Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...