Homeಮುಖಪುಟಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

ಪೌರತ್ವ ಕಾಯ್ದೆ ತಿದ್ದುಪಡಿಯ ಅಗತ್ಯವಿತ್ತೆ?

- Advertisement -
- Advertisement -

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ!

ನನಗೂ ಒಬ್ಬ ಹಿರಿಯ ಕವಯತ್ರಿ ಪ್ರಶ್ನೆ ಕೇಳಿದರು. ಮೋದಿ ಪರವೋ? ವಿರೋಧವೋ? ನಾನು ಹೇಳಿದೆ ಅವರ ಪರವೂ ಅಲ್ಲ ವಿರೋಧವೂ ಅಲ್ಲ. ನಾನು ನನ್ನಂಥವರು ಸಂವಿಧಾನದ ಪರ. ಆದರೆ ಮೋದಿಯವರ ಬಗ್ಗೆ ಗೌರವವಿದೆ. ಏಕೆಂದರೆ ಅವರು ಬಿಜೆಪಿ ಪ್ರಧಾನಿಯಲ್ಲ-ದೇಶದ ಪ್ರಧಾನಿ. ಹಾಗಂತ ಅವರು ತರುವ ಕಾಯ್ದೆ ತಿದ್ದುಪಡಿಗಳನ್ನೆಲ್ಲಾ ಒಪ್ಪಿಕೊಳ್ಳಬೇಕಿಲ್ಲ. ರಾಷ್ಟ್ರೀಯತೆಯ ಸೋಗಿನಲ್ಲಿ ಹುಸಿದೇಶಭಕ್ತಿ ತೋರುವ ಬಹುಮತವಿದೆ ಎಂಬ ಅಹಂಕಾರದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬೇರನ್ನೇ ಅಲ್ಲಾಡಿಸಬಹುದೆ. ಪೌರತ್ವ ಕಾಯ್ದೆ ತಿದ್ದುಪಡಿ ಮೂಲಕ ಸಿಎಎ ಮತ್ತು ಎನ್‍ಆರ್‍ಸಿ ತರುವ ತುರ್ತು ಏನಿತು? ಇದು ಸಂವಿಧಾನದ 14, 15ರ ನಿಯಮದ ಉಲ್ಲಂಘನೆಯಲ್ಲವೆ. ಪಾಕಿಸ್ತಾನ, ಬಾಂಗ್ಲಾ, ಆಫ್ಘಾನಿಸ್ಥಾನದಿಂದ ಧರ್ಮದ ಹಿಂಸೆಗೆ ಒಳಗಾಗಿ ಬಂದ ಹಿಂದೂ, ಜೈನ್, ಬೌದ್ಧ, ಸಿಖ್, ಪಾರ್ಸಿ, ಕ್ರೈಸ್ತ ಎಲ್ಲರಿಗೂ ಪೌರತ್ವ ಕೊಡುತ್ತ್ತದೆ, ಮುಸ್ಲಿಮರನ್ನು ಬಿಟ್ಟು. ಇದು ಧರ್ಮಾಧಾರಿತ ತಾರತಮ್ಯ ಹಾಗೂ ಅಸಂವಿಧಾನಿಕ. ದೇಶದ ಸ್ವಾತಂತ್ರ್ಯಕ್ಕಾಗಿ ಹಿಂದೂಗಳ ಜೊತೆ ಮುಸಲ್ಮಾನರೂ ಹೋರಾಟ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ, ಜೈಲು ಸೇರಿದರೂ ಕ್ಷಮಾಪಣೆ ಕೇಳಿ ಆಚೆ ಬಂದವರಿಗೆಲ್ಲಾ ದೇಶದಲ್ಲಿ ಜಾಗವಿದೆ. ಇವರಿಗಿಲ್ಲವೆ? ಈ ದೇಶದ ಮುಸ್ಲಿಮರಿಗೆ ಇದು ಅನ್ವಯಿಸಿಲ್ಲವಂತೆ 