Homeಮುಖಪುಟಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

ಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

- Advertisement -
- Advertisement -

ಧರ್ಮಾಧಾರಿತವಾಗಿ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ ಪೌರತ್ವವನ್ನು ಒದಗಿಸುವ 2019ರ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ತನ್ನ ಮೂಲ ದಾವೆಯು ಬಾಕಿ ಇರುವಾಗ ಪೌರತ್ವ ತಿದ್ದುಪಡಿ ನಿಯಮಗಳು 2024ಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.

ಸಿಎಎ ನಿಯಮಗಳು ಜಾರಿಗೆ ಬರುವುದರೊಂದಿಗೆ, ಅಸಂವಿಧಾನಿಕ ಕಾನೂನು ಜಾರಿಗೆ ರಾಜ್ಯಗಳಿಗೆ ಬಲವಂತ ಮಾಡಲಾಗುತ್ತಿದೆ ಎಂದು ಕೇರಳದ ಎಡರಂಗದ ಸರಕಾರ ಕೋರ್ಟ್‌ ಗಮನಕ್ಕೆ ತಂದಿದೆ. ಧರ್ಮ ಮತ್ತು ದೇಶವನ್ನು ಆಧರಿಸಿದ ವರ್ಗೀಕರಣಗಳು ತಾರತಮ್ಯ, ಅಸಮಂಜಸ ಮತ್ತು ಜಾತ್ಯತೀತತೆಯ ತತ್ವಗಳಿಗೆ ವಿರುದ್ಧವಾಗಿವೆ. ಸಿಎಎಯ ನಿಬಂಧನೆಗಳನ್ನು ಜಾರಿಗೆ ತರುವಲ್ಲಿ ಯಾವುದೇ ತುರ್ತು ಇಲ್ಲ ಎಂದು ಕೇರಳ ವಾದಿಸಿದ್ದು,  ಕಾಯ್ದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ನಿಯಮಗಳನ್ನು ಜಾರಿ ಗೊಳಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನದ 131ನೇ ವಿಧಿಯ ಅಡಿಯಲ್ಲಿ ಈ ಮೊದಲು ಮೂಲ ಮೊಕದ್ದಮೆಯನ್ನು ಸಲ್ಲಿಸಿದ್ದ ಕೇರಳ ರಾಜ್ಯವು, ಧಾರ್ಮಿಕ ವರ್ಗೀಕರಣವು ಆರ್ಟಿಕಲ್ 14ರ ಅಡಿಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ.

ತಿದ್ದುಪಡಿ ಕಾಯಿದೆ ಮತ್ತು ನಿಯಮಗಳು ಮತ್ತು ಆದೇಶಗಳು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಳ್ಳುತ್ತಿರುವ ಶ್ರೀಲಂಕಾ, ಮ್ಯಾನ್ಮಾರ್ ಮತ್ತು ಭೂತಾನ್‌ನಂತಹ ಇತರ ದೇಶಗಳ ವಲಸಿಗರ ವಿಚಾರದಲ್ಲಿ ತಾರತಮ್ಯ ಮಾಡುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಲ್ಪಸಂಖ್ಯಾತರ ವರ್ಗಕ್ಕೆ ನೀಡಿರುವ ಹಕ್ಕುಗಳನ್ನು ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ ಮತ್ತು ಭೂತಾನ್‌ಗೆ ಸೇರಿದ ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿಸ್ತರಿಸದಿರಲು ಯಾವುದೇ ತರ್ಕವಿಲ್ಲ ಎಂದು ರಾಜ್ಯವು ವಾದಿಸಿದೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು ಕಾಯಿದೆಯ ವ್ಯಾಪ್ತಿಗೆ ಒಳಪಡುತ್ತಾರೆ,  ಮುಖ್ಯವಾಗಿ ತಮಿಳು ವಂಶಸ್ಥರು, ಶ್ರೀಲಂಕಾ ಮತ್ತು ನೇಪಾಳದ ತೇರಾಯ್‌ನಲ್ಲಿರುವ ಹಿಂದೂ ಮಾಧೇಸಿಗಳನ್ನು ವ್ಯಾಪ್ತಿಗೆ ಒಳಪಡಿಸಿಲ್ಲ, ಇವರ ಪೂರ್ವಜರು ಹದಿನೆಂಟನೇ ಶತಮಾನದಲ್ಲಿ ಆಗಿನ ಬ್ರಿಟಿಷ್ ಇಂಡಿಯಾದಿಂದ ಶ್ರೀಲಂಕಾ ಮತ್ತು ನೇಪಾಳಕ್ಕೆ ವಲಸೆ ಹೋದವರು. ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಕ್ರಿಶ್ಚಿಯನ್ನರನ್ನು ಒಳಗೊಂಡಿದೆ, ಆದರೆ ಭೂತಾನ್ ಮತ್ತು ಶ್ರೀಲಂಕಾದಲ್ಲಿನ ಕ್ರಿಶ್ಚಿಯನ್ನರ ಸಮಸ್ಯೆಗಳನ್ನು ಪರಿಗಣಿಸಲಿಲ್ಲ. ಅಲ್ಲದೆ ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಬೌದ್ಧರನ್ನು ಒಳಗೊಳ್ಳುತ್ತದೆ. ಆದರೆ  ನೇಪಾಳದಲ್ಲಿರುವ ಬೌದ್ಧರ ಬಗ್ಗೆ ಕಾಳಜಿ ತೋರಿಸಿಲ್ಲ ಎಂದು ಹೇಳಿದೆ.

ಅಧಿಸೂಚನೆಗಳು ಕಿರುಕುಳಕ್ಕೊಳಗಾದ ಇತರ ಧಾರ್ಮಿಕ ಅಲ್ಪಸಂಖ್ಯಾತ ಪಂಗಡಗಳಾದ ಅಹ್ಮದ್ದೀಯರು, ಶಿಯಾಗಳು ಮತ್ತು ಹಜಾರಗಳನ್ನು ಕಡೆಗಣಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಅಹಮದಿಯಾಗಳು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಕೇರಳವು ಮ್ಯಾನ್ಮಾರ್‌ನಲ್ಲಿರುವ ರೋಹಿಂಗ್ಯಾಗಳು ಮತ್ತು ಶ್ರೀಲಂಕಾದಲ್ಲಿ ಮುಸ್ಲಿಮರ ಸಮಸ್ಯೆಗಳನ್ನು ಎತ್ತಿ ತೋರಿಸಿದೆ, ಅವರು ಈ ದೇಶಗಳಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ ಮತ್ತು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದ್ದಾರೆ. ಈ ಕಾಯಿದೆಯು ಪೌರತ್ವವನ್ನು ಪಡೆಯುವ ಪ್ರಯೋಜನದಿಂದ ಮುಸ್ಲಿಮರನ್ನು ಧರ್ಮದ ಆಧಾರದಲ್ಲಿ ಹೊರಗಿಟ್ಟಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಡಿಸೆಂಬರ್ 31, 2019ರಂದು ‘ಕೇರಳ ವಿಧಾನಸಭೆ’ಯು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...