Homeಮುಖಪುಟಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

ಸಿಎಎ: ಅಧಿಸೂಚನೆಗೆ ತಡೆ ಕೋರಿ ಕೇರಳ ಸರಕಾರ ಸುಪ್ರೀಂ ಮೊರೆ

- Advertisement -
- Advertisement -

ಧರ್ಮಾಧಾರಿತವಾಗಿ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ ಪೌರತ್ವವನ್ನು ಒದಗಿಸುವ 2019ರ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ತನ್ನ ಮೂಲ ದಾವೆಯು ಬಾಕಿ ಇರುವಾಗ ಪೌರತ್ವ ತಿದ್ದುಪಡಿ ನಿಯಮಗಳು 2024ಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.

ಸಿಎಎ ನಿಯಮಗಳು ಜಾರಿಗೆ ಬರುವುದರೊಂದಿಗೆ, ಅಸಂವಿಧಾನಿಕ ಕಾನೂನು ಜಾರಿಗೆ ರಾಜ್ಯಗಳಿಗೆ ಬಲವಂತ ಮಾಡಲಾಗುತ್ತಿದೆ ಎಂದು ಕೇರಳದ ಎಡರಂಗದ ಸರಕಾರ ಕೋರ್ಟ್‌ ಗಮನಕ್ಕೆ ತಂದಿದೆ. ಧರ್ಮ ಮತ್ತು ದೇಶವನ್ನು ಆಧರಿಸಿದ ವರ್ಗೀಕರಣಗಳು ತಾರತಮ್ಯ, ಅಸಮಂಜಸ ಮತ್ತು ಜಾತ್ಯತೀತತೆಯ ತತ್ವಗಳಿಗೆ ವಿರುದ್ಧವಾಗಿವೆ. ಸಿಎಎಯ ನಿಬಂಧನೆಗಳನ್ನು ಜಾರಿಗೆ ತರುವಲ್ಲಿ ಯಾವುದೇ ತುರ್ತು ಇಲ್ಲ ಎಂದು ಕೇರಳ ವಾದಿಸಿದ್ದು,  ಕಾಯ್ದೆ ಅಂಗೀಕಾರವಾದ ನಾಲ್ಕು ವರ್ಷಗಳ ನಂತರ ನಿಯಮಗಳನ್ನು ಜಾರಿ ಗೊಳಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನದ 131ನೇ ವಿಧಿಯ ಅಡಿಯಲ್ಲಿ ಈ ಮೊದಲು ಮೂಲ ಮೊಕದ್ದಮೆಯನ್ನು ಸಲ್ಲಿಸಿದ್ದ ಕೇರಳ ರಾಜ್ಯವು, ಧಾರ್ಮಿಕ ವರ್ಗೀಕರಣವು ಆರ್ಟಿಕಲ್ 14ರ ಅಡಿಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ.

