Homeಮುಖಪುಟಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

ಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

- Advertisement -
- Advertisement -

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ!

ನನಗೂ ಒಬ್ಬ ಹಿರಿಯ ಕವಯತ್ರಿ ಪ್ರಶ್ನೆ ಕೇಳಿದರು. ಮೋದಿ ಪರವೋ? ವಿರೋಧವೋ? ನಾನು ಹೇಳಿದೆ ಅವರ ಪರವೂ ಅಲ್ಲ ವಿರೋಧವೂ ಅಲ್ಲ. ನಾನು ನನ್ನಂಥವರು ಸಂವಿಧಾನದ ಪರ. ಆದರೆ ಮೋದಿಯವರ ಬಗ್ಗೆ ಗೌರವವಿದೆ. ಏಕೆಂದರೆ ಅವರು ಬಿಜೆಪಿ ಪ್ರಧಾನಿಯಲ್ಲ-ದೇಶದ ಪ್ರಧಾನಿ. ಹಾಗಂತ ಅವರು ತರುವ ಕಾಯ್ದೆ ತಿದ್ದುಪಡಿಗಳನ್ನೆಲ್ಲಾ ಒಪ್ಪಿಕೊಳ್ಳಬೇಕಿಲ್ಲ. ರಾಷ್ಟ್ರೀಯತೆಯ ಸೋಗಿನಲ್ಲಿ ಹುಸಿದೇಶಭಕ್ತಿ ತೋರುವ ಬಹುಮತವಿದೆ ಎಂಬ ಅಹಂಕಾರದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬೇರನ್ನೇ ಅಲ್ಲಾಡಿಸಬಹುದೆ. ಪೌರತ್ವ ಕಾಯ್ದೆ ತಿದ್ದುಪಡಿ ಮೂಲಕ ಸಿಎಎ ಮತ್ತು ಎನ್‍ಆರ್‍ಸಿ ತರುವ ತುರ್ತು ಏನಿತು? ಇದು ಸಂವಿಧಾನದ 14, 15ರ ನಿಯಮದ ಉಲ್ಲಂಘನೆಯಲ್ಲವೆ. ಪಾಕಿಸ್ತಾನ, ಬಾಂಗ್ಲಾ, ಆಫ್ಘಾನಿಸ್ಥಾನದಿಂದ ಧರ್ಮದ ಹಿಂಸೆಗೆ ಒಳಗಾಗಿ ಬಂದ ಹಿಂದೂ, ಜೈನ್, ಬೌದ್ಧ, ಸಿಖ್, ಪಾರ್ಸಿ, ಕ್ರೈಸ್ತ ಎಲ್ಲರಿಗೂ ಪೌರತ್ವ ಕೊಡುತ್ತ್ತದೆ, ಮುಸ್ಲಿಮರನ್ನು ಬಿಟ್ಟು. ಇದು ಧರ್ಮಾಧಾರಿತ ತಾರತಮ್ಯ ಹಾಗೂ ಅಸಂವಿಧಾನಿಕ. ದೇಶದ ಸ್ವಾತಂತ್ರ್ಯಕ್ಕಾಗಿ ಹಿಂದೂಗಳ ಜೊತೆ ಮುಸಲ್ಮಾನರೂ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ, ಜೈಲು ಸೇರಿದರೂ ಕ್ಷಮಾಪಣೆ ಕೇಳಿ ಆಚೆ ಬಂದವರಿಗೆಲ್ಲಾ ದೇಶದಲ್ಲಿ ಜಾಗವಿದೆ. ಇವರಿಗಿಲ್ಲವೆ? ಈ ದೇಶದ ಮುಸ್ಲಿಮರಿಗೆ ಇದು