Homeಕರ್ನಾಟಕಕಾ ಎಂಬ ಅಪಶಕುನ, ಎನ್‌ಆರ್‌ಸಿ ಎಂಬ ಸಂಚು : ದೇವನೂರ ಮಹಾದೇವ

ಕಾ ಎಂಬ ಅಪಶಕುನ, ಎನ್‌ಆರ್‌ಸಿ ಎಂಬ ಸಂಚು : ದೇವನೂರ ಮಹಾದೇವ

ನಮ್ಮ ಪ್ರಧಾನಮಂತ್ರಿಯವರ ಮಾತುಗಳು ಜುಮ್ಲಾ ಆಗಬಾರದೆಂದರೆ ಅವರು ತಕ್ಷಣವೇ ಆರ್ಡಿನೆನ್ಸ್ ಮೂಲಕ ಸಿಎಎ ಹಿಂತೆಗೆದುಕೊಳ್ಳಬೇಕು ಹಾಗೂ ಎನ್‌ಆರ್‌ಸಿಯನ್ನು ದೇಶ ವ್ಯಾಪ್ತಿ ಜಾರಿಗೊಳಿಸುವುದಿಲ್ಲ ಎಂದು ಅಧಿಕೃತ ಆಶ್ವಾಸನೆ ನೀಡಬೇಕು.

- Advertisement -
- Advertisement -

ಮೋದಿ ಮತ್ತು ಶಾ ಅವರ ‘ಕಾ… ಕಾ’ ಕೂಗಿಗೆ ದೇಶ ಬೆಚ್ಚಿ ಬಿದ್ದಿದೆ. ಭಾರತೀಯ ಸುಪ್ತ ಮನಸ್ಸಲ್ಲಿ, ಗತಿಸಿದ ಪಿತೃಗಳು ಕಾಗೆಯ ರೂಪದಲ್ಲಿ ತಿಥಿಯ ಸಂದರ್ಭದಲ್ಲಿ ಬಂದು ಆಹಾರ ಸೇವಿಸುತ್ತಾರೆ ಎಂಬ ನಂಬಿಕೆ ಇದೆ. ಹಾಗೆಯೇ ಕಾಗೆ ಆತಂಕದಿಂದ ಕೂಗುವ ಕಾ…ಕಾ’ ಶಬ್ಧ ಏನೋ ಅಪಶಕುನ, ಏನೋ ಕೇಡು ಎಂಬುದರ ಮುನ್ಸೂಚನೆ ನೀಡುತ್ತಿದೆ ಎಂದೂ ಭಾರತದ ಸುಪ್ತ ಮನಸ್ಸು ಭಾವಿಸುತ್ತದೆ. ‘ಪೌರತ್ವ ತಿದ್ದುಪಡಿ ಕಾಯ್ದೆ ‘ಸಿಎಎ’ ಅಂದರೆ ‘ಕಾ’ ಧ್ವನಿಯು ಕಾಗೆಯು ಮುನ್ಸೂಚನೆ ನೀಡುತ್ತಿರುವ ಕೇಡು, ಅಪಶಕುನ ಎಂದು ದೇಶದ ಸುಪ್ತ ಮನಸ್ಸಿಗೆ ತಟ್ಟಿರಬೇಕು. ಹೌದು, ಪೌರತ್ವ ತಿದ್ದುಪಡಿ ಕಾಯ್ದೆ ಅಂದರೆ ಸಿಎಎ ಅಂದರೆ ‘ಕಾ’ ಅಪಶಕುನ, ಕೇಡೂ ಎರಡೂ ಹೌದು.