1987 ರ ಮೊದಲು ಹುಟ್ಟಿದವರೆಲ್ಲಾ ಭಾರತೀಯರು, ಉಳಿದವರು ದಾಖಲೆ ಕೊಡಬೇಕೆಂಬುದಾದರೂ ಎಷ್ಟು ಸರಿ? ದುಡ್ಡಿರುವ ಮಂದಿ ಎಂತಹ ದಾಖಲೆಗಳನ್ನೂ ಕೊಂಡುಕೊಡಬಲ್ಲರು. ಬದುಕಿರುವವರಿಗೂ ದುಡ್ಡು ಕೊಟ್ಟರೆ ಸಾವಿನ ಪ್ರಮಾಣಪತ್ರ ಸಿಗುವಂತಹ ದುಷ್ಟ ವ್ಯವಸ್ಥೆಯಲ್ಲಿ ಬಡಬಗ್ಗರು, ಅನಕ್ಷರಸ್ಥರು, ಆದಿವಾಸಿಗಳು, ಬುಡಕಟ್ಟು ಜನರ ಪಾಡೇನು? ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುತ್ತಾರೆ. ದೇಶವಾಸಿಗಳಿಗೆ ದಾಖಲೆ ಬೇಕಂತೆ! ಹೊರಗಿನಿಂದ ಬಂದವರಿಗೆಲ್ಲಾ ಪೌರತ್ವ ದಯಪಾಲಿಸಿದರೆ ಅವರಿಗೆಲ್ಲಾ ಊಟ, ವಸತಿ, ಉದ್ಯೋಗ, ಜಮೀನು ಜಹಗೀರು ಕೊಡುವಷ್ಟು ದೇಶ ಶಕ್ತವೆ. ದೇಶದ ಒಳಿತಿಗಾಗಿ ಕಾಯ್ದೆಯನ್ನು ಜಾರಿಗೆ ತರುವುದಾಗಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿರುವವರ ಅಂತರಂಗದಲ್ಲಿ ಒಳಿತು ಕಾಣುತ್ತಿಲ್ಲ. ಒಡೆದು ಆಳುವ ನೀತಿ ಗೋಚರವಾಗುತ್ತಿದೆ. ಪ್ರತಿವರ್ಷ 2 ಕೋಟಿ ಉದ್ಯೋಗವೆಂದರು. ಎಲ್ಲರ ಅಕೌಂಟಿಗೆ 15 ಲಕ್ಷವೆಂದರು. ನೋಟ್‍ಬ್ಯಾನ್ ಮಾಡಿ ಕಪ್ಪುಹಣ ಕೋಟಿ ಕೋಟಿ ತರುತ್ತೇವೆಂದರು. ಆದರೆ ದೇಶದ ಆರ್ಥಿಕ ಪರಿಸ್ಥಿತಿಯೇ ದಿವಾಳಿ ಎದ್ದಿದೆ. ಆರ್ಥಿಕ ಕಾರ್ಯದರ್ಶಿ ಸುಬ್ರಹ್ಮಣ್ಯ ಅವರೇ ವಿಷಾದಿಸಿದ್ದಾಯಿತು. ಆರ್‍ಬಿಐನಿಂದ ಕೋಟಿಗಟ್ಟಲೆ ಹಣ ಪಡೆದಿದ್ದಾಯಿತು. ಜಿಡಿಪಿ ದರ ಕುಸಿಯುತ್ತಿದೆ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ ಏರುತ್ತಿದೆ. ರೈತರಿಗೆ ದುಪ್ಪಟ್ಟು ಆದಾಯವೆಂದರು. ರೈತರ ಆತ್ಮಹತ್ಯೆಗಳು ನಡೆದೇ ಇವೆ. ಇದಕ್ಕೆಲ್ಲ ಪರಿಹಾರ ಹುಡುಕುವುದುನ್ನು ಬಿಟ್ಟು “ಎಲ್ಲಾ ಬಿಟ್ಟು ಮಗ ಭಂಗಿ ನೆಟ್ಟ” ಎಂಬಂತೆ ಸಿಎಎ ಎನ್‍ಸಿಆರ್ ತರುವ ತುರ್ತು ಅಗತ್ಯವೇನಿತ್ತು?

