Homeಮುಖಪುಟಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

ಯಾವುದೇ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ...

- Advertisement -
- Advertisement -

ದೇಶಾದ್ಯಂತ ಕೊರೊನಾ ಲಸಿಕೆ ಹಾಕುವುದು ಪೂರ್ಣಗೊಂಡ ಕೂಡಲೇ ಸಿಎಎ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿರುವ ಅವರು “ಹೊಸ ಪೌರತ್ವ ಕಾನೂನನ್ನು ತರುವುದಾಗಿ ಮೋದಿ ಸರ್ಕಾರ 2018 ರಲ್ಲಿ ಭರವಸೆ ನೀಡಿತ್ತು ಮತ್ತು 2019 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ ಅದನ್ನು ಕಾನೂನು ಮಾಡಿತು. ಆದರೆ 2020 ರಲ್ಲಿ ದೇಶವು COVID-19 ಸಾಂಕ್ರಾಮಿಕಕ್ಕೆ ಒಳಗಾದ ನಂತರ ಸಿಎಎ ಅನುಷ್ಠಾನವನ್ನು ತಡೆಹಿಡಿಯಬೇಕಾಯಿತು” ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರವನ್ನು 2019 ರಲ್ಲಿ ಆಯ್ಕೆ ಮಾಡಿದರೆ ನಾವು ಪೌರತ್ವ ತಿದ್ದುಪಡಿ ಕಾನೂನು ತರುತ್ತೇವೆ ಎಂದು ಹೇಳಿದ್ದೆವು. ಅದು ಮಾತುವಾ ಸಮಾಜದ ಜನರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ನಾವು 2020 ರಲ್ಲಿ ಸಿಎಎ ತಂದಿದ್ದೇವೆ ಮತ್ತು ಇಂದು ಕಾನೂನು ಅಸ್ತಿತ್ವಕ್ಕೆ ಬಂದಿದೆ. ಇದು ಸಂಸತ್ತು ರಚಿಸಿದ ಕಾನೂನು ಮತ್ತು ಅದನ್ನು ತಡೆಯಲು ಮಮತಾ ಬ್ಯಾನರ್ಜಿಗೆ ಸಾಧ್ಯವಾಗುವುದಿಲ್ಲ, ಏಕೆಂದರೆ ಮುಂಬರುವ ಚುನಾವಣೆಗಳಲ್ಲಿ ಅವರು ಸೋಲಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮಾತುವ ಮೂಲತಃ ಹಿಂದಿನ ಪೂರ್ವ ಪಾಕಿಸ್ತಾನದ ಸಮುದಾಯವಾಗಿದೆ. ವಿಭಜನೆಯ ಸಮಯದಲ್ಲಿ ಮತ್ತು ಬಾಂಗ್ಲಾದೇಶದ ರಚನೆಯ ನಂತರ ಭಾರತಕ್ಕೆ ವಲಸೆ ಬಂದ ಒಂದು ಭಾಗ ಹಿಂದೂಗಳಿಗೆ ಭಾರತೀಯ ಪೌರತ್ವ ನೀಡಲಾಗಿದೆ ಆದರೆ ಜನಸಂಖ್ಯೆಯ ಗಣನೀಯ ಭಾಗವು ಇನ್ನೂ ಪೌರತ್ವಕ್ಕಾಗಿ ಕಾಯುತ್ತಿದೆ.

ಯಾವುದೇ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳುವ ಯಾವುದೇ ನಿಬಂಧನೆಯನ್ನು ಸಿಎಎ ಹೊಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

“ಕಳೆದ 70 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಜನರಿಗೆ ಪೌರತ್ವ ನೀಡಲು ನಾವು ಬಯಸುತ್ತೇವೆ. ಅದಕ್ಕಾಗಿ ಸಿಎಎ ಜಾರಿಗೊಳಿಸಿದ್ದೇವೆ. ವದಂತಿಯನ್ನು ಹರಡುವ ಪ್ರತಿಪಕ್ಷಗಳ ಮಾತಿಗೆ ಬಲಿಯಾಗಬೇಡಿ” ಎಂದು ತಿಳಿಸಿದ್ದಾರೆ.

ನಾವು ಠಾಕೂರ್‌ನಗರ ರೈಲ್ವೆ ನಿಲ್ದಾಣವನ್ನು ಶ್ರೀಧಮ್ ಠಾಕೂರ್‌ನಗರ ರೈಲ್ವೆ ನಿಲ್ದಾಣ ಎಂದು ಮರುನಾಮಕರಣ ಮಾಡಲು ಬಯಸುತ್ತೇವೆ. ಆದರೆ ಮಮತಾ ಸರ್ಕಾರವು ಇದಕ್ಕಾಗಿ ನಮಗೆ ಅನುಮತಿ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಂತೆ ನಾನು ಜನರಿಗೆ ಕರೆ ನೀಡುತ್ತೇನೆ. ಆಗ ನಾವು ನಿಮಗಾಗಿ ಸುವರ್ಣ ಬಾಂಗ್ಲಾವನ್ನು ರಚಿಸುತ್ತೇವೆ ಎಂದು ಶಾ ಹೇಳಿದ್ದಾರೆ.

ಗುರುಚಂದ್ ಠಾಕೂರ್ ಮತ್ತು ಹರಿಶ್ಚಂದ್ರ ಠಾಕೂರ್ ಹೇಳಿದ ಮಾರ್ಗ, ಮೋದಿ ಸರ್ಕಾರ ಆ ಹಾದಿಯಲ್ಲಿ ಸಾಗಿದೆ. ಮೋದಿ ಸರ್ಕಾರ ದಲಿತರ, ಶೋಷಿತ, ಹಿಂದುಳಿದವರ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದ್ದಾರೆ.

ಸಿಎಎಯನ್ನು ತಪ್ಪಾಗಿ ಅರ್ಥೈಸಿಕೊಳ್ಳುವವರಿಗೆ ನಾನು ಖಂಡಿತವಾಗಿಯೂ ಕಠಿಣ ಉತ್ತರ ನೀಡುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದ್ದರಿಂದ ಇಂದು ನಾನು ಈ ಪವಿತ್ರ ಭೂಮಿಗೆ ಬಂದಿದ್ದೇನೆ. ಕೆಲವು ಸಂದರ್ಭಗಳಿಂದಾಗಿ ನನ್ನ ಪ್ರವಾಸವನ್ನು ರದ್ದುಗೊಳಿಸಿದಾಗ ಮಮತಾ ದೀದಿ ತುಂಬಾ ಸಂತೋಷಪಟ್ಟರು. ಆದರೆ ಅವರು ಚುನಾವಣೆಯಲ್ಲಿ ಸೋಲುವವರೆಗೂ ನಾನು ಮತ್ತೆ ಮತ್ತೆ ಇಲ್ಲಿಗೆ ಬರುತ್ತೇನೆ ಎಂದು ಶಾ ತಿಳಿಸಿದ್ದಾರೆ.


ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 200 ಸ್ಥಾನ ಗೆಲ್ಲುತ್ತೇವೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...