HomeಮುಖಪುಟCAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

CAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

- Advertisement -
- Advertisement -

ಕೇಂದ್ರ ಸರ್ಕಾರವು CAA, NPR, NRC ಜಾರಿ ಮಾಡುತ್ತಿರುವುದು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ ಎಂದು ಚಿಂತಕಿ ಮತ್ತು ಹೋರಾಟಗಾರ್ತಿ ಶಬ್ನಂ ಹಶ್ಮಿ ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, CAA, NPR, NRC ಯಿಂದ ಈ ದೇಶದ ಪ್ರಜೆಗಳೇ ಪೌರತ್ವ ಸಾಬೀತು ಮಾಡಬೇಕು ಎನ್ನುವ ದುಸ್ಥಿತಿ ಬಂದಿದೆ. ಭಾರತದ ಬಹುತೇಕ ಮಹಿಳೆಯರ ಬಳಿ ಆಸ್ತಿಯು ಇಲ್ಲ, ದಾಖಲೆಗಳು ಇಲ್ಲ. ಹಾಗಾಗಿ ಮಹಿಳೆಯರು ಮೊದಲ ಬಲಿಪಶುಗಳಾಗುತ್ತಾರೆ ಎಂದರು.

ಇದರಿಂದ ಹಿಂದೂಗಳಿಗೆ ಏನೂ ಆಪಾಯವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಅಸ್ಸಾಮಿನ ಉದಾಹರಣೆಯನ್ನು ನೋಡಿ ದಾಖಲೆ ನೀಡಲಾಗದ 19 ಲಕ್ಷ ಜನರಲ್ಲಿ ಸುಮಾರು 14 ಲಕ್ಷ ಜನರು ಹಿಂದೂಗಳಾಗಿದ್ದಾರೆ. ಪ್ರಜಾತಂತ್ರದ ಮೇಲೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಾಸುದಾರರು, ಗಾಂಧೀಜಿಯವರ ವಾರಸುದಾರರು, ನೇಣಿಗೆ ಕೊರಳೊಡ್ಡಿದ ಶಹೀದ್ ಭಗತ್ ಸಿಂಗ್‌ರವರ ವಾರಸುದಾರರು. ನಾವು ಯಾರಿಗೂ ಹೆದರುವುದಿಲ್ಲ. ಯಾರಿಗೂ ಹೆದರಬೇಕಾಗಿಲ್ಲ ಎಂದು ಕರೆ ನೀಡಿದರು.

1950ರ ದಶಕದಲ್ಲಿ ಕೇರಳದ ಮಹಿಳೆಯರು ಎದೆಮೇಲೆ ಬಟ್ಟೆ ಹಾಕಿಕೊಳ್ಳುವಂತಿರಲಿಲ್ಲ. ಹಾಗೇನಾದರೂ ಬಟ್ಟೆ ಹಾಕಿಕೊಂಡರೆ ತೆರಿಗೆಯನ್ನು ಕಟ್ಟಬೇಕಿತ್ತು. ಬಟ್ಟೆ ಹಾಕಿಕೊಂಡಿದ್ದ ನಂಗೇಲಿ ಎಂಬ ಮಹಿಳೆಯನ್ನು ತೆರಿಗೆ ಕೇಳಲು ಬಂದಾಗ ಆಕೆ ತನ್ನ ಎದೆಯನ್ನೇ ಕೊಯ್ದು ಕೊಟ್ಟಳು. ಇದರಿಂದಾಗಿ ಆಕೆ ಪ್ರಾಣವನ್ನೇ ಕಳೆದುಕೊಂಡಳು. ಆ ನಂತರ ಇದರ ವಿರುದ್ದ ಹೋರಾಟದ ಕಿಚ್ಚು ಹತ್ತಿಕೊಂಡಿತು. ಹಾಗೆಯೇ ತಮಗೆ ಅಗಾಧವಾದ ಅವಮಾನಗಳು ಎದುರಾದರೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಫುಲೆ ಅವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

1909 ರಲ್ಲಿ ನ್ಯೂಯಾರ್ಕ್‌ನ ದುಡಿಯುವ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದ ನೆನಪಿನಲ್ಲಿ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿದೆ. 1910 ರ ನಂತರವೂ ಮಹಿಳಾ ಹಕ್ಕುಗಳಿಗಾಗಿ ಹಲವು ಹೋರಾಟಗಳು ಜರುಗಿವೆ. ಈ ಹೋರಾಟದಲ್ಲಿ ಅಸಂಖ್ಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರನ್ನೂ ನಾವು ಮರೆಯಬಾರದು ಎಂದರು.

ಅಂದು ನಮ್ಮ ಸಮಾನತೆಗಾಗಿ ಹೋರಾಡಿ ಅಂಬೇಡ್ಕರ್ ಸಂವಿಧಾನವನ್ನು ಬರೆದರು. ಸಮಾಜದಲ್ಲಿ ಇಂದು ನಾವು ಭ್ರೂಣ ಹತ್ಯೆಗಳನ್ನು ನೋಡುತ್ತಿದ್ದೇವೆ. ವರದಕ್ಷಿಣೆ ತಗೆದುಕೊಳ್ಳುವಂತ ಗಂಡಸರ ಮನಸ್ಥಿತಿ ಎಂಥದ್ದು ಇರಬಹುದು? ಇಂಕ್ವಿಲಾಬ್ ಜಿಂದಾಬಾದ್ ಎಂದು ಹೊರಗೆ ಹೇಳುವುದು ಸುಲಭ ಆದರೆ ಮನೆಯೋಳಗೆ ಬಂದರೆ ಹಲವಾರು ವಿಚಾರಗಳಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಮನೆಯೊಳಗಿನ ಹೋರಾಟ ಮತ್ತಷ್ಟು ಕಷ್ಟವಾಗಿದೆ ಎಂದರು.

ನಾನು ಮತ್ತು ನನ್ನ ಗಂಡ ವರದಕ್ಷಿಣೆ ತಗೆದುಕೊಳ್ಳುವ ಮದುವೆಗಳಿಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ದೊಡ್ಡ ಬದಲಾವಣೆ ತರೋಲ್ಲ ಅಂತ ಗೊತ್ತು. ಆದರೂ ನಾವು ಇದನ್ನು ಮಾಡುತ್ತೇವೆ. ನೀವು ಕೂಡ ಈ ರೀತಿಯಾಗಿ ಮಾಡಬೇಕು. ಮನೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...