Homeಮುಖಪುಟಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

- Advertisement -
- Advertisement -

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಎನ್.ಪಿ.ಆರ್ ನಂತಹ ಮಹತ್ವ ಮಸೂದೆಗಳನ್ನು ವ್ಯವಹಾರಗಳ ಸಲಹಾ ಸಮಿತಿ ಮುಂದೆ ಚರ್ಚೆಗಿಡದೆ ನೇರವಾಗಿ ಸಂಸತ್ತಿನಲ್ಲಿ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಗಳನ್ನಾಗಿ ಜಾರಿಗೊಳಿಸಿರುವುದು ಅಸಂವಿಧಾನಿಕ ಎಂದು ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ ಆರೋಪಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಫೆ.23ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸಿಎಎ, ಎನ್ಆರ್.ಸಿ. ಎನ್.ಪಿ.ಆರ್ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಮತ್ತು ಸಂಸದೀಯ ಇತಿಹಾಸದಲ್ಲಿ ಇದೇ ಮೊದಲಿಗೆ ಧರ್ಮಾಧಾರಿತ ಪೌರತ್ವ ನೋಂದಣಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಅವರ ನಿಜವಾದ ಬಣ್ಣ ಬಯಲಾಗಿದೆ. ಸಂವಿಧಾನಕ್ಕೆ ಪರ್ಯಾಯವಾಗಿ ದೇಶದಲ್ಲಿ ಅಧಿಕಾರ ಕೇಂದ್ರವೊಂದಿದೆ. ಅದು ಆರ್.ಎಸ್.ಎಸ್. ಮೂಲಸ್ಥಾನ ನಾಗಪುರ. ಅಲ್ಲಿ ಸಿದ್ದಗೊಳ್ಳುವ ನಿಯಮಗಳು ಕಾನೂನುಗಳಾಗುತ್ತಿವೆ. ಭಾರತೀಯ ಜನತಾ ಪಕ್ಷ ಆರ್.ಎಸ್.ಎಸ್.ನ ರಾಜಕೀಯ ಅಸ್ತ್ರವಾಗಿದೆ ಎಂದು ಹೇಳಿದರು.

ಹಿಂದೆ ಯಾವುದೇ ಕಾಯ್ದೆಗಳು ರೂಪುಗೊಳ್ಳುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಒಳಪಡುತ್ತಿದ್ದವು. ಹಲವು ಸಭೆಗಳಲ್ಲಿ, ಸಂಸತ್ ನಲ್ಲಿ ಗಂಭೀರವಾದ ಚರ್ಚೆ ನಡೆದು ಅದರ ಸಾಧಕಬಾಧಕಗಳನ್ನು ಗುರುತಿಸಿ ಆನಂತರ ಕಾಯ್ದೆಗಳು ಜಾರಿಯಾಗುತ್ತಿದ್ದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮಸೂಸೆಯ ಬಗ್ಗೆ ಚರ್ಚೆಗಳು ನಡೆದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇರವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆಗಳನ್ನು ಮಂಡಿಸಿ ಚರ್ಚಿಸಲು ಅವಕಾಶ ನೀಡದೆ ಕಾಯ್ದೆ ಜಾರಿಗೆ ತರಲಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.

ಆರ್.ಎಸ್.ಎಸ್ ಹೇಳಿದಂತೆ ಬಿಜೆಪಿ ಕೇಳುತ್ತಿದೆ. ನಾಗಪುರದಲ್ಲಿ ಸಿದ್ದವಾಗುವ ನಿಯಮಗಳನ್ನು ಜನರ ಮೇಲೆ ಹೇರುವ ಕೆಲಸ ನಡೆಯುತ್ತಿದೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಹಾಳುಗೆಡವುತ್ತಿವೆ. ಜರ್ಮನಿಯ ಹಿಟ್ಲರ್ ಮಾಡಿದಂತೆ ಭಾರತದಲ್ಲಿ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಬಂಧನ ಕೇಂದ್ರಗಳನ್ನು ಕಟ್ಟಲು ಹೊರಟಿದ್ದಾರೆ. ಇದರ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಜನರನ್ನು ಭೀತರಾಗುವಂತಹ ವಾತಾವರಣ ಸೃಷ್ಟಿಸುತ್ತಿವೆ. ತನ್ನ ಸಿದ್ದಾಂತ ಒಪ್ಪದವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹತ್ಯೆಯಾಗಿದೆ. ದೇಶದಲ್ಲಿ ಅಘೋಷಿತ ತುರ್ತುಪಡಿಸ್ಥಿತಿ ಇದೆ ಎಂದರು.

ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಎ ವಿರುದ್ಧ ವಿದ್ಯಾರ್ಥಿಗಳು, ಯುವಜನರು, ರೈತರು ಮತ್ತು ಮಹಿಳಾ ಸಂಘಟನೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರಬಲ ಹೋರಾಟಗಳನ್ನು ಮಾಡಬೇಕು. ಮನೆಮನೆಗೂ ಹೋಗಿ ಜನರಿಗೆ ಈ ಕಾಯ್ದೆಗಳ ಅಪಾಯದ ಕುರಿತು ಮನವರಿಕೆ ಮಾಡಬೇಕು. ದೇಶದಲ್ಲಿ ಕೇರಳ ಸೇರಿದಂತೆ 13 ರಾಜ್ಯಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. ಇದು ಬಿಜೆಪಿಯ ಶಕ್ತಿಯನ್ನು ಕುಂದಿಸುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್.ಸಿ ಪ್ರಕಾರ ಮಹಾತ್ಮ ಗಾಂಧಿಗೂ ಪೌರತ್ವ ನೀಡಲು ಬರುವುದಿಲ್ಲ. ಗಾಂಧೀ ರಾಮ್-ರಹೀಮ್ ಇಬ್ಬರೂ ಒಂದೇ ಎಂದರು. ಈಗಿನ ಪರಿಸ್ಥಿತಿ ರಾಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರಹೀಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಅಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಮನಿಗೆ ಪೌರತ್ವ ನೀಡಿದರೆ, ರಹೀಮನಿಗೆ ಪೌರತ್ವ ಇಲ್ಲ. ಹಿಂದೂಗಳು ಪೌರತ್ವ ಪಡೆಯುವುದು ಕಷ್ಟದ ಕೆಲಸ. ಹೀಗಾಗಿ ಕೇಂದ್ರದ ಕಾಯ್ದೆಗಳ ವಿರುದ್ಧ ಜನರು ಅಸಹಕಾರ ತೋರಬೇಕು ಎಂದು ವಿವರಿಸಿದರು.

ಕಮ್ಯೂನಿಸ್ಟರು ಎಲ್ಲ ಧರ್ಮಗಳನ್ನ ಸಮಾನವಾಗಿ ಗೌರವಿಸುತ್ತಾರೆ. ಜನರ ನಂಬಿಕೆಗಳನ್ನು ಗೌರವಿಸುತ್ತಾರೆ. ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಬಯಸುತ್ತಾರೆ. ಆದರೆ ತಾರತಮ್ಯವನ್ನು ಸಹಿಸುವುದಿಲ್ಲ. ಗಾಂಧಿ, ಬುದ್ಧ ಇದೇ ಹಾದಿಯಲ್ಲಿ ನಡೆದವರು. ಸಂವಿಧಾನವೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸುತ್ತದೆ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟಗಳಲ್ಲಿ ಎಲ್ಲ ಜನವಿಭಾಗವು ಪಾಲ್ಗೊಳ್ಳಬೇಕು. ಜನ ವಿರೋಧಿ ನೀತಿಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...