Homeಮುಖಪುಟಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

ಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

- Advertisement -
- Advertisement -

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ!

ನನಗೂ ಒಬ್ಬ ಹಿರಿಯ ಕವಯತ್ರಿ ಪ್ರಶ್ನೆ ಕೇಳಿದರು. ಮೋದಿ ಪರವೋ? ವಿರೋಧವೋ? ನಾನು ಹೇಳಿದೆ ಅವರ ಪರವೂ ಅಲ್ಲ ವಿರೋಧವೂ ಅಲ್ಲ. ನಾನು ನನ್ನಂಥವರು ಸಂವಿಧಾನದ ಪರ. ಆದರೆ ಮೋದಿಯವರ ಬಗ್ಗೆ ಗೌರವವಿದೆ. ಏಕೆಂದರೆ ಅವರು ಬಿಜೆಪಿ ಪ್ರಧಾನಿಯಲ್ಲ-ದೇಶದ ಪ್ರಧಾನಿ. ಹಾಗಂತ ಅವರು ತರುವ ಕಾಯ್ದೆ ತಿದ್ದುಪಡಿಗಳನ್ನೆಲ್ಲಾ ಒಪ್ಪಿಕೊಳ್ಳಬೇಕಿಲ್ಲ. ರಾಷ್ಟ್ರೀಯತೆಯ ಸೋಗಿನಲ್ಲಿ ಹುಸಿದೇಶಭಕ್ತಿ ತೋರುವ ಬಹುಮತವಿದೆ ಎಂಬ ಅಹಂಕಾರದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬೇರನ್ನೇ ಅಲ್ಲಾಡಿಸಬಹುದೆ. ಪೌರತ್ವ ಕಾಯ್ದೆ ತಿದ್ದುಪಡಿ ಮೂಲಕ ಸಿಎಎ ಮತ್ತು ಎನ್‍ಆರ್‍ಸಿ ತರುವ ತುರ್ತು ಏನಿತು? ಇದು ಸಂವಿಧಾನದ 14, 15ರ ನಿಯಮದ ಉಲ್ಲಂಘನೆಯಲ್ಲವೆ. ಪಾಕಿಸ್ತಾನ, ಬಾಂಗ್ಲಾ, ಆಫ್ಘಾನಿಸ್ಥಾನದಿಂದ ಧರ್ಮದ ಹಿಂಸೆಗೆ ಒಳಗಾಗಿ ಬಂದ ಹಿಂದೂ, ಜೈನ್, ಬೌದ್ಧ, ಸಿಖ್, ಪಾರ್ಸಿ, ಕ್ರೈಸ್ತ ಎಲ್ಲರಿಗೂ ಪೌರತ್ವ ಕೊಡುತ್ತ್ತದೆ, ಮುಸ್ಲಿಮರನ್ನು ಬಿಟ್ಟು. ಇದು ಧರ್ಮಾಧಾರಿತ ತಾರತಮ್ಯ ಹಾಗೂ ಅಸಂವಿಧಾನಿಕ. ದೇಶದ ಸ್ವಾತಂತ್ರ್ಯಕ್ಕಾಗಿ ಹಿಂದೂಗಳ ಜೊತೆ ಮುಸಲ್ಮಾನರೂ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ, ಜೈಲು ಸೇರಿದರೂ ಕ್ಷಮಾಪಣೆ ಕೇಳಿ ಆಚೆ ಬಂದವರಿಗೆಲ್ಲಾ ದೇಶದಲ್ಲಿ ಜಾಗವಿದೆ. ಇವರಿಗಿಲ್ಲವೆ? ಈ ದೇಶದ ಮುಸ್ಲಿಮರಿಗೆ ಇದು