿಸಿದ ದಿನದಿಂದ ಆರು ತಿಂಗಳ ಅವಧಿ ಒಳಗೆ ಕಾಯ್ದೆ ಜಾರಿಗೊಳಿಸಬೇಕು. ಜೂನ್ 18ಕ್ಕೆ ಆರು ತಿಂಗಳ ಅವಧಿ ಮುಗಿದಿದೆ ಎಂದು ಜುಲೈ 17 ರಂದು ದಿ ಅಸ್ಸಾ ಟ್ರೈಬುನ್ ವರದಿ ಮಾಡಿದೆ ಎಂದು ಅದು ಹೇಳಿದೆ.

ದಿ ಹಿಂದೂ ಪತ್ರಿಕೆಯ ವರದಿಯನ್ನು ಉಲ್ಲೇಖಿಸಿರುವ ದಿ ವೈರ್ ಗೃಹ ಸಚಿವಾಲಯ ಜನವರಿ 10, 2020ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಜುಲೈ 10ಕ್ಕೆ ನಿಗದಿತ ಅವಧಿ ಮುಗಿದಿದೆ ಎಂದು ತಿಳಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ 1955 ಅನ್ನು ಡಿಸೆಂಬರ್ 10, 2019ರಂದು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನವರಿ 2020 ಅಧಿಸೂಚನೆ ಹೊರಡಿಸಿತ್ತು.

ಹೊಸ ತಿದ್ದುಪಡಿ ಕಾಯ್ದೆಯು ಮುಸ್ಲೀಂ ಬಾಹುಳ್ಯವಿರುವ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಥಾನಿಸ್ಥಾನದ ಧಾರ್ಮಿಕ ಅಲ್ಪಸಂಖ್ಯಾತರಾದ ಹಿಂದೂ, ಸಿಖ್, ಪಾರ್ಸಿ, ಕ್ರಿಶ್ಚಿಯನ್, ಜೈನ್ ಮತ್ತು ಬುದ್ದಿಸ್ಟ್ ಗಳಿಗೆ ಭಾರತದ ಪೌರತ್ವ ನೀಡಲು ಅನುಮತಿಸುತ್ತದೆ.

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ ಭಾರತದಲ್ಲಿ ಮೊದಲ ಬಾರಿಗೆ ಧರ್ಮದ ಆದಾರದ ಮೇಲೆ ಪೌರತ್ವ ನೀಡಲು ಅನುಮತಿಸಲಾಗಿದೆ. ಇದರ ವಿರುದ್ಧ ಅಸ್ಸಾಂ ಸೇರಿದಂತೆ ದೇಶಾದ್ಯಂತ ಭಾರೀ ಪ್ರತಿಭಟನೆಗಳು ವ್ಯಕ್ತವಾದವು. 1985ರ ಅಸ್ಸಾಂ ಒಪ್ಪಂದದ ತತ್ವಗಳನ್ನು ಈ ತಿದ್ದುಪಡಿ ಕಾಯ್ದೆ ಉಲ್ಲಂಘಿಸುತ್ತದೆ ಎಂದು ಪ್ರತಿಭಟನೆ ನಡೆದಿದ್ದವು.

ಅಸ್ಸಾಂ ಟ್ರೈಬೂನ್ ಗೃಹ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿರುವ ವೈರ್, ಅವಧಿ ವಿಸ್ತರಣೆಗೆ ಹೊಸದಾಗಿ ಅನುಮತಿ ಪಡೆಯಲು ಸಿದ್ದತೆ ನಡೆಸಿದೆ. ಆದರೆ ಸಂಸದೀಯ ಅಧೀನ ಶಾಸನ ಸಮಿತಿಯಲ್ಲಿ ಎನ್‌‌ಡಿಎ ಯೇತರ ಪಕ್ಷಗಳು ಬಹುಮತ ಹೊಂದಿರುವುದು ಸರ್ಕಾರಕ್ಕೆ ತೊಡಕಾಗಿದೆ ಎಂದು ವೈರ್ ವರದಿ ತಿಳಿಸಿದೆ.


ಓದಿ: ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...