HomeಮುಖಪುಟCAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

CAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

- Advertisement -
- Advertisement -

ಕೇಂದ್ರ ಸರ್ಕಾರವು CAA, NPR, NRC ಜಾರಿ ಮಾಡುತ್ತಿರುವುದು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ ಎಂದು ಚಿಂತಕಿ ಮತ್ತು ಹೋರಾಟಗಾರ್ತಿ ಶಬ್ನಂ ಹಶ್ಮಿ ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, CAA, NPR, NRC ಯಿಂದ ಈ ದೇಶದ ಪ್ರಜೆಗಳೇ ಪೌರತ್ವ ಸಾಬೀತು ಮಾಡಬೇಕು ಎನ್ನುವ ದುಸ್ಥಿತಿ ಬಂದಿದೆ. ಭಾರತದ ಬಹುತೇಕ ಮಹಿಳೆಯರ ಬಳಿ ಆಸ್ತಿಯು ಇಲ್ಲ, ದಾಖಲೆಗಳು ಇಲ್ಲ. ಹಾಗಾಗಿ ಮಹಿಳೆಯರು ಮೊದಲ ಬಲಿಪಶುಗಳಾಗುತ್ತಾರೆ ಎಂದರು.

ಇದರಿಂದ ಹಿಂದೂಗಳಿಗೆ ಏನೂ ಆಪಾಯವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಅಸ್ಸಾಮಿನ ಉದಾಹರಣೆಯನ್ನು ನೋಡಿ ದಾಖಲೆ ನೀಡಲಾಗದ 19 ಲಕ್ಷ ಜನರಲ್ಲಿ ಸುಮಾರು 14 ಲಕ್ಷ ಜನರು ಹಿಂದೂಗಳಾಗಿದ್ದಾರೆ. ಪ್ರಜಾತಂತ್ರದ ಮೇಲೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಾಸುದಾರರು, ಗಾಂಧೀಜಿಯವರ ವಾರಸುದಾರರು, ನೇಣಿಗೆ ಕೊರಳೊಡ್ಡಿದ ಶಹೀದ್ ಭಗತ್ ಸಿಂಗ್‌ರವರ ವಾರಸುದಾರರು. ನಾವು ಯಾರಿಗೂ ಹೆದರುವುದಿಲ್ಲ. ಯಾರಿಗೂ ಹೆದರಬೇಕಾಗಿಲ್ಲ ಎಂದು ಕರೆ ನೀಡಿದರು.

1950ರ ದಶಕದಲ್ಲಿ ಕೇರಳದ ಮಹಿಳೆಯರು ಎದೆಮೇಲೆ ಬಟ್ಟೆ ಹಾಕಿಕೊಳ್ಳುವಂತಿರಲಿಲ್ಲ. ಹಾಗೇನಾದರೂ ಬಟ್ಟೆ ಹಾಕಿಕೊಂಡರೆ ತೆರಿಗೆಯನ್ನು ಕಟ್ಟಬೇಕಿತ್ತು. ಬಟ್ಟೆ ಹಾಕಿಕೊಂಡಿದ್ದ ನಂಗೇಲಿ ಎಂಬ ಮಹಿಳೆಯನ್ನು ತೆರಿಗೆ ಕೇಳಲು ಬಂದಾಗ ಆಕೆ ತನ್ನ ಎದೆಯನ್ನೇ ಕೊಯ್ದು ಕೊಟ್ಟಳು. ಇದರಿಂದಾಗಿ ಆಕೆ ಪ್ರಾಣವನ್ನೇ ಕಳೆದುಕೊಂಡಳು. ಆ ನಂತರ ಇದರ ವಿರುದ್ದ ಹೋರಾಟದ ಕಿಚ್ಚು ಹತ್ತಿಕೊಂಡಿತು. ಹಾಗೆಯೇ ತಮಗೆ ಅಗಾಧವಾದ ಅವಮಾನಗಳು ಎದುರಾದರೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಫುಲೆ ಅವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

1909 ರಲ್ಲಿ ನ್ಯೂಯಾರ್ಕ್‌ನ ದುಡಿಯುವ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದ ನೆನಪಿನಲ್ಲಿ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿದೆ. 1910 ರ ನಂತರವೂ ಮಹಿಳಾ ಹಕ್ಕುಗಳಿಗಾಗಿ ಹಲವು ಹೋರಾಟಗಳು ಜರುಗಿವೆ. ಈ ಹೋರಾಟದಲ್ಲಿ ಅಸಂಖ್ಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರನ್ನೂ ನಾವು ಮರೆಯಬಾರದು ಎಂದರು.

ಅಂದು ನಮ್ಮ ಸಮಾನತೆಗಾಗಿ ಹೋರಾಡಿ ಅಂಬೇಡ್ಕರ್ ಸಂವಿಧಾನವನ್ನು ಬರೆದರು. ಸಮಾಜದಲ್ಲಿ ಇಂದು ನಾವು ಭ್ರೂಣ ಹತ್ಯೆಗಳನ್ನು ನೋಡುತ್ತಿದ್ದೇವೆ. ವರದಕ್ಷಿಣೆ ತಗೆದುಕೊಳ್ಳುವಂತ ಗಂಡಸರ ಮನಸ್ಥಿತಿ ಎಂಥದ್ದು ಇರಬಹುದು? ಇಂಕ್ವಿಲಾಬ್ ಜಿಂದಾಬಾದ್ ಎಂದು ಹೊರಗೆ ಹೇಳುವುದು ಸುಲಭ ಆದರೆ ಮನೆಯೋಳಗೆ ಬಂದರೆ ಹಲವಾರು ವಿಚಾರಗಳಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಮನೆಯೊಳಗಿನ ಹೋರಾಟ ಮತ್ತಷ್ಟು ಕಷ್ಟವಾಗಿದೆ ಎಂದರು.

ನಾನು ಮತ್ತು ನನ್ನ ಗಂಡ ವರದಕ್ಷಿಣೆ ತಗೆದುಕೊಳ್ಳುವ ಮದುವೆಗಳಿಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ದೊಡ್ಡ ಬದಲಾವಣೆ ತರೋಲ್ಲ ಅಂತ ಗೊತ್ತು. ಆದರೂ ನಾವು ಇದನ್ನು ಮಾಡುತ್ತೇವೆ. ನೀವು ಕೂಡ ಈ ರೀತಿಯಾಗಿ ಮಾಡಬೇಕು. ಮನೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...