HomeಮುಖಪುಟCAA ಅಂತಿಮ ಕರಡು ಮಾ.30ರೊಳಗೆ ಸಿದ್ದವಾಗಲಿದೆ: ಸಚಿವ ಅಜಯ್ ಮಿಶ್ರಾ

CAA ಅಂತಿಮ ಕರಡು ಮಾ.30ರೊಳಗೆ ಸಿದ್ದವಾಗಲಿದೆ: ಸಚಿವ ಅಜಯ್ ಮಿಶ್ರಾ

- Advertisement -
- Advertisement -

ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು 2024ರ ಮಾ.30 ರೊಳಗೆ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭಾನುವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ದಲಿತ ಮಟುವಾ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅಜಯ್ ಮಿಶ್ರಾ, ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮಾಟುವಾ ಸಮುದಾಯದ ಜನರು ವಿಭಜನೆಯ ನಂತರ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತದೆ. ಮಾಟುವಾಗಳಿಂದ ಪೌರತ್ವದ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮುಂದಿನ ವರ್ಷ ಮಾರ್ಚ್ ವೇಳೆಗೆ ಸಿಎಎಯ ಅಂತಿಮ ಕರಡು ಜಾರಿಗೆ ಬರಲು ಸಿದ್ಧವಾಗಲಿದೆ ಎಂದು ಉತ್ತರಪ್ರದೇಶದ ಬಿಜೆಪಿ ಸಂಸದರು ಕೂಡ ಆಗಿರುವ ಅಜಯ್‌ ಮಿಶ್ರಾ, ಠಾಕೂರ್‌ ನಗರದಲ್ಲಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಟಿಎಂಸಿ ರಾಜ್ಯಸಭಾ ಸಂಸದ ಸಂತಾನು ಸೇನ್, ಬಿಜೆಪಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಮಟುವಾ ಸಮುದಾಯ ಮತ್ತು ಸಿಎಎ ನೆನಪಾಗುತ್ತದೆ. ಕೇಸರಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಗೆ ತರಲು ಸಾಧ್ಯವಾಗುವುದಿಲ್ಲ. 2024ರ ಚುನಾವಣೆಯಲ್ಲಿ ಕೇಸರಿ ಪಕ್ಷವು ಎಲ್ಲರಿಂದ ತಿರಸ್ಕರಿಸಲ್ಪಡುತ್ತದೆ. ಬಿಜೆಪಿಯ ಸುಳ್ಳು ಹೇಳಿಕೆಗಳನ್ನು ಮಟುವಾ ಸಮುದಾಯದ ಜನರು ಮತ್ತು ಇತರ ಸಮುದಾಯದ ಜನರು ಅರಿತಿದ್ದಾರೆ ಎಂದು ಹೇಳಿದ್ದಾರೆ.

ಮಟುವಾ ಸಮುದಾಯ ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 6 ಸಂಸದೀಯ ಸ್ಥಾನಗಳನ್ನು ಹೊಂದಿರುವ ಪರಿಶಿಷ್ಟ ಜಾತಿ ಗುಂಪು. 2001ರ ಜನಗಣತಿಯ ಪ್ರಕಾರ ಇವರು ರಾಜ್ಯದಲ್ಲಿ 17.4 ಶೇಕಡಾ ಜನಸಂಖ್ಯೆಯನ್ನು ಒಳಗೊಂಡಿದ್ದಾರೆ. ಪೌರತ್ವ ಪಡೆಯುವುದು ಈ ನಿರಾಶ್ರಿತ ಸಮುದಾಯದ ಬಹುಕಾಲದ ಬೇಡಿಕೆಗಳಲ್ಲಿ ಒಂದಾಗಿದೆ. ಅವರ ಬೆಂಬಲವನ್ನು ಪಡೆಯುವ ಪ್ರಯತ್ನದಲ್ಲಿ ಬಿಜೆಪಿ ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್‌ನಲ್ಲಿ ಸಿಎಎ ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು.

ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಸಿಎಎ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಭಾರತಕ್ಕೆ ಪ್ರವೇಶಿಸಿದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡುವುದಾಗಿದೆ. ಪ್ರಾಸ್ತವಿತ ಕಾಯ್ದೆಯು ದೇಶದಲ್ಲಿ ಭಾರೀ ಜನ ವಿರೋಧಕ್ಕೆ ಕಾರಣವಾಗಿತ್ತು.

ಇದನ್ನು ಓದಿ: ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...