ಅನ್ವಯಿಸಿಲ್ಲವಂತೆ 1987 ರ ಮೊದಲು ಹುಟ್ಟಿದವರೆಲ್ಲಾ ಭಾರತೀಯರು, ಉಳಿದವರು ದಾಖಲೆ ಕೊಡಬೇಕೆಂಬುದಾದರೂ ಎಷ್ಟು ಸರಿ? ದುಡ್ಡಿರುವ ಮಂದಿ ಎಂತಹ ದಾಖಲೆಗಳನ್ನೂ ಕೊಂಡುಕೊಡಬಲ್ಲರು. ಬದುಕಿರುವವರಿಗೂ ದುಡ್ಡು ಕೊಟ್ಟರೆ ಸಾವಿನ ಪ್ರಮಾಣಪತ್ರ ಸಿಗುವಂತಹ ದುಷ್ಟ ವ್ಯವಸ್ಥೆಯಲ್ಲಿ ಬಡಬಗ್ಗರು, ಅನಕ್ಷರಸ್ಥರು, ಆದಿವಾಸಿಗಳು, ಬುಡಕಟ್ಟು ಜನರ ಪಾಡೇನು? ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುತ್ತಾರೆ. ದೇಶವಾಸಿಗಳಿಗೆ ದಾಖಲೆ ಬೇಕಂತೆ! ಹೊರಗಿನಿಂದ ಬಂದವರಿಗೆಲ್ಲಾ ಪೌರತ್ವ ದಯಪಾಲಿಸಿದರೆ ಅವರಿಗೆಲ್ಲಾ ಊಟ, ವಸತಿ, ಉದ್ಯೋಗ, ಜಮೀನು ಜಹಗೀರು ಕೊಡುವಷ್ಟು ದೇಶ ಶಕ್ತವೆ. ದೇಶದ ಒಳಿತಿಗಾಗಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿರುವವರ ಅಂತರಂಗದಲ್ಲಿ ಒಳಿತು ಕಾಣುತ್ತಿಲ್ಲ. ಒಡೆದು ಆಳುವ ನೀತಿ ಗೋಚರವಾಗುತ್ತಿದೆ. ಪ್ರತಿವರ್ಷ 2 ಕೋಟಿ ಉದ್ಯೋಗವೆಂದರು. ಎಲ್ಲರ ಅಕೌಂಟಿಗೆ 15 ಲಕ್ಷವೆಂದರು. ನೋಟ್‍ಬ್ಯಾನ್ ಮಾಡಿ ಕಪ್ಪುಹಣ ಕೋಟಿ ಕೋಟಿ ತರುತ್ತೇವೆಂದರು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯೇ ದಿವಾಳಿ ಎದ್ದಿದೆ. ಆರ್ಥಿಕ ಕಾರ್ಯದರ್ಶಿ ಸುಬ್ರಹ್ಮಣ್ಯ ಅವರೇ ವಿಷಾದಿಸಿದ್ದಾಯಿತು. ಆರ್‍ಬಿಐನಿಂದ ಕೋಟಿಗಟ್ಟಲೆ ಹಣ ಪಡೆದಿದ್ದಾಯಿತು. ಜಿಡಿಪಿ ದರ ಕುಸಿಯುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ ಏರುತ್ತಿದೆ. ರೈತರಿಗೆ ದುಪ್ಪಟ್ಟು ಆದಾಯವೆಂದರು. ರೈತರ ಆತ್ಮಹತ್ಯೆಗಳು ನಡೆದೇ ಇವೆ. ಇದಕ್ಕೆಲ್ಲ ಪರಿಹಾರ ಹುಡುಕುವುದುನ್ನು ಬಿಟ್ಟು “ಎಲ್ಲಾ ಬಿಟ್ಟು ಮಗ ಭಂಗಿ ನೆಟ್ಟ” ಎಂಬಂತೆ ಸಿಎಎ ಎನ್‍ಸಿಆರ್ ತರುವ ತುರ್ತು ಅಗತ್ಯವೇನಿತ್ತು?