ಅನ್ವಯಿಸಿಲ್ಲವಂತೆ 1987 ರ ಮೊದಲು ಹುಟ್ಟಿದವರೆಲ್ಲಾ ಭಾರತೀಯರು, ಉಳಿದವರು ದಾಖಲೆ ಕೊಡಬೇಕೆಂಬುದಾದರೂ ಎಷ್ಟು ಸರಿ? ದುಡ್ಡಿರುವ ಮಂದಿ ಎಂತಹ ದಾಖಲೆಗಳನ್ನೂ ಕೊಂಡುಕೊಡಬಲ್ಲರು. ಬದುಕಿರುವವರಿಗೂ ದುಡ್ಡು ಕೊಟ್ಟರೆ ಸಾವಿನ ಪ್ರಮಾಣಪತ್ರ ಸಿಗುವಂತಹ ದುಷ್ಟ ವ್ಯವಸ್ಥೆಯಲ್ಲಿ ಬಡಬಗ್ಗರು, ಅನಕ್ಷರಸ್ಥರು, ಆದಿವಾಸಿಗಳು, ಬುಡಕಟ್ಟು ಜನರ ಪಾಡೇನು? ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುತ್ತಾರೆ. ದೇಶವಾಸಿಗಳಿಗೆ ದಾಖಲೆ ಬೇಕಂತೆ! ಹೊರಗಿನಿಂದ ಬಂದವರಿಗೆಲ್ಲಾ ಪೌರತ್ವ ದಯಪಾಲಿಸಿದರೆ ಅವರಿಗೆಲ್ಲಾ ಊಟ, ವಸತಿ, ಉದ್ಯೋಗ, ಜಮೀನು ಜಹಗೀರು ಕೊಡುವಷ್ಟು ದೇಶ ಶಕ್ತವೆ. ದೇಶದ ಒಳಿತಿಗಾಗಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿರುವವರ ಅಂತರಂಗದಲ್ಲಿ ಒಳಿತು ಕಾಣುತ್ತಿಲ್ಲ. ಒಡೆದು ಆಳುವ ನೀತಿ ಗೋಚರವಾಗುತ್ತಿದೆ. ಪ್ರತಿವರ್ಷ 2 ಕೋಟಿ ಉದ್ಯೋಗವೆಂದರು. ಎಲ್ಲರ ಅಕೌಂಟಿಗೆ 15 ಲಕ್ಷವೆಂದರು. ನೋಟ್‍ಬ್ಯಾನ್ ಮಾಡಿ ಕಪ್ಪುಹಣ ಕೋಟಿ ಕೋಟಿ ತರುತ್ತೇವೆಂದರು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯೇ ದಿವಾಳಿ ಎದ್ದಿದೆ. ಆರ್ಥಿಕ ಕಾರ್ಯದರ್ಶಿ ಸುಬ್ರಹ್ಮಣ್ಯ ಅವರೇ ವಿಷಾದಿಸಿದ್ದಾಯಿತು. ಆರ್‍ಬಿಐನಿಂದ ಕೋಟಿಗಟ್ಟಲೆ ಹಣ ಪಡೆದಿದ್ದಾಯಿತು. ಜಿಡಿಪಿ ದರ ಕುಸಿಯುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ ಏರುತ್ತಿದೆ. ರೈತರಿಗೆ ದುಪ್ಪಟ್ಟು ಆದಾಯವೆಂದರು. ರೈತರ ಆತ್ಮಹತ್ಯೆಗಳು ನಡೆದೇ ಇವೆ. ಇದಕ್ಕೆಲ್ಲ ಪರಿಹಾರ ಹುಡುಕುವುದುನ್ನು ಬಿಟ್ಟು “ಎಲ್ಲಾ ಬಿಟ್ಟು ಮಗ ಭಂಗಿ ನೆಟ್ಟ” ಎಂಬಂತೆ ಸಿಎಎ ಎನ್‍ಸಿಆರ್ ತರುವ ತುರ್ತು ಅಗತ್ಯವೇನಿತ್ತು?

