Homeಮುಖಪುಟ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಜೊತೆಗೆ ರಾಜ್ಯದ ಒಂದು ಕುಟುಂಬಕ್ಕೆ ಒಂದು ಉದ್ಯೋಗವನ್ನು ಒದಗಿಸುವುದಾಗಿ ಪಕ್ಷವು ಭರವಸೆ ನೀಡಿದೆ.

“ಸೋನಾರ್ ಬಾಂಗ್ಲಾ ಸಂಕಲ್ಪ ಪತ್ರ” ಎಂದು ಕರೆಯಲ್ಪಡುವ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾವು ಸಿಎಎಯನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಜಾರಿಗೊಳಿಸಲು ನಿರ್ಧರಿಸಿದ್ದೇವೆ, ಜೊತೆಗೆ ಬಡವರಿಗಾಗಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಕಿಸಾನ್ ಅನುಮೋದಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಎಎಯನ್ನು 2019 ರ ಡಿಸೆಂಬರ್‌ನಲ್ಲಿ ಮೋದಿ ಸರ್ಕಾರ ಅಂಗೀಕರಿಸಿದರೂ, ನಿಯಮಗಳನ್ನು ರೂಪಿಸದ ಕಾರಣ ಅದು ಇನ್ನೂ ಜಾರಿಗೆ ಬಂದಿಲ್ಲ. ಪಶ್ಚಿಮ ಬಂಗಾಳದ ದೊಡ್ಡ ವಿಭಾಗ ಸಿಎಎಯನ್ನು ಬೆಂಬಲಿಸುತ್ತಿದ್ದರಾದರೂ, ಚುನಾವಣೆ ನಡೆಯಲಿರುವ ಮತ್ತೊಂದು ರಾಜ್ಯವಾದ ಅಸ್ಸಾಂನಲ್ಲಿ ಸಿಎಎಯನ್ನು ವಿರೋಧಿಸುತ್ತಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ ಬಿಜೆಪಿಯು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಎಎ ವಿಚಾರವಾಗಿ ಎಚ್ಚರಿಕೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ʼಕರ್ನಾಟಕದ ಮಾದರಿʼಯ ರೈತ ಚಳವಳಿಯನ್ನು ಕಟ್ಟಬೇಕಾದ ಸಂದರ್ಭ!

“ಪಕ್ಷವು ಅಕ್ರಮ ಒಳನುಸುಳುವಿಕೆಯ ವಿರುದ್ಧ ಪಕ್ಷವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಒಳನುಸುಳುವಿಕೆ ಮುಕ್ತ ಬಂಗಾಳವನ್ನು ಖಚಿತಪಡಿಸಿಕೊಳ್ಳಲು ಪ್ರತಿ ನಿರಾಶ್ರಿತರ ಕುಟುಂಬಕ್ಕೆ ಐದು ವರ್ಷಗಳ ಕಾಲ ಪ್ರತಿ ವರ್ಷ 10,000 ರೂ.ಗಳನ್ನು ನೇರ ವರ್ಗಾವಣೆಯ ಮೂಲಕ ನೀಡುತ್ತೇವೆ” ಎಂದು ಅಮಿತ್‌ ಶಾ ಹೇಳಿದ್ದಾರೆ. ‘‘ಮಹಿಷ್ಯ, ತಿಲಿ ಮತ್ತು ಇತರ ಹಿಂದೂ ಸಮುದಾಯಗಳಿಗೆ ಒಬಿಸಿ ಮೀಸಲಾತಿ; ಮಾಟುವಾಸ್ ಮತ್ತು ದಳಪತಿ ಸಮುದಾಯಗಳಿಗೆ ಮಾಸಿಕ 3,000 ರೂ. ಮತ್ತು 10 ನೇ ತರಗತಿಯವರೆಗೆ ಶಾಲೆಗಳಲ್ಲಿ ಬಂಗಾಳಿ ಕಡ್ಡಾಯಗೊಳಿಸುವುದಾಗಿ” ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಪಕ್ಷವು ಕೆಜಿಯಿಂದ ಪಿಜಿಗೆ ಬಾಲಕಿಯರಿಗೆ ಉಚಿತ ಶಿಕ್ಷಣ, ಎಲ್ಲಾ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿ ನೀಡುವ ಭರವಸೆ ನೀಡಿತು.

ಕಲೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು 11,000 ಕೋಟಿ ರೂ. ಮೌಲ್ಯದ ಸೋನಾರ್ ಬಾಂಗ್ಲಾ ನಿಧಿ, ನೊಬೆಲ್ ಪ್ರಶಸ್ತಿಯ ಮಾದರಿಯಲ್ಲಿ ಟ್ಯಾಗೋರ್ ಪ್ರಶಸ್ತಿ, ಐಐಟಿಗಳು ಮತ್ತು ಐಐಎಂಗಳಿಗೆ ಸಮನಾಗಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯ ಮಾಡಲು 20,000 ಕೋಟಿ ರೂ., ಈಶ್ವರ್ ಚಂದ್ರ ವಿದ್ಯಾಸಾಗರ್ ನಿಧಿ ಮತ್ತು ಒಂದು ನಗರಕ್ಕೆ ಕೋಲ್ಕತಾ ನಿಧಿ ಬಿಜೆಪಿಯ ಇತರ ಭರವಸೆಗಳಾಗಿವೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....