ನಡೆಯುತ್ತಿರುವ ಗಲಭೆಗಳಿಗೆ ಕಾಂಗ್ರೆಸಿಗರ ಕುಮ್ಮಕ್ಕಿದೆಯೆಂದರೆ ನಂಬಬಹುದೆ. ಕಾಂಗ್ರೆಸ್ ಎಲ್ಲಾ ಕಡೆ ಸೋತು ಅರ್ಧ ಸತ್ತಿದೆ. ಸಾವಿರಾರು ಯುವಕಯುವತಿಯರನ್ನು ಒಂದೆಡೆ ಸೇರಿಸುವ, ಹೋರಾಟ ರೂಪಿಸುವ ಶಕ್ತಿ ಅವರಿಗೆಲ್ಲಿಂದ ಬಂದೀತು. ಪ್ರಧಾನಿಯ ಹೆಸರಿಡಿದು ಸ್ಲೋಗನ್ ಹಾಕುತ್ತಿದ್ದ ಅದೇ ಯುವಶಕ್ತಿಯೇ ಇಂದು ನ್ಯಾಯಕ್ಕಾಗಿ ಬೀದಿಗಿಳಿದಿದೆ. ಅವರಿಗೆಲ್ಲಾ ಹುಸಿ ದೇಶಭಕ್ತಿ, ರಾಷ್ಟ್ರೀಯತೆ ನೆಪದಲ್ಲಿ ಕವಿದಿದ್ದ ಮಂಜು ಕರಗಿದಂತಿದೆ. ದೇಶದ ವಿಭಜನೆಯ ಕಾರ್ಯ ನೆಹರು ಕಾಲದಲ್ಲೇ ನಡೆದಿತ್ತು ಎಂದರೆ ನಂಬಬೇಕೆ. ಇತಿಹಾಸ ಓದಿದವರಿಗೆ ಗೊತ್ತಿದೆ. ಹಿಂದುತ್ವದ ಆರಾಧಕ ಸಾವರ್ಕರ್ ಮತ್ತು ಮುಸ್ಲಿಂ ಲೀಗಿನ ಜಿನ್ನಾ ಇದರ ರೂವಾರಿಗಳೆಂಬುದು ಗೊತ್ತಿದ್ದೂ ಜಾಣ ಮರವೆ? ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ವಿಶ್ವಾಸ್ ಅನ್ನುವವರು ಉತ್ತರ ಪ್ರದೇಶ, ದೆಹಲಿ ಇತ್ಯಾದಿ ಕಡೆಗಳಲ್ಲಿ ವೃತ್ತ, ಬೀದಿಗಳಿಗೆ ಇಟ್ಟ ಮುಸ್ಲಿಂ ನಾಯಕರ ಹೆಸರನ್ನು ಬದಲಿಸೋದು, ಮುಸ್ಲಿಮರಿಗೆ ಸೀಟು ಕೊಡದಿರೋದು. ಮುಸಲ್ಮಾನರ ಓಟಿಲ್ಲದೇ ಗೆಲ್ಲುತ್ತೇವೆಂದು ಬೀಗುವುದು. ಅದೆಂತಹ ವಿಶ್ವಾಸ! ಸಂವಿಧಾನ ಬದಲಿಸುತ್ತೇವೆಂದು ಹೂಂಕರಿಸೋದು. ಅದನ್ನೇ ದೆಹಲಿಯಂತಹ ಸ್ಥಳದಲ್ಲೇ ಸುಡೋದು. ಗಾಂಧೀಜಿಯನ್ನು ಕೊಂದವನಿಗೆ ಗುಡಿಕಟ್ಟಲು ಹೊರಡೋದು ಎಂತಹ ವಿಕಾಸ? ಪೌರತ್ವ ಕಾಯ್ದೆ ತಿದ್ದುಪಡಿ ಗದ್ದಲದಲ್ಲಿ ಅಗತ್ಯ ದಾಖಲೆಗಳಿಲ್ಲದ ಭಾರತೀಯರೂ ಅಕ್ರಮ ವಲಸಿಗರಾಗಿ ಬಿಡುವ ಸಾಧ್ಯತೆಯಿದೆ. ಎನ್‍ಆರ್‍ಸಿ ಪೂರಕವಾಗಿಯೇ ಎನ್‍ಪಿಆರ್ ತರಲು ಸಿದ್ಧತೆಗಳು ನಡೆದಿವೆ. ಹೀಗಾಗಿಯೇ ಬಿಜೆಪಿಯನ್ನು ಬೆಂಬಲಿಸುವ ಪಾಸ್ವಾನ್, ನಿತೀಶ್‍ಕುಮಾರ್, ಜಗನ್ ಮೋಹನ್‍ರೆಡ್ಡಿ ಅಂಥವರು ಕಾಯ್ದೆ ವಿರೋಧವಾಗಿದ್ದಾರೆ. ಹತ್ತು ರಾಜ್ಯ ಗಳೇಕೆ ವಿರೋಧಿಸಿವೆ. ಕರ್ನಾಟಕ ಒಂದೇ ಹೊತ್ತಿ ಉರಿಯುತ್ತಿಲ್ಲ. ದೆಹಲಿ, ಜಾಮಿಯ, ಗುಜರಾತ್, ಉತ್ತರ ಪ್ರದೇಶ, ಬಿಹಾರ್, ಚೆನ್ನೈ, ಮಧ್ಯ ಪ್ರದೇಶ ಅನೇಕ ರಾಜ್ಯಗಳಲ್ಲಿ ಯುವಕ ಯುವತಿಯರು ಬೀದಿಗಿಳಿದು ದಂಗೆ ಎಂದಿದ್ದಾರೆ. ವಿರೋಧಿಸಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆಂದರೆ ಭಾರತವೇನು ಇವರಪ್ಪನ ಪಿತ್ರಾರ್ಜಿತ ಆಸ್ತಿಯೇ?

