Homeಮುಖಪುಟ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಜೊತೆಗೆ ರಾಜ್ಯದ ಒಂದು ಕುಟುಂಬಕ್ಕೆ ಒಂದು ಉದ್ಯೋಗವನ್ನು ಒದಗಿಸುವುದಾಗಿ ಪಕ್ಷವು ಭರವಸೆ ನೀಡಿದೆ.

“ಸೋನಾರ್ ಬಾಂಗ್ಲಾ ಸಂಕಲ್ಪ ಪತ್ರ” ಎಂದು ಕರೆಯಲ್ಪಡುವ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾವು ಸಿಎಎಯನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಜಾರಿಗೊಳಿಸಲು ನಿರ್ಧರಿಸಿದ್ದೇವೆ, ಜೊತೆಗೆ ಬಡವರಿಗಾಗಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಕಿಸಾನ್ ಅನುಮೋದಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಎಎಯನ್ನು 2019 ರ ಡಿಸೆಂಬರ್‌ನಲ್ಲಿ ಮೋದಿ ಸರ್ಕಾರ ಅಂಗೀಕರಿಸಿದರೂ, ನಿಯಮಗಳನ್ನು ರೂಪಿಸದ ಕಾರಣ ಅದು ಇನ್ನೂ ಜಾರಿಗೆ ಬಂದಿಲ್ಲ. ಪಶ್ಚಿಮ ಬಂಗಾಳದ ದೊಡ್ಡ ವಿಭಾಗ ಸಿಎಎಯನ್ನು ಬೆಂಬಲಿಸುತ್ತಿದ್ದರಾದರೂ, ಚುನಾವಣೆ ನಡೆಯಲಿರುವ ಮತ್ತೊಂದು ರಾಜ್ಯವಾದ ಅಸ್ಸಾಂನಲ್ಲಿ ಸಿಎಎಯನ್ನು ವಿರೋಧಿಸುತ್ತಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ ಬಿಜೆಪಿಯು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಎಎ ವಿಚಾರವಾಗಿ ಎಚ್ಚರಿಕೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ʼಕರ್ನಾಟಕದ ಮಾದರಿʼಯ ರೈತ ಚಳವಳಿಯನ್ನು ಕಟ್ಟಬೇಕಾದ ಸಂದರ್ಭ!

“ಪಕ್ಷವು ಅಕ್ರಮ ಒಳನುಸುಳುವಿಕೆಯ ವಿರುದ್ಧ ಪಕ್ಷವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಒಳನುಸುಳುವಿಕೆ ಮುಕ್ತ ಬಂಗಾಳವನ್ನು ಖಚಿತಪಡಿಸಿಕೊಳ್ಳಲು ಪ್ರತಿ ನಿರಾಶ್ರಿತರ ಕುಟುಂಬಕ್ಕೆ ಐದು ವರ್ಷಗಳ ಕಾಲ ಪ್ರತಿ ವರ್ಷ 10,000 ರೂ.ಗಳನ್ನು ನೇರ ವರ್ಗಾವಣೆಯ ಮೂಲಕ ನೀಡುತ್ತೇವೆ” ಎಂದು ಅಮಿತ್‌ ಶಾ ಹೇಳಿದ್ದಾರೆ. ‘‘ಮಹಿಷ್ಯ, ತಿಲಿ ಮತ್ತು ಇತರ ಹಿಂದೂ ಸಮುದಾಯಗಳಿಗೆ ಒಬಿಸಿ ಮೀಸಲಾತಿ; ಮಾಟುವಾಸ್ ಮತ್ತು ದಳಪತಿ ಸಮುದಾಯಗಳಿಗೆ ಮಾಸಿಕ 3,000 ರೂ. ಮತ್ತು 10 ನೇ ತರಗತಿಯವರೆಗೆ ಶಾಲೆಗಳಲ್ಲಿ ಬಂಗಾಳಿ ಕಡ್ಡಾಯಗೊಳಿಸುವುದಾಗಿ” ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಪಕ್ಷವು ಕೆಜಿಯಿಂದ ಪಿಜಿಗೆ ಬಾಲಕಿಯರಿಗೆ ಉಚಿತ ಶಿಕ್ಷಣ, ಎಲ್ಲಾ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿ ನೀಡುವ ಭರವಸೆ ನೀಡಿತು.

ಕಲೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು 11,000 ಕೋಟಿ ರೂ. ಮೌಲ್ಯದ ಸೋನಾರ್ ಬಾಂಗ್ಲಾ ನಿಧಿ, ನೊಬೆಲ್ ಪ್ರಶಸ್ತಿಯ ಮಾದರಿಯಲ್ಲಿ ಟ್ಯಾಗೋರ್ ಪ್ರಶಸ್ತಿ, ಐಐಟಿಗಳು ಮತ್ತು ಐಐಎಂಗಳಿಗೆ ಸಮನಾಗಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯ ಮಾಡಲು 20,000 ಕೋಟಿ ರೂ., ಈಶ್ವರ್ ಚಂದ್ರ ವಿದ್ಯಾಸಾಗರ್ ನಿಧಿ ಮತ್ತು ಒಂದು ನಗರಕ್ಕೆ ಕೋಲ್ಕತಾ ನಿಧಿ ಬಿಜೆಪಿಯ ಇತರ ಭರವಸೆಗಳಾಗಿವೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...