ನಡೆಯುತ್ತಿರುವ ಗಲಭೆಗಳಿಗೆ ಕಾಂಗ್ರೆಸಿಗರ ಕುಮ್ಮಕ್ಕಿದೆಯೆಂದರೆ ನಂಬಬಹುದೆ. ಕಾಂಗ್ರೆಸ್ ಎಲ್ಲಾ ಕಡೆ ಸೋತು ಅರ್ಧ ಸತ್ತಿದೆ. ಸಾವಿರಾರು ಯುವಕಯುವತಿಯರನ್ನು ಒಂದೆಡೆ ಸೇರಿಸುವ, ಹೋರಾಟ ರೂಪಿಸುವ ಶಕ್ತಿ ಅವರಿಗೆಲ್ಲಿಂದ ಬಂದೀತು. ಪ್ರಧಾನಿಯ ಹೆಸರಿಡಿದು ಸ್ಲೋಗನ್ ಹಾಕುತ್ತಿದ್ದ ಅದೇ ಯುವಶಕ್ತಿಯೇ ಇಂದು ನ್ಯಾಯಕ್ಕಾಗಿ ಬೀದಿಗಿಳಿದಿದೆ. ಅವರಿಗೆಲ್ಲಾ ಹುಸಿ ದೇಶಭಕ್ತಿ, ರಾಷ್ಟ್ರೀಯತೆ ನೆಪದಲ್ಲಿ ಕವಿದಿದ್ದ ಮಂಜು ಕರಗಿದಂತಿದೆ. ದೇಶದ ವಿಭಜನೆಯ ಕಾರ್ಯ ನೆಹರು ಕಾಲದಲ್ಲೇ ನಡೆದಿತ್ತು ಎಂದರೆ ನಂಬಬೇಕೆ. ಇತಿಹಾಸ ಓದಿದವರಿಗೆ ಗೊತ್ತಿದೆ. ಹಿಂದುತ್ವದ ಆರಾಧಕ ಸಾವರ್ಕರ್ ಮತ್ತು ಮುಸ್ಲಿಂ ಲೀಗಿನ ಜಿನ್ನಾ ಇದರ ರೂವಾರಿಗಳೆಂಬುದು ಗೊತ್ತಿದ್ದೂ ಜಾಣ ಮರವೆ? ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ವಿಶ್ವಾಸ್ ಅನ್ನುವವರು ಉತ್ತರ ಪ್ರದೇಶ, ದೆಹಲಿ ಇತ್ಯಾದಿ ಕಡೆಗಳಲ್ಲಿ ವೃತ್ತ, ಬೀದಿಗಳಿಗೆ ಇಟ್ಟ ಮುಸ್ಲಿಂ ನಾಯಕರ ಹೆಸರನ್ನು ಬದಲಿಸೋದು, ಮುಸ್ಲಿಮರಿಗೆ ಸೀಟು ಕೊಡದಿರೋದು. ಮುಸಲ್ಮಾನರ ಓಟಿಲ್ಲದೇ ಗೆಲ್ಲುತ್ತೇವೆಂದು ಬೀಗುವುದು. ಅದೆಂತಹ ವಿಶ್ವಾಸ! ಸಂವಿಧಾನ ಬದಲಿಸುತ್ತೇವೆಂದು ಹೂಂಕರಿಸೋದು. ಅದನ್ನೇ ದೆಹಲಿಯಂತಹ ಸ್ಥಳದಲ್ಲೇ ಸುಡೋದು. ಗಾಂಧೀಜಿಯನ್ನು ಕೊಂದವನಿಗೆ ಗುಡಿಕಟ್ಟಲು ಹೊರಡೋದು ಎಂತಹ ವಿಕಾಸ? ಪೌರತ್ವ ಕಾಯ್ದೆ ತಿದ್ದುಪಡಿ ಗದ್ದಲದಲ್ಲಿ ಅಗತ್ಯ ದಾಖಲೆಗಳಿಲ್ಲದ ಭಾರತೀಯರೂ ಅಕ್ರಮ ವಲಸಿಗರಾಗಿ ಬಿಡುವ ಸಾಧ್ಯತೆಯಿದೆ. ಎನ್‍ಆರ್‍ಸಿ ಪೂರಕವಾಗಿಯೇ ಎನ್‍ಪಿಆರ್ ತರಲು ಸಿದ್ಧತೆಗಳು ನಡೆದಿವೆ. ಹೀಗಾಗಿಯೇ ಬಿಜೆಪಿಯನ್ನು ಬೆಂಬಲಿಸುವ ಪಾಸ್ವಾನ್, ನಿತೀಶ್‍ಕುಮಾರ್, ಜಗನ್ ಮೋಹನ್‍ರೆಡ್ಡಿ ಅಂಥವರು ಕಾಯ್ದೆ ವಿರೋಧವಾಗಿದ್ದಾರೆ. ಹತ್ತು ರಾಜ್ಯ ಗಳೇಕೆ ವಿರೋಧಿಸಿವೆ. ಕರ್ನಾಟಕ ಒಂದೇ ಹೊತ್ತಿ ಉರಿಯುತ್ತಿಲ್ಲ. ದೆಹಲಿ, ಜಾಮಿಯ, ಗುಜರಾತ್, ಉತ್ತರ ಪ್ರದೇಶ, ಬಿಹಾರ್, ಚೆನ್ನೈ, ಮಧ್ಯ ಪ್ರದೇಶ ಅನೇಕ ರಾಜ್ಯಗಳಲ್ಲಿ ಯುವಕ ಯುವತಿಯರು ಬೀದಿಗಿಳಿದು ದಂಗೆ ಎಂದಿದ್ದಾರೆ. ವಿರೋಧಿಸಿದವರನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತೇವೆಂದರೆ ಭಾರತವೇನು ಇವರಪ್ಪನ ಪಿತ್ರಾರ್ಜಿತ ಆಸ್ತಿಯೇ?