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ! ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗ ಬಿಟ್ಟರೆ ವಿರೋಧ ಪಕ್ಷವಾಗಿ ಪ್ರಶ್ನೆ ಮಾಡಬೇಕಾದ ಅನೇಕ ಮಾಧ್ಯಮಗಳು ಆಡಳಿತದ ಪರವಾಗಿ ಪುಂಗಿ ಊದುತ್ತಿವೆ. ಮಾರಿಕೊಂಡಿರಲೂಬಹುದು. ನ್ಯಾಯಾಂಗವನ್ನು ಅನುಮಾನಿಸುವಂತಾಗಿದೆ. ಬಾಬ್ರಿ ಮಸೀದಿ ಕೆಡವಿದ್ದು, ಅಪರಾಧವೆನ್ನುವ ನ್ಯಾಯಾಂಗ ಶಿಕ್ಷೆ ಬಗ್ಗೆ ಚಕಾರವೆತ್ತೋಲ್ಲ. ಅನರ್ಹ ಶಾಸಕರ ಅನರ್ಹತೆ ಒಪ್ಪಿಕೊಂಡರೂ ಶಿಕ್ಷೆಯಿಂದ ಮಾಫಿ! ಸರ್ಕಾರದ ವಿರುದ್ಧ ತೀರ್ಪು ನೀಡದಿರೆ ದೇಶದ್ರೋಹಿಗಳಾಗಿ ಬಿಡುತ್ತೇವೆಂಬ ಅಧೀರತೆ ಇದ್ದೀತೆ! ಇಂದಿನ ಸಂದಿಗ್ಧದಲ್ಲಿ ಯುವಜನತೆ ಜಾಗೃತರಾಗಿರೋದು ಸಂತೋಷವೆನಿಸಿದರೂ ಪ್ರತಿಭಟನೆಗಳು ಶಾಂತಿಯುತವಾಗಿರಲಿ. ಜೀವತೆತ್ತ 20 ಜನರಲ್ಲಿ ಯಾರೊಬ್ಬರೂ ಯಾವ ಪಕ್ಷದ ಲೀಡರ್‍ಗಳಲ್ಲ ಅಮಾಯಕರು. ಇಡೀ ದೇಶ ಗಲಭೆಯ ಗೂಡಾಗೋದು ಶ್ರೇಯಸ್ಸಲ್ಲ. ದ್ವೇಷ ಅಳಿಸಿ, ದೇಶ ಉಳಿಸಬೇಕಿದೆ. ಜಾತಿಕಳೆಯ ಕಿತ್ತು ಪ್ರೀತಿಯ ಬೆಳೆ ತೆಗೆಯಬೇಕಿದೆ, ಹಾಗಾಗಲಿ ಎಂಬುದಷ್ಟೇ ನನ್ನ ಲೇಖನದ ಉದ್ದೇಶ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಾರ್ಮಿಕ ಕಿರುಕುಳ ನೀಡು‌ವ ದೇಶಗಳ ನಡೆ ಎದುರು ಜಗತ್ತಿನ ಮಟ್ಟದಲ್ಲಿ ಹೋರಾಟ ರೂಪಿಸಿ, ಆ ಬಗೆಯ ನಡೆಯನ್ನು ಕೊನೆಗಾಣಿಸಲು ಎಣಗಬೇಕೆ ಹೊರತು, ಕಿರುಕುಳಕ್ಕೆ ಒಳಗಾದವರನ್ನು ಕರೆಸಿಕೊಂಡು ಸಿಟಿಜನ್.ಶಿಪ್ ಕೊಡುವುದು ಈವೊತ್ತಿನ ತಳಮಳಕ್ಕೆ ಪರಿಹಾರವಾಗಲಾರದು. ತಾನು ಹುಟ್ಟಿಬೆಳೆದ ನಾಡಿನ್ನು ಬಿಟ್ಟುಬರುವುದಕ್ಕೆ, ಕಿರುಕುಳ ಕೊಡುವವರಿಗೆ ಇಂಬು ಕೊಡುವಂತಿದೆ ಸಿ.ಎ.ಎ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...