Homeಮುಖಪುಟಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

ಸಿಎಎ ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ: ಕೇಜ್ರಿವಾಲ್ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದು, ಕಾಯ್ದೆಯನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವಿಡಿಯೋ ಹೇಳಿಕೆಯನ್ನು ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್‌, ಈ ಕಾನೂನಿನ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಹೆಚ್ಚಿನ ಸಂಖ್ಯೆಯ ಬಡ ಅಲ್ಪಸಂಖ್ಯಾತರು ಪ್ರವಾಹದ ರೀತಿ ಭಾರತಕ್ಕೆ ಬರಲು ಬಾಗಿಲು ತೆರೆದಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಡ ವಲಸಿಗರಿಗೆ ಇಲ್ಲಿ ಮನೆ ಮತ್ತು ಉದ್ಯೋಗಗಳನ್ನು ನೀಡುವ ಮೂಲಕ ನಮ್ಮ ಜನರ ಹಣವನ್ನು ಖರ್ಚು ಮಾಡಲು ಬಿಜೆಪಿ ಬಯಸಿದೆ ಎಂದು ಹೇಳಿದ್ದಾರೆ.

ನೆರೆಯ ರಾಷ್ಟ್ರಗಳ ಬಡ ಅಲ್ಪಸಂಖ್ಯಾತರು ಭಾರತದಲ್ಲಿ ನೆಲೆಯೂರುವುದರಿಂದ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಲಾಭವಾಗಲಿದೆ. ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ ಮಾಡಿರುವುದು ಬಿಜೆಪಿಯ ಕೊಳಕು ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ. ದೇಶವು ಸಿಎಎ ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತದೆ ಮತ್ತು ಕಾನೂನನ್ನು ರದ್ದುಗೊಳಿಸದಿದ್ದರೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಅವರು ಜನರಿಗೆ ಮನವಿಯನ್ನು ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

ಇದನ್ನು ಓದಿ: ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...