ನಡೆಯುತ್ತಿರುವ ಗಲಭೆಗಳಿಗೆ ಕಾಂಗ್ರೆಸಿಗರ ಕುಮ್ಮಕ್ಕಿದೆಯೆಂದರೆ ನಂಬಬಹುದೆ. ಕಾಂಗ್ರೆಸ್ ಎಲ್ಲಾ ಕಡೆ ಸೋತು ಅರ್ಧ ಸತ್ತಿದೆ. ಸಾವಿರಾರು ಯುವಕಯುವತಿಯರನ್ನು ಒಂದೆಡೆ ಸೇರಿಸುವ, ಹೋರಾಟ ರೂಪಿಸುವ ಶಕ್ತಿ ಅವರಿಗೆಲ್ಲಿಂದ ಬಂದೀತು. ಪ್ರಧಾನಿಯ ಹೆಸರಿಡಿದು ಸ್ಲೋಗನ್ ಹಾಕುತ್ತಿದ್ದ ಅದೇ ಯುವಶಕ್ತಿಯೇ ಇಂದು ನ್ಯಾಯಕ್ಕಾಗಿ ಬೀದಿಗಿಳಿದಿದೆ. ಅವರಿಗೆಲ್ಲಾ ಹುಸಿ ದೇಶಭಕ್ತಿ, ರಾಷ್ಟ್ರೀಯತೆ ನೆಪದಲ್ಲಿ ಕವಿದಿದ್ದ ಮಂಜು ಕರಗಿದಂತಿದೆ. ದೇಶದ ವಿಭಜನೆಯ ಕಾರ್ಯ ನೆಹರು ಕಾಲದಲ್ಲೇ ನಡೆದಿತ್ತು ಎಂದರೆ ನಂಬಬೇಕೆ. ಇತಿಹಾಸ ಓದಿದವರಿಗೆ ಗೊತ್ತಿದೆ. ಹಿಂದುತ್ವದ ಆರಾಧಕ ಸಾವರ್ಕರ್ ಮತ್ತು ಮುಸ್ಲಿಂ ಲೀಗಿನ ಜಿನ್ನಾ ಇದರ ರೂವಾರಿಗಳೆಂಬುದು ಗೊತ್ತಿದ್ದೂ ಜಾಣ ಮರವೆ? ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ವಿಶ್ವಾಸ್ ಅನ್ನುವವರು ಉತ್ತರ ಪ್ರದೇಶ, ದೆಹಲಿ ಇತ್ಯಾದಿ ಕಡೆಗಳಲ್ಲಿ ವೃತ್ತ, ಬೀದಿಗಳಿಗೆ ಇಟ್ಟ ಮುಸ್ಲಿಂ ನಾಯಕರ ಹೆಸರನ್ನು ಬದಲಿಸೋದು, ಮುಸ್ಲಿಮರಿಗೆ ಸೀಟು ಕೊಡದಿರೋದು. ಮುಸಲ್ಮಾನರ ಓಟಿಲ್ಲದೇ ಗೆಲ್ಲುತ್ತೇವೆಂದು ಬೀಗುವುದು. ಅದೆಂತಹ ವಿಶ್ವಾಸ! ಸಂವಿಧಾನ ಬದಲಿಸುತ್ತೇವೆಂದು ಹೂಂಕರಿಸೋದು. ಅದನ್ನೇ ದೆಹಲಿಯಂತಹ ಸ್ಥಳದಲ್ಲೇ ಸುಡೋದು. ಗಾಂಧೀಜಿಯನ್ನು ಕೊಂದವನಿಗೆ ಗುಡಿಕಟ್ಟಲು ಹೊರಡೋದು ಎಂತಹ ವಿಕಾಸ? ಪೌರತ್ವ ಕಾಯ್ದೆ ತಿದ್ದುಪಡಿ ಗದ್ದಲದಲ್ಲಿ ಅಗತ್ಯ ದಾಖಲೆಗಳಿಲ್ಲದ ಭಾರತೀಯರೂ ಅಕ್ರಮ ವಲಸಿಗರಾಗಿ ಬಿಡುವ ಸಾಧ್ಯತೆಯಿದೆ. ಎನ್‍ಆರ್‍ಸಿ ಪೂರಕವಾಗಿಯೇ ಎನ್‍ಪಿಆರ್ ತರಲು ಸಿದ್ಧತೆಗಳು ನಡೆದಿವೆ. ಹೀಗಾಗಿಯೇ ಬಿಜೆಪಿಯನ್ನು ಬೆಂಬಲಿಸುವ ಪಾಸ್ವಾನ್, ನಿತೀಶ್‍ಕುಮಾರ್, ಜಗನ್ ಮೋಹನ್‍ರೆಡ್ಡಿ ಅಂಥವರು ಕಾಯ್ದೆ ವಿರೋಧವಾಗಿದ್ದಾರೆ. ಹತ್ತು ರಾಜ್ಯ ಗಳೇಕೆ ವಿರೋಧಿಸಿವೆ. ಕರ್ನಾಟಕ ಒಂದೇ ಹೊತ್ತಿ ಉರಿಯುತ್ತಿಲ್ಲ. ದೆಹಲಿ, ಜಾಮಿಯ, ಗುಜರಾತ್, ಉತ್ತರ ಪ್ರದೇಶ, ಬಿಹಾರ್, ಚೆನ್ನೈ, ಮಧ್ಯ ಪ್ರದೇಶ ಅನೇಕ ರಾಜ್ಯಗಳಲ್ಲಿ ಯುವಕ ಯುವತಿಯರು ಬೀದಿಗಿಳಿದು ದಂಗೆ ಎಂದಿದ್ದಾರೆ. ವಿರೋಧಿಸಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆಂದರೆ ಭಾರತವೇನು ಇವರಪ್ಪನ ಪಿತ್ರಾರ್ಜಿತ ಆಸ್ತಿಯೇ?

