Homeಮುಖಪುಟಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

ಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

- Advertisement -
- Advertisement -

ಧರ್ಮಾಧಾರಿತವಾಗಿ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ ಪೌರತ್ವವನ್ನು ಒದಗಿಸುವ 2019ರ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ತನ್ನ ಮೂಲ ದಾವೆಯು ಬಾಕಿ ಇರುವಾಗ ಪೌರತ್ವ ತಿದ್ದುಪಡಿ ನಿಯಮಗಳು 2024ಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.

ಸಿಎಎ ನಿಯಮಗಳು ಜಾರಿಗೆ ಬರುವುದರೊಂದಿಗೆ, ಅಸಂವಿಧಾನಿಕ ಕಾನೂನು ಜಾರಿಗೆ ರಾಜ್ಯಗಳಿಗೆ ಬಲವಂತ ಮಾಡಲಾಗುತ್ತಿದೆ ಎಂದು ಕೇರಳದ ಎಡರಂಗದ ಸರಕಾರ ಕೋರ್ಟ್‌ ಗಮನಕ್ಕೆ ತಂದಿದೆ. ಧರ್ಮ ಮತ್ತು ದೇಶವನ್ನು ಆಧರಿಸಿದ ವರ್ಗೀಕರಣಗಳು ತಾರತಮ್ಯ, ಅಸಮಂಜಸ ಮತ್ತು ಜಾತ್ಯತೀತತೆಯ ತತ್ವಗಳಿಗೆ ವಿರುದ್ಧವಾಗಿವೆ. ಸಿಎಎಯ ನಿಬಂಧನೆಗಳನ್ನು ಜಾರಿಗೆ ತರುವಲ್ಲಿ ಯಾವುದೇ ತುರ್ತು ಇಲ್ಲ ಎಂದು ಕೇರಳ ವಾದಿಸಿದ್ದು,  ಕಾಯ್ದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ನಿಯಮಗಳನ್ನು ಜಾರಿ ಗೊಳಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನದ 131ನೇ ವಿಧಿಯ ಅಡಿಯಲ್ಲಿ ಈ ಮೊದಲು ಮೂಲ ಮೊಕದ್ದಮೆಯನ್ನು ಸಲ್ಲಿಸಿದ್ದ ಕೇರಳ ರಾಜ್ಯವು, ಧಾರ್ಮಿಕ ವರ್ಗೀಕರಣವು ಆರ್ಟಿಕಲ್ 14ರ ಅಡಿಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ.

ತಿದ್ದುಪಡಿ ಕಾಯಿದೆ ಮತ್ತು ನಿಯಮಗಳು ಮತ್ತು ಆದೇಶಗಳು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಳ್ಳುತ್ತಿರುವ ಶ್ರೀಲಂಕಾ, ಮ್ಯಾನ್ಮಾರ್ ಮತ್ತು ಭೂತಾನ್‌ನಂತಹ ಇತರ ದೇಶಗಳ ವಲಸಿಗರ ವಿಚಾರದಲ್ಲಿ ತಾರತಮ್ಯ ಮಾಡುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಲ್ಪಸಂಖ್ಯಾತರ ವರ್ಗಕ್ಕೆ ನೀಡಿರುವ ಹಕ್ಕುಗಳನ್ನು ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ ಮತ್ತು ಭೂತಾನ್‌ಗೆ ಸೇರಿದ ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿಸ್ತರಿಸದಿರಲು ಯಾವುದೇ ತರ್ಕವಿಲ್ಲ ಎಂದು ರಾಜ್ಯವು ವಾದಿಸಿದೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು ಕಾಯಿದೆಯ ವ್ಯಾಪ್ತಿಗೆ ಒಳಪಡುತ್ತಾರೆ,  ಮುಖ್ಯವಾಗಿ ತಮಿಳು ವಂಶಸ್ಥರು, ಶ್ರೀಲಂಕಾ ಮತ್ತು ನೇಪಾಳದ ತೇರಾಯ್‌ನಲ್ಲಿರುವ ಹಿಂದೂ ಮಾಧೇಸಿಗಳನ್ನು ವ್ಯಾಪ್ತಿಗೆ ಒಳಪಡಿಸಿಲ್ಲ, ಇವರ ಪೂರ್ವಜರು ಹದಿನೆಂಟನೇ ಶತಮಾನದಲ್ಲಿ ಆಗಿನ ಬ್ರಿಟಿಷ್ ಇಂಡಿಯಾದಿಂದ ಶ್ರೀಲಂಕಾ ಮತ್ತು ನೇಪಾಳಕ್ಕೆ ವಲಸೆ ಹೋದವರು. ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಕ್ರಿಶ್ಚಿಯನ್ನರನ್ನು ಒಳಗೊಂಡಿದೆ, ಆದರೆ ಭೂತಾನ್ ಮತ್ತು ಶ್ರೀಲಂಕಾದಲ್ಲಿನ ಕ್ರಿಶ್ಚಿಯನ್ನರ ಸಮಸ್ಯೆಗಳನ್ನು ಪರಿಗಣಿಸಲಿಲ್ಲ. ಅಲ್ಲದೆ ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಬೌದ್ಧರನ್ನು ಒಳಗೊಳ್ಳುತ್ತದೆ. ಆದರೆ  ನೇಪಾಳದಲ್ಲಿರುವ ಬೌದ್ಧರ ಬಗ್ಗೆ ಕಾಳಜಿ ತೋರಿಸಿಲ್ಲ ಎಂದು ಹೇಳಿದೆ.

ಅಧಿಸೂಚನೆಗಳು ಕಿರುಕುಳಕ್ಕೊಳಗಾದ ಇತರ ಧಾರ್ಮಿಕ ಅಲ್ಪಸಂಖ್ಯಾತ ಪಂಗಡಗಳಾದ ಅಹ್ಮದ್ದೀಯರು, ಶಿಯಾಗಳು ಮತ್ತು ಹಜಾರಗಳನ್ನು ಕಡೆಗಣಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಅಹಮದಿಯಾಗಳು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಕೇರಳವು ಮ್ಯಾನ್ಮಾರ್‌ನಲ್ಲಿರುವ ರೋಹಿಂಗ್ಯಾಗಳು ಮತ್ತು ಶ್ರೀಲಂಕಾದಲ್ಲಿ ಮುಸ್ಲಿಮರ ಸಮಸ್ಯೆಗಳನ್ನು ಎತ್ತಿ ತೋರಿಸಿದೆ, ಅವರು ಈ ದೇಶಗಳಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ ಮತ್ತು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದ್ದಾರೆ. ಈ ಕಾಯಿದೆಯು ಪೌರತ್ವವನ್ನು ಪಡೆಯುವ ಪ್ರಯೋಜನದಿಂದ ಮುಸ್ಲಿಮರನ್ನು ಧರ್ಮದ ಆಧಾರದಲ್ಲಿ ಹೊರಗಿಟ್ಟಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಡಿಸೆಂಬರ್ 31, 2019ರಂದು ‘ಕೇರಳ ವಿಧಾನಸಭೆ’ಯು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...