ಈಗ ನೋಡಿ, ನಮ್ಮ ಸಂವಿಧಾನಕ್ಕೆ ಒಂದು ಚರಿತ್ರೆ ಇದೆ. ಹಾಗೇನೆ ಒಂದು ಚಾರಿತ್ರ್ಯ ಕೂಡ ಇದೆ. ಚಾರಿತ್ರ್ಯ ಎಂದರೆ ಶೀಲ. ಬುದ್ಧನ ಪಂಚಶೀಲದಂತೆ ನಮ್ಮ ಸಂವಿಧಾನಕ್ಕೂ ಪಂಚಶೀಲಗಳಿವೆ. ಅವು- ಸಾರ್ವಭೌಮತ್ವ, ಸಮಾಜವಾದಿ, ಧರ್ಮನಿರಪೇಕ್ಷ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯ. ಸಂವಿಧಾನದ ಶೀಲಗಳಲ್ಲಿ ಒಂದಾದ Secular ಅಂದರೆ ಜಾತ್ಯಾತೀತ ಅಥವಾ ಧರ್ಮ ನಿರಪೇಕ್ಷ ಮೌಲ್ಯವು ಆಳ್ವಿಕೆಗೆ ಜಾತಿ, ಧರ್ಮಗಳ ವಾಂಛೆ ಇರಬಾರದು ಎನ್ನುತ್ತದೆ. ಜಾಗತಿಕವಾಗಿ ಭಾರತದ ಗೌರವವನ್ನು ಹೆಚ್ಚಿಸಿದ ಮೌಲ್ಯ ಇದು. ಆದರೆ ಇಂದು ಈ ಸಿಎಎ ‘ಪೌರತ್ವ ತಿದ್ದುಪಡಿ ಕಾಯ್ದೆ’ಯು ಏನು ಮಾಡುತ್ತದೆ ಎಂದರೆ ಸಂವಿಧಾನದ ಈ ಶೀಲವನ್ನೇ ಕೆಡಿಸುತ್ತದೆ. ಸಂವಿಧಾನವನ್ನು ಪ್ರತ್ಯಕ್ಷವಾಗಿ ವಿರೋಧಿಸದೆ ಅದರ ಶೀಲ ಕೆಡಿಸಿ ಪರೋಕ್ಷವಾಗಿ ಸಂವಿಧಾನವನ್ನು ಕುರೂಪಗೊಳಿಸುವ ಹುನ್ನಾರು ಇದು. ಇದಕ್ಕಾಗೆ ಇರಬೇಕು- ಈ ಕಾಯ್ದೆ ಸಿಎಎ ಅಂದರೆ `ಕಾ’ ಎಂಬುದು ಅಪಶಕುನ, ಕೇಡು ಎಂದು ಭಾರತೀಯ ಮನಸ್ಸಿಗೆ ಅನ್ನಿಸತೊಡಗಿದೆ.

ಇನ್ನು ಎನ್‌ಆರ್‌ಸಿ ವಿಷಯ. ಹೆಚ್‌ಎಂ ಶಾ ಅವರು ನಾಕಾರು ಸಲ ಎನ್‌ಆರ್‌ಸಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲೂ ಹೇಳಿದ್ದಾರೆ. ಪಿಎಂ ಮೋದಿಯವರು “ಹಾಗೇನೂ ಆಲೋಚಿಸಿಲ್ಲ, ಭಯ ಪಡಬೇಡಿ” ಎಂದು ದೇಶಕ್ಕೆ ಆಶ್ವಾಸನೆ ಕೊಡುತ್ತಿದ್ದಾರೆ. ಯಾರನ್ನು ನಂಬುವುದು? ಯಾರನ್ನು ಬಿಡುವುದು?