ತಿದ್ದುಪಡಿ ಕಾಯಿದೆ ಮತ್ತು ನಿಯಮಗಳು ಮತ್ತು ಆದೇಶಗಳು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಳ್ಳುತ್ತಿರುವ ಶ್ರೀಲಂಕಾ, ಮ್ಯಾನ್ಮಾರ್ ಮತ್ತು ಭೂತಾನ್‌ನಂತಹ ಇತರ ದೇಶಗಳ ವಲಸಿಗರ ವಿಚಾರದಲ್ಲಿ ತಾರತಮ್ಯ ಮಾಡುತ್ತದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಅಲ್ಪಸಂಖ್ಯಾತರ ವರ್ಗಕ್ಕೆ ನೀಡಿರುವ ಹಕ್ಕುಗಳನ್ನು ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ ಮತ್ತು ಭೂತಾನ್‌ಗೆ ಸೇರಿದ ಧಾರ್ಮಿಕ ಅಲ್ಪಸಂಖ್ಯಾತರಿಗೆ ವಿಸ್ತರಿಸದಿರಲು ಯಾವುದೇ ತರ್ಕವಿಲ್ಲ ಎಂದು ರಾಜ್ಯವು ವಾದಿಸಿದೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು ಕಾಯಿದೆಯ ವ್ಯಾಪ್ತಿಗೆ ಒಳಪಡುತ್ತಾರೆ,  ಮುಖ್ಯವಾಗಿ ತಮಿಳು ವಂಶಸ್ಥರು, ಶ್ರೀಲಂಕಾ ಮತ್ತು ನೇಪಾಳದ ತೇರಾಯ್‌ನಲ್ಲಿರುವ ಹಿಂದೂ ಮಾಧೇಸಿಗಳನ್ನು ವ್ಯಾಪ್ತಿಗೆ ಒಳಪಡಿಸಿಲ್ಲ, ಇವರ ಪೂರ್ವಜರು ಹದಿನೆಂಟನೇ ಶತಮಾನದಲ್ಲಿ ಆಗಿನ ಬ್ರಿಟಿಷ್ ಇಂಡಿಯಾದಿಂದ ಶ್ರೀಲಂಕಾ ಮತ್ತು ನೇಪಾಳಕ್ಕೆ ವಲಸೆ ಹೋದವರು. ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಕ್ರಿಶ್ಚಿಯನ್ನರನ್ನು ಒಳಗೊಂಡಿದೆ, ಆದರೆ ಭೂತಾನ್ ಮತ್ತು ಶ್ರೀಲಂಕಾದಲ್ಲಿನ ಕ್ರಿಶ್ಚಿಯನ್ನರ ಸಮಸ್ಯೆಗಳನ್ನು ಪರಿಗಣಿಸಲಿಲ್ಲ. ಅಲ್ಲದೆ ಈ ಕಾಯಿದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಬೌದ್ಧರನ್ನು ಒಳಗೊಳ್ಳುತ್ತದೆ. ಆದರೆ  ನೇಪಾಳದಲ್ಲಿರುವ ಬೌದ್ಧರ ಬಗ್ಗೆ ಕಾಳಜಿ ತೋರಿಸಿಲ್ಲ ಎಂದು ಹೇಳಿದೆ.

ಅಧಿಸೂಚನೆಗಳು ಕಿರುಕುಳಕ್ಕೊಳಗಾದ ಇತರ ಧಾರ್ಮಿಕ ಅಲ್ಪಸಂಖ್ಯಾತ ಪಂಗಡಗಳಾದ ಅಹ್ಮದ್ದೀಯರು, ಶಿಯಾಗಳು ಮತ್ತು ಹಜಾರಗಳನ್ನು ಕಡೆಗಣಿಸಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಅಹಮದಿಯಾಗಳು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಕೇರಳವು ಮ್ಯಾನ್ಮಾರ್‌ನಲ್ಲಿರುವ ರೋಹಿಂಗ್ಯಾಗಳು ಮತ್ತು ಶ್ರೀಲಂಕಾದಲ್ಲಿ ಮುಸ್ಲಿಮರ ಸಮಸ್ಯೆಗಳನ್ನು ಎತ್ತಿ ತೋರಿಸಿದೆ, ಅವರು ಈ ದೇಶಗಳಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ ಮತ್ತು ಭಾರತದೊಂದಿಗೆ ಅಂತರಾಷ್ಟ್ರೀಯ ಗಡಿಗಳನ್ನು ಹಂಚಿಕೊಂಡಿದ್ದಾರೆ. ಈ ಕಾಯಿದೆಯು ಪೌರತ್ವವನ್ನು ಪಡೆಯುವ ಪ್ರಯೋಜನದಿಂದ ಮುಸ್ಲಿಮರನ್ನು ಧರ್ಮದ ಆಧಾರದಲ್ಲಿ ಹೊರಗಿಟ್ಟಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದೆ.

ಮೋದಿ ಸರ್ಕಾರವು ಅಂಗೀಕರಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಕಾಯ್ದೆಯು ಡಿಸೆಂಬರ್ 31, 2014ರೊಳಗೆ ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. CAA ಡಿಸೆಂಬರ್ 2019ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿದ್ದು, ಆ ಬಳಿಕ  ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದಿದೆ. ಡಿಸೆಂಬರ್ 31, 2019ರಂದು ‘ಕೇರಳ ವಿಧಾನಸಭೆ’ಯು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ  ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ‘ಪ್ರಜಾಪ್ರಭುತ್ವ ಉಳಿಸಲು ಕೊನೆಯ ಅವಕಾಶ..’ ಎಂದ ಕಾಂಗ್ರೆಸ್

 

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...