HomeಮುಖಪುಟCAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

CAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

- Advertisement -
- Advertisement -

ಕೇಂದ್ರ ಸರ್ಕಾರವು CAA, NPR, NRC ಜಾರಿ ಮಾಡುತ್ತಿರುವುದು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ ಎಂದು ಚಿಂತಕಿ ಮತ್ತು ಹೋರಾಟಗಾರ್ತಿ ಶಬ್ನಂ ಹಶ್ಮಿ ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, CAA, NPR, NRC ಯಿಂದ ಈ ದೇಶದ ಪ್ರಜೆಗಳೇ ಪೌರತ್ವ ಸಾಬೀತು ಮಾಡಬೇಕು ಎನ್ನುವ ದುಸ್ಥಿತಿ ಬಂದಿದೆ. ಭಾರತದ ಬಹುತೇಕ ಮಹಿಳೆಯರ ಬಳಿ ಆಸ್ತಿಯು ಇಲ್ಲ, ದಾಖಲೆಗಳು ಇಲ್ಲ. ಹಾಗಾಗಿ ಮಹಿಳೆಯರು ಮೊದಲ ಬಲಿಪಶುಗಳಾಗುತ್ತಾರೆ ಎಂದರು.

ಇದರಿಂದ ಹಿಂದೂಗಳಿಗೆ ಏನೂ ಆಪಾಯವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಅಸ್ಸಾಮಿನ ಉದಾಹರಣೆಯನ್ನು ನೋಡಿ ದಾಖಲೆ ನೀಡಲಾಗದ 19 ಲಕ್ಷ ಜನರಲ್ಲಿ ಸುಮಾರು 14 ಲಕ್ಷ ಜನರು ಹಿಂದೂಗಳಾಗಿದ್ದಾರೆ. ಪ್ರಜಾತಂತ್ರದ ಮೇಲೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಾಸುದಾರರು, ಗಾಂಧೀಜಿಯವರ ವಾರಸುದಾರರು, ನೇಣಿಗೆ ಕೊರಳೊಡ್ಡಿದ ಶಹೀದ್ ಭಗತ್ ಸಿಂಗ್‌ರವರ ವಾರಸುದಾರರು. ನಾವು ಯಾರಿಗೂ ಹೆದರುವುದಿಲ್ಲ. ಯಾರಿಗೂ ಹೆದರಬೇಕಾಗಿಲ್ಲ ಎಂದು ಕರೆ ನೀಡಿದರು.

1950ರ ದಶಕದಲ್ಲಿ ಕೇರಳದ ಮಹಿಳೆಯರು ಎದೆಮೇಲೆ ಬಟ್ಟೆ ಹಾಕಿಕೊಳ್ಳುವಂತಿರಲಿಲ್ಲ. ಹಾಗೇನಾದರೂ ಬಟ್ಟೆ ಹಾಕಿಕೊಂಡರೆ ತೆರಿಗೆಯನ್ನು ಕಟ್ಟಬೇಕಿತ್ತು. ಬಟ್ಟೆ ಹಾಕಿಕೊಂಡಿದ್ದ ನಂಗೇಲಿ ಎಂಬ ಮಹಿಳೆಯನ್ನು ತೆರಿಗೆ ಕೇಳಲು ಬಂದಾಗ ಆಕೆ ತನ್ನ ಎದೆಯನ್ನೇ ಕೊಯ್ದು ಕೊಟ್ಟಳು. ಇದರಿಂದಾಗಿ ಆಕೆ ಪ್ರಾಣವನ್ನೇ ಕಳೆದುಕೊಂಡಳು. ಆ ನಂತರ ಇದರ ವಿರುದ್ದ ಹೋರಾಟದ ಕಿಚ್ಚು ಹತ್ತಿಕೊಂಡಿತು. ಹಾಗೆಯೇ ತಮಗೆ ಅಗಾಧವಾದ ಅವಮಾನಗಳು ಎದುರಾದರೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಫುಲೆ ಅವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

1909 ರಲ್ಲಿ ನ್ಯೂಯಾರ್ಕ್‌ನ ದುಡಿಯುವ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದ ನೆನಪಿನಲ್ಲಿ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿದೆ. 1910 ರ ನಂತರವೂ ಮಹಿಳಾ ಹಕ್ಕುಗಳಿಗಾಗಿ ಹಲವು ಹೋರಾಟಗಳು ಜರುಗಿವೆ. ಈ ಹೋರಾಟದಲ್ಲಿ ಅಸಂಖ್ಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರನ್ನೂ ನಾವು ಮರೆಯಬಾರದು ಎಂದರು.

ಅಂದು ನಮ್ಮ ಸಮಾನತೆಗಾಗಿ ಹೋರಾಡಿ ಅಂಬೇಡ್ಕರ್ ಸಂವಿಧಾನವನ್ನು ಬರೆದರು. ಸಮಾಜದಲ್ಲಿ ಇಂದು ನಾವು ಭ್ರೂಣ ಹತ್ಯೆಗಳನ್ನು ನೋಡುತ್ತಿದ್ದೇವೆ. ವರದಕ್ಷಿಣೆ ತಗೆದುಕೊಳ್ಳುವಂತ ಗಂಡಸರ ಮನಸ್ಥಿತಿ ಎಂಥದ್ದು ಇರಬಹುದು? ಇಂಕ್ವಿಲಾಬ್ ಜಿಂದಾಬಾದ್ ಎಂದು ಹೊರಗೆ ಹೇಳುವುದು ಸುಲಭ ಆದರೆ ಮನೆಯೋಳಗೆ ಬಂದರೆ ಹಲವಾರು ವಿಚಾರಗಳಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಮನೆಯೊಳಗಿನ ಹೋರಾಟ ಮತ್ತಷ್ಟು ಕಷ್ಟವಾಗಿದೆ ಎಂದರು.

ನಾನು ಮತ್ತು ನನ್ನ ಗಂಡ ವರದಕ್ಷಿಣೆ ತಗೆದುಕೊಳ್ಳುವ ಮದುವೆಗಳಿಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ದೊಡ್ಡ ಬದಲಾವಣೆ ತರೋಲ್ಲ ಅಂತ ಗೊತ್ತು. ಆದರೂ ನಾವು ಇದನ್ನು ಮಾಡುತ್ತೇವೆ. ನೀವು ಕೂಡ ಈ ರೀತಿಯಾಗಿ ಮಾಡಬೇಕು. ಮನೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...