HomeಮುಖಪುಟCAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

CAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

- Advertisement -
- Advertisement -

ಕೇಂದ್ರ ಸರ್ಕಾರವು CAA, NPR, NRC ಜಾರಿ ಮಾಡುತ್ತಿರುವುದು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ ಎಂದು ಚಿಂತಕಿ ಮತ್ತು ಹೋರಾಟಗಾರ್ತಿ ಶಬ್ನಂ ಹಶ್ಮಿ ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, CAA, NPR, NRC ಯಿಂದ ಈ ದೇಶದ ಪ್ರಜೆಗಳೇ ಪೌರತ್ವ ಸಾಬೀತು ಮಾಡಬೇಕು ಎನ್ನುವ ದುಸ್ಥಿತಿ ಬಂದಿದೆ. ಭಾರತದ ಬಹುತೇಕ ಮಹಿಳೆಯರ ಬಳಿ ಆಸ್ತಿಯು ಇಲ್ಲ, ದಾಖಲೆಗಳು ಇಲ್ಲ. ಹಾಗಾಗಿ ಮಹಿಳೆಯರು ಮೊದಲ ಬಲಿಪಶುಗಳಾಗುತ್ತಾರೆ ಎಂದರು.

ಇದರಿಂದ ಹಿಂದೂಗಳಿಗೆ ಏನೂ ಆಪಾಯವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಅಸ್ಸಾಮಿನ ಉದಾಹರಣೆಯನ್ನು ನೋಡಿ ದಾಖಲೆ ನೀಡಲಾಗದ 19 ಲಕ್ಷ ಜನರಲ್ಲಿ ಸುಮಾರು 14 ಲಕ್ಷ ಜನರು ಹಿಂದೂಗಳಾಗಿದ್ದಾರೆ. ಪ್ರಜಾತಂತ್ರದ ಮೇಲೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಾಸುದಾರರು, ಗಾಂಧೀಜಿಯವರ ವಾರಸುದಾರರು, ನೇಣಿಗೆ ಕೊರಳೊಡ್ಡಿದ ಶಹೀದ್ ಭಗತ್ ಸಿಂಗ್‌ರವರ ವಾರಸುದಾರರು. ನಾವು ಯಾರಿಗೂ ಹೆದರುವುದಿಲ್ಲ. ಯಾರಿಗೂ ಹೆದರಬೇಕಾಗಿಲ್ಲ ಎಂದು ಕರೆ ನೀಡಿದರು.

1950ರ ದಶಕದಲ್ಲಿ ಕೇರಳದ ಮಹಿಳೆಯರು ಎದೆಮೇಲೆ ಬಟ್ಟೆ ಹಾಕಿಕೊಳ್ಳುವಂತಿರಲಿಲ್ಲ. ಹಾಗೇನಾದರೂ ಬಟ್ಟೆ ಹಾಕಿಕೊಂಡರೆ ತೆರಿಗೆಯನ್ನು ಕಟ್ಟಬೇಕಿತ್ತು. ಬಟ್ಟೆ ಹಾಕಿಕೊಂಡಿದ್ದ ನಂಗೇಲಿ ಎಂಬ ಮಹಿಳೆಯನ್ನು ತೆರಿಗೆ ಕೇಳಲು ಬಂದಾಗ ಆಕೆ ತನ್ನ ಎದೆಯನ್ನೇ ಕೊಯ್ದು ಕೊಟ್ಟಳು. ಇದರಿಂದಾಗಿ ಆಕೆ ಪ್ರಾಣವನ್ನೇ ಕಳೆದುಕೊಂಡಳು. ಆ ನಂತರ ಇದರ ವಿರುದ್ದ ಹೋರಾಟದ ಕಿಚ್ಚು ಹತ್ತಿಕೊಂಡಿತು. ಹಾಗೆಯೇ ತಮಗೆ ಅಗಾಧವಾದ ಅವಮಾನಗಳು ಎದುರಾದರೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಫುಲೆ ಅವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

1909 ರಲ್ಲಿ ನ್ಯೂಯಾರ್ಕ್‌ನ ದುಡಿಯುವ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದ ನೆನಪಿನಲ್ಲಿ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿದೆ. 1910 ರ ನಂತರವೂ ಮಹಿಳಾ ಹಕ್ಕುಗಳಿಗಾಗಿ ಹಲವು ಹೋರಾಟಗಳು ಜರುಗಿವೆ. ಈ ಹೋರಾಟದಲ್ಲಿ ಅಸಂಖ್ಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರನ್ನೂ ನಾವು ಮರೆಯಬಾರದು ಎಂದರು.

ಅಂದು ನಮ್ಮ ಸಮಾನತೆಗಾಗಿ ಹೋರಾಡಿ ಅಂಬೇಡ್ಕರ್ ಸಂವಿಧಾನವನ್ನು ಬರೆದರು. ಸಮಾಜದಲ್ಲಿ ಇಂದು ನಾವು ಭ್ರೂಣ ಹತ್ಯೆಗಳನ್ನು ನೋಡುತ್ತಿದ್ದೇವೆ. ವರದಕ್ಷಿಣೆ ತಗೆದುಕೊಳ್ಳುವಂತ ಗಂಡಸರ ಮನಸ್ಥಿತಿ ಎಂಥದ್ದು ಇರಬಹುದು? ಇಂಕ್ವಿಲಾಬ್ ಜಿಂದಾಬಾದ್ ಎಂದು ಹೊರಗೆ ಹೇಳುವುದು ಸುಲಭ ಆದರೆ ಮನೆಯೋಳಗೆ ಬಂದರೆ ಹಲವಾರು ವಿಚಾರಗಳಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಮನೆಯೊಳಗಿನ ಹೋರಾಟ ಮತ್ತಷ್ಟು ಕಷ್ಟವಾಗಿದೆ ಎಂದರು.

ನಾನು ಮತ್ತು ನನ್ನ ಗಂಡ ವರದಕ್ಷಿಣೆ ತಗೆದುಕೊಳ್ಳುವ ಮದುವೆಗಳಿಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ದೊಡ್ಡ ಬದಲಾವಣೆ ತರೋಲ್ಲ ಅಂತ ಗೊತ್ತು. ಆದರೂ ನಾವು ಇದನ್ನು ಮಾಡುತ್ತೇವೆ. ನೀವು ಕೂಡ ಈ ರೀತಿಯಾಗಿ ಮಾಡಬೇಕು. ಮನೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...