Homeಮುಖಪುಟ‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

‘ಮೊದಲ ಕ್ಯಾಬಿನೆಟ್ ಸಭೆಯಲ್ಲೆ ಸಿಎಎ ಜಾರಿ’- ಪಶ್ಚಿಮ ಬಂಗಾಳ ಬಿಜೆಪಿ ಪ್ರಣಾಳಿಕೆ ಭರವಸೆ

- Advertisement -
- Advertisement -

ಪಶ್ಚಿಮ ಬಂಗಾಳಕ್ಕೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಪಕ್ಷವು ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಜೊತೆಗೆ ರಾಜ್ಯದ ಒಂದು ಕುಟುಂಬಕ್ಕೆ ಒಂದು ಉದ್ಯೋಗವನ್ನು ಒದಗಿಸುವುದಾಗಿ ಪಕ್ಷವು ಭರವಸೆ ನೀಡಿದೆ.

“ಸೋನಾರ್ ಬಾಂಗ್ಲಾ ಸಂಕಲ್ಪ ಪತ್ರ” ಎಂದು ಕರೆಯಲ್ಪಡುವ ಪ್ರಣಾಳಿಕೆಯನ್ನು ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾವು ಸಿಎಎಯನ್ನು ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಜಾರಿಗೊಳಿಸಲು ನಿರ್ಧರಿಸಿದ್ದೇವೆ, ಜೊತೆಗೆ ಬಡವರಿಗಾಗಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಕಿಸಾನ್ ಅನುಮೋದಿಸುತ್ತೇವೆ” ಎಂದು ಹೇಳಿದ್ದಾರೆ.

ಸಿಎಎಯನ್ನು 2019 ರ ಡಿಸೆಂಬರ್‌ನಲ್ಲಿ ಮೋದಿ ಸರ್ಕಾರ ಅಂಗೀಕರಿಸಿದರೂ, ನಿಯಮಗಳನ್ನು ರೂಪಿಸದ ಕಾರಣ ಅದು ಇನ್ನೂ ಜಾರಿಗೆ ಬಂದಿಲ್ಲ. ಪಶ್ಚಿಮ ಬಂಗಾಳದ ದೊಡ್ಡ ವಿಭಾಗ ಸಿಎಎಯನ್ನು ಬೆಂಬಲಿಸುತ್ತಿದ್ದರಾದರೂ, ಚುನಾವಣೆ ನಡೆಯಲಿರುವ ಮತ್ತೊಂದು ರಾಜ್ಯವಾದ ಅಸ್ಸಾಂನಲ್ಲಿ ಸಿಎಎಯನ್ನು ವಿರೋಧಿಸುತ್ತಿರುವವರು ಹೆಚ್ಚಾಗಿದ್ದಾರೆ. ಹೀಗಾಗಿ ಬಿಜೆಪಿಯು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಎಎ ವಿಚಾರವಾಗಿ ಎಚ್ಚರಿಕೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ʼಕರ್ನಾಟಕದ ಮಾದರಿʼಯ ರೈತ ಚಳವಳಿಯನ್ನು ಕಟ್ಟಬೇಕಾದ ಸಂದರ್ಭ!

“ಪಕ್ಷವು ಅಕ್ರಮ ಒಳನುಸುಳುವಿಕೆಯ ವಿರುದ್ಧ ಪಕ್ಷವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಒಳನುಸುಳುವಿಕೆ ಮುಕ್ತ ಬಂಗಾಳವನ್ನು ಖಚಿತಪಡಿಸಿಕೊಳ್ಳಲು ಪ್ರತಿ ನಿರಾಶ್ರಿತರ ಕುಟುಂಬಕ್ಕೆ ಐದು ವರ್ಷಗಳ ಕಾಲ ಪ್ರತಿ ವರ್ಷ 10,000 ರೂ.ಗಳನ್ನು ನೇರ ವರ್ಗಾವಣೆಯ ಮೂಲಕ ನೀಡುತ್ತೇವೆ” ಎಂದು ಅಮಿತ್‌ ಶಾ ಹೇಳಿದ್ದಾರೆ. ‘‘ಮಹಿಷ್ಯ, ತಿಲಿ ಮತ್ತು ಇತರ ಹಿಂದೂ ಸಮುದಾಯಗಳಿಗೆ ಒಬಿಸಿ ಮೀಸಲಾತಿ; ಮಾಟುವಾಸ್ ಮತ್ತು ದಳಪತಿ ಸಮುದಾಯಗಳಿಗೆ ಮಾಸಿಕ 3,000 ರೂ. ಮತ್ತು 10 ನೇ ತರಗತಿಯವರೆಗೆ ಶಾಲೆಗಳಲ್ಲಿ ಬಂಗಾಳಿ ಕಡ್ಡಾಯಗೊಳಿಸುವುದಾಗಿ” ಅಮಿತ್‌ ಶಾ ಭರವಸೆ ನೀಡಿದ್ದಾರೆ.

ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಪಕ್ಷವು ಕೆಜಿಯಿಂದ ಪಿಜಿಗೆ ಬಾಲಕಿಯರಿಗೆ ಉಚಿತ ಶಿಕ್ಷಣ, ಎಲ್ಲಾ ಮಹಿಳೆಯರಿಗೆ ಉಚಿತ ಸಾರ್ವಜನಿಕ ಸಾರಿಗೆ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ 33% ಮೀಸಲಾತಿ ನೀಡುವ ಭರವಸೆ ನೀಡಿತು.

ಕಲೆ ಮತ್ತು ಸಾಹಿತ್ಯವನ್ನು ಉತ್ತೇಜಿಸಲು 11,000 ಕೋಟಿ ರೂ. ಮೌಲ್ಯದ ಸೋನಾರ್ ಬಾಂಗ್ಲಾ ನಿಧಿ, ನೊಬೆಲ್ ಪ್ರಶಸ್ತಿಯ ಮಾದರಿಯಲ್ಲಿ ಟ್ಯಾಗೋರ್ ಪ್ರಶಸ್ತಿ, ಐಐಟಿಗಳು ಮತ್ತು ಐಐಎಂಗಳಿಗೆ ಸಮನಾಗಿ ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯ ಮಾಡಲು 20,000 ಕೋಟಿ ರೂ., ಈಶ್ವರ್ ಚಂದ್ರ ವಿದ್ಯಾಸಾಗರ್ ನಿಧಿ ಮತ್ತು ಒಂದು ನಗರಕ್ಕೆ ಕೋಲ್ಕತಾ ನಿಧಿ ಬಿಜೆಪಿಯ ಇತರ ಭರವಸೆಗಳಾಗಿವೆ.

ಇದನ್ನೂ ಓದಿ: ‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...