Homeಮುಖಪುಟಸಿಎಎಯಿಂದ ಮುಸ್ಲಿಮರ ಪೌರತ್ವ ಕಸಿದುಕೊಳ್ಳುವುದಿಲ್ಲ: ಅಮಿತ್ ಶಾ

ಸಿಎಎಯಿಂದ ಮುಸ್ಲಿಮರ ಪೌರತ್ವ ಕಸಿದುಕೊಳ್ಳುವುದಿಲ್ಲ: ಅಮಿತ್ ಶಾ

ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುವಂತೆ ನಾನು ಜನರಿಗೆ ಕರೆ ನೀಡುತ್ತೇನೆ. ಆಗ ನಾವು ನಿಮಗಾಗಿ ಸುವರ್ಣ ಬಾಂಗ್ಲಾವನ್ನು ರಚಿಸುತ್ತೇವೆ...

- Advertisement -
- Advertisement -

ಯಾವುದೇ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿರುವ ಅವರು “ಕಳೆದ 70 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಜನರಿಗೆ ಪೌರತ್ವ ನೀಡಲು ನಾವು ಬಯಸುತ್ತೇವೆ. ಅದಕ್ಕಾಗಿ ಸಿಎಎ ಜಾರಿಗೊಳಿಸಿದ್ದೇವೆ. ವದಂತಿಯನ್ನು ಹರಡುವವರಿಗೆ ಬಲಿಯಾಗಬೇಡಿ” ಎಂದು ತಿಳಿಸಿದ್ದಾರೆ.

ನಾವು ಠಾಕೂರ್‌ನಗರ ರೈಲ್ವೆ ನಿಲ್ದಾಣವನ್ನು ಶ್ರೀಧಮ್ ಠಾಕೂರ್‌ನಗರ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಬಯಸುತ್ತೇವೆ. ಆದರೆ ಮಮತಾ ಸರ್ಕಾರವು ಇದಕ್ಕಾಗಿ ನಮಗೆ ಅನುಮತಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರವನ್ನು 2019 ರಲ್ಲಿ ಆಯ್ಕೆ ಮಾಡಿದರೆ ನಾವು ಪೌರತ್ವ ತಿದ್ದುಪಡಿ ಕಾನೂನು ತರುತ್ತೇವೆ ಎಂದು ಹೇಳಿದ್ದೆವು. ಅದು ಮಾತುವಾ ಸಮಾಜದ ಜನರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ನಾವು 2020 ರಲ್ಲಿ ಸಿಎಎ ತಂದಿದ್ದೇವೆ ಮತ್ತು ಇಂದು ಕಾನೂನು ಅಸ್ತಿತ್ವಕ್ಕೆ ಬಂದಿದೆ. ಇದು ಸಂಸತ್ತು ರಚಿಸಿದ ಕಾನೂನು ಮತ್ತು ಅದನ್ನು ತಡೆಯಲು ಮಮತಾ ಬ್ಯಾನರ್ಜಿಗೆ ಸಾಧ್ಯವಾಗುವುದಿಲ್ಲ, ಏಕೆಂದರೆ ಮುಂಬರುವ ಚುನಾವಣೆಗಳಲ್ಲಿ ಅವರು ಸೋಲಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ನಾವು ಸಿಎಎ ಅನ್ನು ರೂಪಿಸತ್ತಿದ್ದೇವೆ ಮತ್ತು ದೇಶಾದ್ಯಂತ ಕೊರೊನಾ ಲಸಿಕೆ ಪೂರ್ಣಗೊಳಿಸಿದ ಕೂಡಲೇ ನಿಮಗೆಲ್ಲರಿಗೂ ಪೌರತ್ವವನ್ನು ನೀಡುತ್ತೇವೆ ಎಂದು ನಾನು ನಿಮ್ಮೆಲ್ಲರಿಗೂ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಂತೆ ನಾನು ಜನರಿಗೆ ಕರೆ ನೀಡುತ್ತೇನೆ. ಆಗ ನಾವು ನಿಮಗಾಗಿ ಸುವರ್ಣ ಬಾಂಗ್ಲಾವನ್ನು ರಚಿಸುತ್ತೇವೆ ಎಂದು ಶಾ ಹೇಳಿದ್ದಾರೆ.

ಗುರುಚಂದ್ ಠಾಕೂರ್ ಮತ್ತು ಹರಿಶ್ಚಂದ್ರ ಠಾಕೂರ್ ಹೇಳಿದ ಮಾರ್ಗ, ಮೋದಿ ಸರ್ಕಾರ ಆ ಹಾದಿಯಲ್ಲಿ ಸಾಗಿದೆ. ಮೋದಿ ಸರ್ಕಾರ ದಲಿತರ, ಶೋಷಿತ, ಹಿಂದುಳಿದವರ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಸಿಎಎಯನ್ನು ತಪ್ಪಾಗಿ ಅರ್ಥೈಸಿಕೊಳ್ಳುವವರಿಗೆ ನಾನು ಖಂಡಿತವಾಗಿಯೂ ಕಠಿಣ ಉತ್ತರ ನೀಡುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದ್ದರಿಂದ ಇಂದು ನಾನು ಈ ಪವಿತ್ರ ಭೂಮಿಗೆ ಬಂದಿದ್ದೇನೆ. ಕೆಲವು ಸಂದರ್ಭಗಳಿಂದಾಗಿ ನನ್ನ ಪ್ರವಾಸವನ್ನು ರದ್ದುಗೊಳಿಸಿದಾಗ ಮಮತಾ ದೀದಿ ತುಂಬಾ ಸಂತೋಷಪಟ್ಟರು. ಆದರೆ ಅವರು ಚುನಾವಣೆಯಲ್ಲಿ ಸೋಲುವವರೆಗೂ ನಾನು ಮತ್ತೆ ಮತ್ತೆ ಇಲ್ಲಿಗೆ ಬರುತ್ತೇನೆ ಎಂದು ಶಾ ತಿಳಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...