ಭಾರತೀಯರೆಲ್ಲರ ಅಕೌಂಟ್‌ಗೆ ಕಪ್ಪು ಹಣ ತಂದು ರೂ. 15 ಲಕ್ಷ ಹಾಕುವುದು, ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ಸೃಷ್ಟಿಸುವುದು ಇತ್ಯಾದಿ ಆಶ್ವಾಸನೆಗಳನ್ನು ಕೊಟ್ಟು ಇವು ಈಡೇರಲೇ ಇಲ್ಲವಲ್ಲ ಎಂದು ಬಿಜೆಪಿ ಅಧ್ಯಕ್ಷರೂ ಆದ ಅಮಿತ್ ಶಾ ಅವರಿಗೆ ಕೇಳಿದ್ದಕ್ಕೆ ಅವರು- `ಅವೆಲ್ಲಾ ಚುನಾವಣಾ ಜುಮ್ಲಾ’ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ. ನಮ್ಮ ಪ್ರಧಾನಮಂತ್ರಿಯವರ ಮಾತುಗಳು ಜುಮ್ಲಾ ಆಗಬಾರದೆಂದರೆ ಅವರು ತಕ್ಷಣವೇ ಆರ್ಡಿನೆನ್ಸ್ ಮೂಲಕ ಸಿಎಎ ಹಿಂತೆಗೆದುಕೊಳ್ಳಬೇಕು ಹಾಗೂ ಎನ್‌ಆರ್‌ಸಿಯನ್ನು ದೇಶ ವ್ಯಾಪ್ತಿ ಜಾರಿಗೊಳಿಸುವುದಿಲ್ಲ ಎಂದು ಅಧಿಕೃತ ಆಶ್ವಾಸನೆ ನೀಡಬೇಕು. ತಕ್ಷಣವೇ ಇದಾಗದಿದ್ದರೆ ಇವರಿಬ್ಬರೂ ಜನಜೀವನದ ಪ್ರಾಣ ಸಂಕಟದ ಜೊತೆ ಬೆಕ್ಕಿನಂತೆ ಚೆಲ್ಲಾಟವಾಡುತ್ತಿದ್ದಾರೇನೊ ಅನ್ನಿಸಿಬಿಡುತ್ತದೆ.

ಈ ಎನ್‌ಆರ್‌ಸಿ ಯಿಂದ ಉದ್ಭವಿಸಬಹುದಾದ ಒಂದು ಯಾತಾನಾಮಯವಾದ ದೃಶ್ಯವನ್ನು ನೆನಪಿಸಿಕೊಳ್ಳುವುದಕ್ಕೂ ನನಗೆ ಕಷ್ಟವಾಗುತ್ತಿದೆ. ಅದು ಮೂಲನಿವಾಸಿಗಳ ಪಾಡು. ಭಾರತದಲ್ಲಿ ಶೇಕಡ 8 ರಷ್ಟು ಜನರು ಮಾತ್ರ ಮೂಲನಿವಾಸಿಗಳು, ಉಳಿದವರೆಲ್ಲಾ ವಲಸೆಗಾರರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಲನಿವಾಸಿಗಳು ಈಗಲೂ ಬಹುತೇಕ ಅರಣ್ಯವಾಸಿಗಳು. ಇವರು ಅಲ್ಲೇ ಹುಟ್ಟಿ ಅಲ್ಲೇ ಮಣ್ಣಾಗುತ್ತ ಬಂದವರು. ಈಗ, ಎನ್‌ಆರ್‌ಸಿ ಬಂದರೆ ಏನಾಗುತ್ತದೆ? ಭಾರತಕ್ಕೆ ವಲಸೆ ಬಂದವರೇ ಅಧಿಕಾರ ಹಿಡಿದು ಈಗ ಮೂಲನಿವಾಸಿಗಳಿಗೆ ‘ನೀವು ಇಲ್ಲಿಯವರು ಅಂಥ ದಾಖಲೆ ತೋರಿಸು’ ಎಂದು ಕೇಳಿದಂತಾಗುತ್ತದೆ. ಇದಕ್ಕೆ ಮೂಲನಿವಾಸಿಗಳು ಏನು ತಾನೇ ಹೇಳಿಯಾರು? “ನೀವು ಬರುವುದಕ್ಕೂ ಮೊದಲಿನಿಂದಲೂ ಇಲ್ಲೇ ಹುಟ್ಟೀ ಇಲ್ಲೇ ಸಾಯುತ್ತಿದ್ದೀವಪ್ಪ. ಬೇಕಾದರೆ ಮರ ಕೇಳು, ಬೆಟ್ಟ ಕೇಳು, ನದಿ ಕೇಳು, ಕಾಡಲ್ಲಿರುವ ಪ್ರಾಣಿಗಳನ್ನ ಕೇಳು… ಅವಕ್ಕೆಲ್ಲಾ ನಾವು ಗೊತ್ತಿದೆ. ಇದನ್ನು ಬಿಟ್ಟರೆ ನಮ್ಮ ಬಳಿ ಏನೂ ಇಲ್ಲ” ಎಂದು ಅರಣ್ಯರೋಧನ ಮಾಡಬೇಕಾಗುತ್ತದೆ. ಇವರ ಜೊತೆಗೆ ನೆಲೆ ಇಲ್ಲದೆ ಅಲೆಯುತ್ತಿರುವ ಅಲೆಮಾರಿಗಳು, ಅತಂತ್ರರಾದ ಹಿಂದುಳಿದ ಸಮೂಹಗಳು ಕಣ್ಣುಬಾಯಿ ಬಿಡಬೇಕಾಗುತ್ತದೆ.

