Homeಮುಖಪುಟಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

ಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದು, ಕಾಯ್ದೆಯನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಹೇಳಿಕೆಯನ್ನು ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್‌, ಈ ಕಾನೂನಿನ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹೆಚ್ಚಿನ ಸಂಖ್ಯೆಯ ಬಡ ಅಲ್ಪಸಂಖ್ಯಾತರು ಪ್ರವಾಹದ ರೀತಿ ಭಾರತಕ್ಕೆ ಬರಲು ಬಾಗಿಲು ತೆರೆದಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಡ ವಲಸಿಗರಿಗೆ ಇಲ್ಲಿ ಮನೆ ಮತ್ತು ಉದ್ಯೋಗಗಳನ್ನು ನೀಡುವ ಮೂಲಕ ನಮ್ಮ ಜನರ ಹಣವನ್ನು ಖರ್ಚು ಮಾಡಲು ಬಿಜೆಪಿ ಬಯಸಿದೆ ಎಂದು ಹೇಳಿದ್ದಾರೆ.

ನೆರೆಯ ರಾಷ್ಟ್ರಗಳ ಬಡ ಅಲ್ಪಸಂಖ್ಯಾತರು ಭಾರತದಲ್ಲಿ ನೆಲೆಯೂರುವುದರಿಂದ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಲಾಭವಾಗಲಿದೆ. ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ ಮಾಡಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ. ದೇಶವು ಸಿಎಎ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ ಮತ್ತು ಕಾನೂನನ್ನು ರದ್ದುಗೊಳಿಸದಿದ್ದರೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಅವರು ಜನರಿಗೆ ಮನವಿಯನ್ನು ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಇದನ್ನು ಓದಿ: ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...