Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...