ಇದರಲ್ಲೊಂದು ಸಂಚಿನ ವಾಸನೆಯೂ ಇದ್ದಂತಿದೆ. ಮೂಲನಿವಾಸಿಗಳನ್ನು ಎನ್‌ಆರ್‌ಸಿ ನೆಪದಲ್ಲಿ ಅರಣ್ಯದಿಂದ ಸಂಪೂರ್ಣವಾಗಿ ಎತ್ತಂಗಡಿ ಮಾಡುವ ಸಂಚೂ ಇಲ್ಲಿ ಇರಬಹುದು. ಆಗ- ಅರಣ್ಯನಾಶ, ಗಣಿಗಾರಿಕೆ ಮಾಡಿ ಭೂಮಿ ಧ್ವಂಸ ಮಾಡಲು ಕಾರ್ಪೋರೇಟ್ ಕಂಪನಿಗಳಿಗೆ ಹಬ್ಬವಾಗುತ್ತದೆ. ನಮ್ಮ ಪೂರ್ವಿಕರು ಕಟ್ಟಿ ಬೆಳೆಸಿ ಉಳಿಸಿಕೊಂಡು ಬಂದಿದ್ದ ಸಂಸ್ಥೆ ಆಸ್ತಿಪಾಸ್ತಿಗಳನ್ನು ಖಾಸಗಿಗೆ ಮಾರಿಕೊಂಡು ಜೀವನ ದೂಡುತ್ತಿರುವ ಸರ್ಕಾರಕ್ಕೆ ಅರಣ್ಯ ನದಿ, ಬೆಟ್ಟ ಮಾರುವುದು ಸಹಜವೇ ಇರಬಹುದು. ಆದರೆ ದೇಶವನ್ನೆ ಖಾಸಗಿ ಕಂಪನಿಗಳಿಗೆ ಮಾರಿದಂತಾಗಿಬಿಡುತ್ತದೆ. ಆಗ, ಕಂಪನಿ ಸರ್ಕಾರದ ವಿರುದ್ಧ ಹೋರಾಡಿ ದೇಶ ಸ್ವಾತಂತ್ರ್ಯ ಪಡೆಯಿತು. ಈಗ, ಪಡೆದ ಸ್ವಾತಂತ್ರ್ಯವನ್ನು ಕಂಪನಿಗಳಿಗೆ ಮರುಮಾರಾಟ ಮಾಡಿದಂತಾಗಿಬಿಡುತ್ತದೆ. ಉಳಿಗಾಲ ಉಂಟೆ ಎನ್ನುವಂತಾಗಿಬಿಡುತ್ತದೆ.

