Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...