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ! ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗ ಬಿಟ್ಟರೆ ವಿರೋಧ ಪಕ್ಷವಾಗಿ ಪ್ರಶ್ನೆ ಮಾಡಬೇಕಾದ ಅನೇಕ ಮಾಧ್ಯಮಗಳು ಆಡಳಿತದ ಪರವಾಗಿ ಪುಂಗಿ ಊದುತ್ತಿವೆ. ಮಾರಿಕೊಂಡಿರಲೂಬಹುದು. ನ್ಯಾಯಾಂಗವನ್ನು ಅನುಮಾನಿಸುವಂತಾಗಿದೆ. ಬಾಬ್ರಿ ಮಸೀದಿ ಕೆಡವಿದ್ದು, ಅಪರಾಧವೆನ್ನುವ ನ್ಯಾಯಾಂಗ ಶಿಕ್ಷೆ ಬಗ್ಗೆ ಚಕಾರವೆತ್ತೋಲ್ಲ. ಅನರ್ಹ ಶಾಸಕರ ಅನರ್ಹತೆ ಒಪ್ಪಿಕೊಂಡರೂ ಶಿಕ್ಷೆಯಿಂದ ಮಾಫಿ! ಸರ್ಕಾರದ ವಿರುದ್ಧ ತೀರ್ಪು ನೀಡದಿರೆ ದೇಶದ್ರೋಹಿಗಳಾಗಿ ಬಿಡುತ್ತೇವೆಂಬ ಅಧೀರತೆ ಇದ್ದೀತೆ! ಇಂದಿನ ಸಂದಿಗ್ಧದಲ್ಲಿ ಯುವಜನತೆ ಜಾಗೃತರಾಗಿರೋದು ಸಂತೋಷವೆನಿಸಿದರೂ ಪ್ರತಿಭಟನೆಗಳು ಶಾಂತಿಯುತವಾಗಿರಲಿ. ಜೀವತೆತ್ತ 20 ಜನರಲ್ಲಿ ಯಾರೊಬ್ಬರೂ ಯಾವ ಪಕ್ಷದ ಲೀಡರ್‍ಗಳಲ್ಲ ಅಮಾಯಕರು. ಇಡೀ ದೇಶ ಗಲಭೆಯ ಗೂಡಾಗೋದು ಶ್ರೇಯಸ್ಸಲ್ಲ. ದ್ವೇಷ ಅಳಿಸಿ, ದೇಶ ಉಳಿಸಬೇಕಿದೆ. ಜಾತಿಕಳೆಯ ಕಿತ್ತು ಪ್ರೀತಿಯ ಬೆಳೆ ತೆಗೆಯಬೇಕಿದೆ, ಹಾಗಾಗಲಿ ಎಂಬುದಷ್ಟೇ ನನ್ನ ಲೇಖನದ ಉದ್ದೇಶ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಾರ್ಮಿಕ ಕಿರುಕುಳ ನೀಡು‌ವ ದೇಶಗಳ ನಡೆ ಎದುರು ಜಗತ್ತಿನ ಮಟ್ಟದಲ್ಲಿ ಹೋರಾಟ ರೂಪಿಸಿ, ಆ ಬಗೆಯ ನಡೆಯನ್ನು ಕೊನೆಗಾಣಿಸಲು ಎಣಗಬೇಕೆ ಹೊರತು, ಕಿರುಕುಳಕ್ಕೆ ಒಳಗಾದವರನ್ನು ಕರೆಸಿಕೊಂಡು ಸಿಟಿಜನ್.ಶಿಪ್ ಕೊಡುವುದು ಈವೊತ್ತಿನ ತಳಮಳಕ್ಕೆ ಪರಿಹಾರವಾಗಲಾರದು. ತಾನು ಹುಟ್ಟಿಬೆಳೆದ ನಾಡಿನ್ನು ಬಿಟ್ಟುಬರುವುದಕ್ಕೆ, ಕಿರುಕುಳ ಕೊಡುವವರಿಗೆ ಇಂಬು ಕೊಡುವಂತಿದೆ ಸಿ.ಎ.ಎ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...