ಈ ಸಂದರ್ಭದಲ್ಲಿ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ ಬಾಘೆಲ್ ಅವರ ಮಾತುಗಳನ್ನು ನಾವು ಕೇಳಿಸಿಕೊಳ್ಳಬೇಕಾಗಿದೆ. ಅವರು ಹೇಳುತ್ತಾರೆ- “ಛತ್ತೀಸ್‌ಗಡದ ಅರ್ಧಕ್ಕೂ ಹೆಚ್ಚಿನ ಜನರಿಗೆ ಪೌರತ್ವ ಸಾಬೀತು ಅಸಾಧ್ಯ. ಎನ್‌ಆರ್‌ಸಿ ಜಾರಿಗೊಳಿಸಿದರೆ ರಾಜ್ಯದ ಶೇಕಡ 50ಕ್ಕೂ ಜನರು ಭೂಮಿ ಅಥವಾ ಭೂ ದಾಖಲೆ ಹೊಂದಿಲ್ಲ. ಅವರಿಗೆ ತಮ್ಮ ಪೌರತ್ವ ಸಾಬೀತು ಪಡಿಸಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿ ಆಮೇಲೆ ಅವರು ಹೇಳುತ್ತಾರೆ- “1906ರಲ್ಲಿ ದಕ್ಷಿಣಾ ಆಫ್ರಿಕಾದಲ್ಲಿ ಬ್ರಿಟಿಷರು ತಂದಿದ್ದ ಗುರುತು ಯೋಜನೆಯನ್ನು ಗಾಂಧೀಜಿ ವಿರೋಧಿಸಿದ ರೀತಿಯಲ್ಲೆ ಎನ್‌ಆರ್‌ಸಿ ಪ್ರಕ್ರಿಯೆ ವಿರೋಧಿಸುತ್ತೇನೆ. ಎನ್‌ಆರ್‌ಸಿ ಜಾರಿಗೊಂಡರೆ ಅದರ ದಾಖಲೆಗೆ ಸಹಿ ಹಾಕದ ಮೊದಲ ವ್ಯಕ್ತಿ ನಾನೇ ಆಗಲಿದ್ದೇನೆ” ಎನ್ನುತ್ತಾರೆ. ಸಂವಿಧಾನದ ಶೀಲ ಹಾಗೂ ಭಾರತದ ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ, ಭಾರತ ಮಾತೆಯ ಮಕ್ಕಳಾಗಿ ನಾವು ಇಷ್ಟಾದರೂ ಮಾಡಬೇಕಾಗುತ್ತದೆ.

ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ ಬಾಘೆಲ್

ಈಗ ಈ ಸಿಎಎ, ಎನ್‌ಆರ್‌ಸಿ ವಿರೋಧಿ ಆಂದೋಲನ ಸರಿಯಾದ ಜಾಗಕ್ಕೆ, ಅಂದರೆ ವಿದ್ಯಾರ್ಥಿಗಳ ಅಂಗಳಕ್ಕೆ ಬಂದಿದೆ. ಭಾರತೀಯತೆ ಮತ್ತು ಸಂವಿಧಾನವನ್ನು ಉಳಿಸಿಕೊಳ್ಳುವುದಕ್ಕಾಗಿ ವಿದ್ಯಾರ್ಥಿಗಳು ಟೊಂಕಕಟ್ಟಿ ನಿಂತಿದ್ದಾರೆ. ಭಾರತಕ್ಕೆ ಕಷ್ಟ ಬಂದ ಕಾಲದಲ್ಲಿ ಕಾಪಾಡಬಲ್ಲ ಶಕ್ತಿ ಯುವಜನತೆಗೆ ಇದೆ ಎಂದು ಋಜುವಾತು ಮಾಡುತ್ತಿದ್ದಾರೆ. ಪ್ರತಿಭಟನೆಯನ್ನು ತುಂಬಾ ಹೊಣೆಗಾರಿಕೆಯಿಂದಲೂ ನಿಭಾಯಿಸುತ್ತಿದ್ದಾರೆ. ಚಳುವಳಿಯನ್ನು ದಾರಿತಪ್ಪಿಸಲು ನಾನಾರೀತಿಯ ಪ್ರಯತ್ನಗಳು ನಡೆಯಬಹುದು. ಆದರೂ – ‘ದಯವಿಟ್ಟು ಸಂಯಮ ಕಳೆದುಕೊಳ್ಳಬೇಡಿ, ಸಾರ್ವಜನಿಕ ಆಸ್ತಿಪಾಸ್ತಿಯನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಕೂಡ ನಿಮ್ಮದೇನೆ.

