Homeಮುಖಪುಟಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

- Advertisement -
- Advertisement -

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಎನ್.ಪಿ.ಆರ್ ನಂತಹ ಮಹತ್ವ ಮಸೂದೆಗಳನ್ನು ವ್ಯವಹಾರಗಳ ಸಲಹಾ ಸಮಿತಿ ಮುಂದೆ ಚರ್ಚೆಗಿಡದೆ ನೇರವಾಗಿ ಸಂಸತ್ತಿನಲ್ಲಿ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಗಳನ್ನಾಗಿ ಜಾರಿಗೊಳಿಸಿರುವುದು ಅಸಂವಿಧಾನಿಕ ಎಂದು ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ ಆರೋಪಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಫೆ.23ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸಿಎಎ, ಎನ್ಆರ್.ಸಿ. ಎನ್.ಪಿ.ಆರ್ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಮತ್ತು ಸಂಸದೀಯ ಇತಿಹಾಸದಲ್ಲಿ ಇದೇ ಮೊದಲಿಗೆ ಧರ್ಮಾಧಾರಿತ ಪೌರತ್ವ ನೋಂದಣಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಅವರ ನಿಜವಾದ ಬಣ್ಣ ಬಯಲಾಗಿದೆ. ಸಂವಿಧಾನಕ್ಕೆ ಪರ್ಯಾಯವಾಗಿ ದೇಶದಲ್ಲಿ ಅಧಿಕಾರ ಕೇಂದ್ರವೊಂದಿದೆ. ಅದು ಆರ್.ಎಸ್.ಎಸ್. ಮೂಲಸ್ಥಾನ ನಾಗಪುರ. ಅಲ್ಲಿ ಸಿದ್ದಗೊಳ್ಳುವ ನಿಯಮಗಳು ಕಾನೂನುಗಳಾಗುತ್ತಿವೆ. ಭಾರತೀಯ ಜನತಾ ಪಕ್ಷ ಆರ್.ಎಸ್.ಎಸ್.ನ ರಾಜಕೀಯ ಅಸ್ತ್ರವಾಗಿದೆ ಎಂದು ಹೇಳಿದರು.

ಹಿಂದೆ ಯಾವುದೇ ಕಾಯ್ದೆಗಳು ರೂಪುಗೊಳ್ಳುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಒಳಪಡುತ್ತಿದ್ದವು. ಹಲವು ಸಭೆಗಳಲ್ಲಿ, ಸಂಸತ್ ನಲ್ಲಿ ಗಂಭೀರವಾದ ಚರ್ಚೆ ನಡೆದು ಅದರ ಸಾಧಕಬಾಧಕಗಳನ್ನು ಗುರುತಿಸಿ ಆನಂತರ ಕಾಯ್ದೆಗಳು ಜಾರಿಯಾಗುತ್ತಿದ್ದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮಸೂಸೆಯ ಬಗ್ಗೆ ಚರ್ಚೆಗಳು ನಡೆದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇರವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆಗಳನ್ನು ಮಂಡಿಸಿ ಚರ್ಚಿಸಲು ಅವಕಾಶ ನೀಡದೆ ಕಾಯ್ದೆ ಜಾರಿಗೆ ತರಲಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.

ಆರ್.ಎಸ್.ಎಸ್ ಹೇಳಿದಂತೆ ಬಿಜೆಪಿ ಕೇಳುತ್ತಿದೆ. ನಾಗಪುರದಲ್ಲಿ ಸಿದ್ದವಾಗುವ ನಿಯಮಗಳನ್ನು ಜನರ ಮೇಲೆ ಹೇರುವ ಕೆಲಸ ನಡೆಯುತ್ತಿದೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಹಾಳುಗೆಡವುತ್ತಿವೆ. ಜರ್ಮನಿಯ ಹಿಟ್ಲರ್ ಮಾಡಿದಂತೆ ಭಾರತದಲ್ಲಿ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಬಂಧನ ಕೇಂದ್ರಗಳನ್ನು ಕಟ್ಟಲು ಹೊರಟಿದ್ದಾರೆ. ಇದರ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಜನರನ್ನು ಭೀತರಾಗುವಂತಹ ವಾತಾವರಣ ಸೃಷ್ಟಿಸುತ್ತಿವೆ. ತನ್ನ ಸಿದ್ದಾಂತ ಒಪ್ಪದವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹತ್ಯೆಯಾಗಿದೆ. ದೇಶದಲ್ಲಿ ಅಘೋಷಿತ ತುರ್ತುಪಡಿಸ್ಥಿತಿ ಇದೆ ಎಂದರು.

ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಎ ವಿರುದ್ಧ ವಿದ್ಯಾರ್ಥಿಗಳು, ಯುವಜನರು, ರೈತರು ಮತ್ತು ಮಹಿಳಾ ಸಂಘಟನೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರಬಲ ಹೋರಾಟಗಳನ್ನು ಮಾಡಬೇಕು. ಮನೆಮನೆಗೂ ಹೋಗಿ ಜನರಿಗೆ ಈ ಕಾಯ್ದೆಗಳ ಅಪಾಯದ ಕುರಿತು ಮನವರಿಕೆ ಮಾಡಬೇಕು. ದೇಶದಲ್ಲಿ ಕೇರಳ ಸೇರಿದಂತೆ 13 ರಾಜ್ಯಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. ಇದು ಬಿಜೆಪಿಯ ಶಕ್ತಿಯನ್ನು ಕುಂದಿಸುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್.ಸಿ ಪ್ರಕಾರ ಮಹಾತ್ಮ ಗಾಂಧಿಗೂ ಪೌರತ್ವ ನೀಡಲು ಬರುವುದಿಲ್ಲ. ಗಾಂಧೀ ರಾಮ್-ರಹೀಮ್ ಇಬ್ಬರೂ ಒಂದೇ ಎಂದರು. ಈಗಿನ ಪರಿಸ್ಥಿತಿ ರಾಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರಹೀಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಅಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಮನಿಗೆ ಪೌರತ್ವ ನೀಡಿದರೆ, ರಹೀಮನಿಗೆ ಪೌರತ್ವ ಇಲ್ಲ. ಹಿಂದೂಗಳು ಪೌರತ್ವ ಪಡೆಯುವುದು ಕಷ್ಟದ ಕೆಲಸ. ಹೀಗಾಗಿ ಕೇಂದ್ರದ ಕಾಯ್ದೆಗಳ ವಿರುದ್ಧ ಜನರು ಅಸಹಕಾರ ತೋರಬೇಕು ಎಂದು ವಿವರಿಸಿದರು.

ಕಮ್ಯೂನಿಸ್ಟರು ಎಲ್ಲ ಧರ್ಮಗಳನ್ನ ಸಮಾನವಾಗಿ ಗೌರವಿಸುತ್ತಾರೆ. ಜನರ ನಂಬಿಕೆಗಳನ್ನು ಗೌರವಿಸುತ್ತಾರೆ. ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಬಯಸುತ್ತಾರೆ. ಆದರೆ ತಾರತಮ್ಯವನ್ನು ಸಹಿಸುವುದಿಲ್ಲ. ಗಾಂಧಿ, ಬುದ್ಧ ಇದೇ ಹಾದಿಯಲ್ಲಿ ನಡೆದವರು. ಸಂವಿಧಾನವೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸುತ್ತದೆ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟಗಳಲ್ಲಿ ಎಲ್ಲ ಜನವಿಭಾಗವು ಪಾಲ್ಗೊಳ್ಳಬೇಕು. ಜನ ವಿರೋಧಿ ನೀತಿಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...