Homeಮುಖಪುಟ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಜೊತೆಗೆ ರಾಜ್ಯದ ಒಂದು ಕುಟುಂಬಕ್ಕೆ ಒಂದು ಉದ್ಯೋಗವನ್ನು ಒದಗಿಸುವುದಾಗಿ ಪಕ್ಷವು ಭರವಸೆ ನೀಡಿದೆ.

“ಸೋನಾರ್ ಬಾಂಗ್ಲಾ ಸಂಕಲ್ಪ ಪತ್ರ” ಎಂದು ಕರೆಯಲ್ಪಡುವ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾವು ಸಿಎಎಯನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಜಾರಿಗೊಳಿಸಲು ನಿರ್ಧರಿಸಿದ್ದೇವೆ, ಜೊತೆಗೆ ಬಡವರಿಗಾಗಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಕಿಸಾನ್ ಅನುಮೋದಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಎಎಯನ್ನು 2019 ರ ಡಿಸೆಂಬರ್‌ನಲ್ಲಿ ಮೋದಿ ಸರ್ಕಾರ ಅಂಗೀಕರಿಸಿದರೂ, ನಿಯಮಗಳನ್ನು ರೂಪಿಸದ ಕಾರಣ ಅದು ಇನ್ನೂ ಜಾರಿಗೆ ಬಂದಿಲ್ಲ. ಪಶ್ಚಿಮ ಬಂಗಾಳದ ದೊಡ್ಡ ವಿಭಾಗ ಸಿಎಎಯನ್ನು ಬೆಂಬಲಿಸುತ್ತಿದ್ದರಾದರೂ, ಚುನಾವಣೆ ನಡೆಯಲಿರುವ ಮತ್ತೊಂದು ರಾಜ್ಯವಾದ ಅಸ್ಸಾಂನಲ್ಲಿ ಸಿಎಎಯನ್ನು ವಿರೋಧಿಸುತ್ತಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ ಬಿಜೆಪಿಯು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಎಎ ವಿಚಾರವಾಗಿ ಎಚ್ಚರಿಕೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ʼಕರ್ನಾಟಕದ ಮಾದರಿʼಯ ರೈತ ಚಳವಳಿಯನ್ನು ಕಟ್ಟಬೇಕಾದ ಸಂದರ್ಭ!

“ಪಕ್ಷವು ಅಕ್ರಮ ಒಳನುಸುಳುವಿಕೆಯ ವಿರುದ್ಧ ಪಕ್ಷವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಒಳನುಸುಳುವಿಕೆ ಮುಕ್ತ ಬಂಗಾಳವನ್ನು ಖಚಿತಪಡಿಸಿಕೊಳ್ಳಲು ಪ್ರತಿ ನಿರಾಶ್ರಿತರ ಕುಟುಂಬಕ್ಕೆ ಐದು ವರ್ಷಗಳ ಕಾಲ ಪ್ರತಿ ವರ್ಷ 10,000 ರೂ.ಗಳನ್ನು ನೇರ ವರ್ಗಾವಣೆಯ ಮೂಲಕ ನೀಡುತ್ತೇವೆ” ಎಂದು ಅಮಿತ್‌ ಶಾ ಹೇಳಿದ್ದಾರೆ. ‘‘ಮಹಿಷ್ಯ, ತಿಲಿ ಮತ್ತು ಇತರ ಹಿಂದೂ ಸಮುದಾಯಗಳಿಗೆ ಒಬಿಸಿ ಮೀಸಲಾತಿ; ಮಾಟುವಾಸ್ ಮತ್ತು ದಳಪತಿ ಸಮುದಾಯಗಳಿಗೆ ಮಾಸಿಕ 3,000 ರೂ. ಮತ್ತು 10 ನೇ ತರಗತಿಯವರೆಗೆ ಶಾಲೆಗಳಲ್ಲಿ ಬಂಗಾಳಿ ಕಡ್ಡಾಯಗೊಳಿಸುವುದಾಗಿ” ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಪಕ್ಷವು ಕೆಜಿಯಿಂದ ಪಿಜಿಗೆ ಬಾಲಕಿಯರಿಗೆ ಉಚಿತ ಶಿಕ್ಷಣ, ಎಲ್ಲಾ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿ ನೀಡುವ ಭರವಸೆ ನೀಡಿತು.

ಕಲೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು 11,000 ಕೋಟಿ ರೂ. ಮೌಲ್ಯದ ಸೋನಾರ್ ಬಾಂಗ್ಲಾ ನಿಧಿ, ನೊಬೆಲ್ ಪ್ರಶಸ್ತಿಯ ಮಾದರಿಯಲ್ಲಿ ಟ್ಯಾಗೋರ್ ಪ್ರಶಸ್ತಿ, ಐಐಟಿಗಳು ಮತ್ತು ಐಐಎಂಗಳಿಗೆ ಸಮನಾಗಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯ ಮಾಡಲು 20,000 ಕೋಟಿ ರೂ., ಈಶ್ವರ್ ಚಂದ್ರ ವಿದ್ಯಾಸಾಗರ್ ನಿಧಿ ಮತ್ತು ಒಂದು ನಗರಕ್ಕೆ ಕೋಲ್ಕತಾ ನಿಧಿ ಬಿಜೆಪಿಯ ಇತರ ಭರವಸೆಗಳಾಗಿವೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...