ಜೊತೆಗೆ ವಿದ್ಯಾರ್ಥಿ ಚಳವಳಿ ಒಳಕ್ಕೆ ಸಮಾಜಘಾತಕ ಶಕ್ತಿಗಳು ನುಸಳದಂತೆ ದಯವಿಟ್ಟು ಎಚ್ಚರಿಕೆ ವಹಿಸಿ. ಯಾಕೆಂದರೆ, ಮುಸ್ಲಿಮರ ಸೋಗಿನಲ್ಲಿ ರೈಲಿಗೆ ಕಲ್ಲು ಎಸೆಯುತ್ತಿದ್ದ ಐದಾರು ಜನ ಬಿಜೆಪಿಯವರು ಸಿಕ್ಕಿಬಿದ್ದಿದ್ದಾರೆ. ಇದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ಚಳವಳಿಗೆ ಈ ಎಚ್ಚರಿಕೆ ಇರಬೇಕು. ಹಾಗೇ ಗುಜರಾತ್‌ನ ಅಹಮದ್‌ಬಾದ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಸಿಕ್ಕಿಹಾಕಿಕೊಂಡ ನಾಲ್ವಾರು ಪೊಲೀಸರನ್ನು ಮುಸ್ಲಿಂ ಯುವಕರ ಗುಂಪೊಂದು ರಕ್ಷಿಸಿದೆ. ಇಂಥ ಹೊಣೆಗಾರಿಕೆಯೂ ಚಳವಳಿಗೆ ಬೇಕಾಗಿದೆ. ಹಾಗೂ ಇಂಥಹ ಸಂದರ್ಭಗಳಲ್ಲೆ ಹೆಚ್ಚುತ್ತಿರುವ ನಿರುದ್ಯೋಗ, ಕುಸಿಯುತ್ತಿರುವ ಆರ್ಥಿಕತೆ, ಏರುತ್ತಿರುವ ಬೆಲೆ ಏರಿಕೆ ಇಂಥವುಗಳ ಬಗ್ಗೆ ಹೆಚ್ಚೆಚ್ಚು ಮಾತಾಡಬೇಕಾಗಿದೆ’- ಇದು ಪ್ರಾರ್ಥನೆ.

(ದೇವನೂರು ಮಹಾದೇವರವರು ಪ್ರಸಿದ್ದ ಹಿರಿಯ ಸಾಹಿತಿಗಳು, ಜನಪರ ಚಿಂತಕರು ಮತ್ತು ಹೋರಾಟಗಾರರು. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ಮೈಸೂರಿನಲ್ಲಿ ನಡೆದ ಹೋರಾಟದಲ್ಲಿ ಅವರು ಮಾಡಿದ ಭಾಷಣದ ಅಕ್ಷರ ರೂಪ ಇದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನರೇಂದ್ರ ಮೋದಿಯವರನ್ನು ಅಯೋಗ್ಯರ ಎಂದರೆ ತಪ್ಪಾಗಲಾರದು

    ಯೋಗ್ಯವಾದ ಐಕ್ಯತೆಗೆ ಒಂದನ್ನು ಚಾಲನೆ ತೆಗೆದುಕೊಳ್ಳಲಿಲ್ಲ

    ಬಿಲ್ಡಪ್ ಭಾಷಣ ಬಿಡೋದಿಕ್ಕೆ ಅಷ್ಟೇ ಲಾಯಕ್

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...