ಇಂತಹ ಸಂಘರ್ಷದ ದಿನಗಳಲ್ಲಿ ಲೋಕ ಕಲ್ಯಾಣ ಮಾಡಲೆಂದೇ ಕಾವಿತೊಟ್ಟ ಮಹಾಸ್ವಾಮಿಗಳೇಕೋ ಮೌನಕ್ಕೆ ಶರಣಾಗಿದ್ದಾರೆ. ಮಠಗಳಿಗೆ ಹೆಚ್ಚು ಅನುದಾನ ಬೇಡುವ, ತಮ್ಮ ಜಾತಿಗಳಿಗೆ ಹೆಚ್ಚು ಮೀಸಲಾತಿ ನೀಡಬೇಕೆಂದು ರಾಜಕಾರಣಿಗಳೆದುರು ಬಾಯಿ ಬಾಯಿ ಬಿಡುವ ಇವರೇಕೋ ಬಾಯೇ ಬಿಡುತ್ತಿಲ್ಲ! ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗ ಬಿಟ್ಟರೆ ವಿರೋಧ ಪಕ್ಷವಾಗಿ ಪ್ರಶ್ನೆ ಮಾಡಬೇಕಾದ ಅನೇಕ ಮಾಧ್ಯಮಗಳು ಆಡಳಿತದ ಪರವಾಗಿ ಪುಂಗಿ ಊದುತ್ತಿವೆ. ಮಾರಿಕೊಂಡಿರಲೂಬಹುದು. ನ್ಯಾಯಾಂಗವನ್ನು ಅನುಮಾನಿಸುವಂತಾಗಿದೆ. ಬಾಬ್ರಿ ಮಸೀದಿ ಕೆಡವಿದ್ದು, ಅಪರಾಧವೆನ್ನುವ ನ್ಯಾಯಾಂಗ ಶಿಕ್ಷೆ ಬಗ್ಗೆ ಚಕಾರವೆತ್ತೋಲ್ಲ. ಅನರ್ಹ ಶಾಸಕರ ಅನರ್ಹತೆ ಒಪ್ಪಿಕೊಂಡರೂ ಶಿಕ್ಷೆಯಿಂದ ಮಾಫಿ! ಸರ್ಕಾರದ ವಿರುದ್ಧ ತೀರ್ಪು ನೀಡದಿರೆ ದೇಶದ್ರೋಹಿಗಳಾಗಿ ಬಿಡುತ್ತೇವೆಂಬ ಅಧೀರತೆ ಇದ್ದೀತೆ! ಇಂದಿನ ಸಂದಿಗ್ಧದಲ್ಲಿ ಯುವಜನತೆ ಜಾಗೃತರಾಗಿರೋದು ಸಂತೋಷವೆನಿಸಿದರೂ ಪ್ರತಿಭಟನೆಗಳು ಶಾಂತಿಯುತವಾಗಿರಲಿ. ಜೀವತೆತ್ತ 20 ಜನರಲ್ಲಿ ಯಾರೊಬ್ಬರೂ ಯಾವ ಪಕ್ಷದ ಲೀಡರ್‍ಗಳಲ್ಲ ಅಮಾಯಕರು. ಇಡೀ ದೇಶ ಗಲಭೆಯ ಗೂಡಾಗೋದು ಶ್ರೇಯಸ್ಸಲ್ಲ. ದ್ವೇಷ ಅಳಿಸಿ, ದೇಶ ಉಳಿಸಬೇಕಿದೆ. ಜಾತಿಕಳೆಯ ಕಿತ್ತು ಪ್ರೀತಿಯ ಬೆಳೆ ತೆಗೆಯಬೇಕಿದೆ, ಹಾಗಾಗಲಿ ಎಂಬುದಷ್ಟೇ ನನ್ನ ಲೇಖನದ ಉದ್ದೇಶ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದಾರ್ಮಿಕ ಕಿರುಕುಳ ನೀಡು‌ವ ದೇಶಗಳ ನಡೆ ಎದುರು ಜಗತ್ತಿನ ಮಟ್ಟದಲ್ಲಿ ಹೋರಾಟ ರೂಪಿಸಿ, ಆ ಬಗೆಯ ನಡೆಯನ್ನು ಕೊನೆಗಾಣಿಸಲು ಎಣಗಬೇಕೆ ಹೊರತು, ಕಿರುಕುಳಕ್ಕೆ ಒಳಗಾದವರನ್ನು ಕರೆಸಿಕೊಂಡು ಸಿಟಿಜನ್.ಶಿಪ್ ಕೊಡುವುದು ಈವೊತ್ತಿನ ತಳಮಳಕ್ಕೆ ಪರಿಹಾರವಾಗಲಾರದು. ತಾನು ಹುಟ್ಟಿಬೆಳೆದ ನಾಡಿನ್ನು ಬಿಟ್ಟುಬರುವುದಕ್ಕೆ, ಕಿರುಕುಳ ಕೊಡುವವರಿಗೆ ಇಂಬು ಕೊಡುವಂತಿದೆ ಸಿ.ಎ.ಎ.

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...