Homeಮುಖಪುಟ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಜೊತೆಗೆ ರಾಜ್ಯದ ಒಂದು ಕುಟುಂಬಕ್ಕೆ ಒಂದು ಉದ್ಯೋಗವನ್ನು ಒದಗಿಸುವುದಾಗಿ ಪಕ್ಷವು ಭರವಸೆ ನೀಡಿದೆ.

“ಸೋನಾರ್ ಬಾಂಗ್ಲಾ ಸಂಕಲ್ಪ ಪತ್ರ” ಎಂದು ಕರೆಯಲ್ಪಡುವ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾವು ಸಿಎಎಯನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಜಾರಿಗೊಳಿಸಲು ನಿರ್ಧರಿಸಿದ್ದೇವೆ, ಜೊತೆಗೆ ಬಡವರಿಗಾಗಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಕಿಸಾನ್ ಅನುಮೋದಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಎಎಯನ್ನು 2019 ರ ಡಿಸೆಂಬರ್‌ನಲ್ಲಿ ಮೋದಿ ಸರ್ಕಾರ ಅಂಗೀಕರಿಸಿದರೂ, ನಿಯಮಗಳನ್ನು ರೂಪಿಸದ ಕಾರಣ ಅದು ಇನ್ನೂ ಜಾರಿಗೆ ಬಂದಿಲ್ಲ. ಪಶ್ಚಿಮ ಬಂಗಾಳದ ದೊಡ್ಡ ವಿಭಾಗ ಸಿಎಎಯನ್ನು ಬೆಂಬಲಿಸುತ್ತಿದ್ದರಾದರೂ, ಚುನಾವಣೆ ನಡೆಯಲಿರುವ ಮತ್ತೊಂದು ರಾಜ್ಯವಾದ ಅಸ್ಸಾಂನಲ್ಲಿ ಸಿಎಎಯನ್ನು ವಿರೋಧಿಸುತ್ತಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ ಬಿಜೆಪಿಯು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಎಎ ವಿಚಾರವಾಗಿ ಎಚ್ಚರಿಕೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ʼಕರ್ನಾಟಕದ ಮಾದರಿʼಯ ರೈತ ಚಳವಳಿಯನ್ನು ಕಟ್ಟಬೇಕಾದ ಸಂದರ್ಭ!

“ಪಕ್ಷವು ಅಕ್ರಮ ಒಳನುಸುಳುವಿಕೆಯ ವಿರುದ್ಧ ಪಕ್ಷವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಒಳನುಸುಳುವಿಕೆ ಮುಕ್ತ ಬಂಗಾಳವನ್ನು ಖಚಿತಪಡಿಸಿಕೊಳ್ಳಲು ಪ್ರತಿ ನಿರಾಶ್ರಿತರ ಕುಟುಂಬಕ್ಕೆ ಐದು ವರ್ಷಗಳ ಕಾಲ ಪ್ರತಿ ವರ್ಷ 10,000 ರೂ.ಗಳನ್ನು ನೇರ ವರ್ಗಾವಣೆಯ ಮೂಲಕ ನೀಡುತ್ತೇವೆ” ಎಂದು ಅಮಿತ್‌ ಶಾ ಹೇಳಿದ್ದಾರೆ. ‘‘ಮಹಿಷ್ಯ, ತಿಲಿ ಮತ್ತು ಇತರ ಹಿಂದೂ ಸಮುದಾಯಗಳಿಗೆ ಒಬಿಸಿ ಮೀಸಲಾತಿ; ಮಾಟುವಾಸ್ ಮತ್ತು ದಳಪತಿ ಸಮುದಾಯಗಳಿಗೆ ಮಾಸಿಕ 3,000 ರೂ. ಮತ್ತು 10 ನೇ ತರಗತಿಯವರೆಗೆ ಶಾಲೆಗಳಲ್ಲಿ ಬಂಗಾಳಿ ಕಡ್ಡಾಯಗೊಳಿಸುವುದಾಗಿ” ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಪಕ್ಷವು ಕೆಜಿಯಿಂದ ಪಿಜಿಗೆ ಬಾಲಕಿಯರಿಗೆ ಉಚಿತ ಶಿಕ್ಷಣ, ಎಲ್ಲಾ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿ ನೀಡುವ ಭರವಸೆ ನೀಡಿತು.

ಕಲೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು 11,000 ಕೋಟಿ ರೂ. ಮೌಲ್ಯದ ಸೋನಾರ್ ಬಾಂಗ್ಲಾ ನಿಧಿ, ನೊಬೆಲ್ ಪ್ರಶಸ್ತಿಯ ಮಾದರಿಯಲ್ಲಿ ಟ್ಯಾಗೋರ್ ಪ್ರಶಸ್ತಿ, ಐಐಟಿಗಳು ಮತ್ತು ಐಐಎಂಗಳಿಗೆ ಸಮನಾಗಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯ ಮಾಡಲು 20,000 ಕೋಟಿ ರೂ., ಈಶ್ವರ್ ಚಂದ್ರ ವಿದ್ಯಾಸಾಗರ್ ನಿಧಿ ಮತ್ತು ಒಂದು ನಗರಕ್ಕೆ ಕೋಲ್ಕತಾ ನಿಧಿ ಬಿಜೆಪಿಯ ಇತರ ಭರವಸೆಗಳಾಗಿವೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...