Homeಮುಖಪುಟಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

- Advertisement -
- Advertisement -

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಎನ್.ಪಿ.ಆರ್ ನಂತಹ ಮಹತ್ವ ಮಸೂದೆಗಳನ್ನು ವ್ಯವಹಾರಗಳ ಸಲಹಾ ಸಮಿತಿ ಮುಂದೆ ಚರ್ಚೆಗಿಡದೆ ನೇರವಾಗಿ ಸಂಸತ್ತಿನಲ್ಲಿ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಗಳನ್ನಾಗಿ ಜಾರಿಗೊಳಿಸಿರುವುದು ಅಸಂವಿಧಾನಿಕ ಎಂದು ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ ಆರೋಪಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಫೆ.23ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸಿಎಎ, ಎನ್ಆರ್.ಸಿ. ಎನ್.ಪಿ.ಆರ್ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಮತ್ತು ಸಂಸದೀಯ ಇತಿಹಾಸದಲ್ಲಿ ಇದೇ ಮೊದಲಿಗೆ ಧರ್ಮಾಧಾರಿತ ಪೌರತ್ವ ನೋಂದಣಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಅವರ ನಿಜವಾದ ಬಣ್ಣ ಬಯಲಾಗಿದೆ. ಸಂವಿಧಾನಕ್ಕೆ ಪರ್ಯಾಯವಾಗಿ ದೇಶದಲ್ಲಿ ಅಧಿಕಾರ ಕೇಂದ್ರವೊಂದಿದೆ. ಅದು ಆರ್.ಎಸ್.ಎಸ್. ಮೂಲಸ್ಥಾನ ನಾಗಪುರ. ಅಲ್ಲಿ ಸಿದ್ದಗೊಳ್ಳುವ ನಿಯಮಗಳು ಕಾನೂನುಗಳಾಗುತ್ತಿವೆ. ಭಾರತೀಯ ಜನತಾ ಪಕ್ಷ ಆರ್.ಎಸ್.ಎಸ್.ನ ರಾಜಕೀಯ ಅಸ್ತ್ರವಾಗಿದೆ ಎಂದು ಹೇಳಿದರು.

ಹಿಂದೆ ಯಾವುದೇ ಕಾಯ್ದೆಗಳು ರೂಪುಗೊಳ್ಳುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಒಳಪಡುತ್ತಿದ್ದವು. ಹಲವು ಸಭೆಗಳಲ್ಲಿ, ಸಂಸತ್ ನಲ್ಲಿ ಗಂಭೀರವಾದ ಚರ್ಚೆ ನಡೆದು ಅದರ ಸಾಧಕಬಾಧಕಗಳನ್ನು ಗುರುತಿಸಿ ಆನಂತರ ಕಾಯ್ದೆಗಳು ಜಾರಿಯಾಗುತ್ತಿದ್ದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮಸೂಸೆಯ ಬಗ್ಗೆ ಚರ್ಚೆಗಳು ನಡೆದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇರವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆಗಳನ್ನು ಮಂಡಿಸಿ ಚರ್ಚಿಸಲು ಅವಕಾಶ ನೀಡದೆ ಕಾಯ್ದೆ ಜಾರಿಗೆ ತರಲಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.

ಆರ್.ಎಸ್.ಎಸ್ ಹೇಳಿದಂತೆ ಬಿಜೆಪಿ ಕೇಳುತ್ತಿದೆ. ನಾಗಪುರದಲ್ಲಿ ಸಿದ್ದವಾಗುವ ನಿಯಮಗಳನ್ನು ಜನರ ಮೇಲೆ ಹೇರುವ ಕೆಲಸ ನಡೆಯುತ್ತಿದೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಹಾಳುಗೆಡವುತ್ತಿವೆ. ಜರ್ಮನಿಯ ಹಿಟ್ಲರ್ ಮಾಡಿದಂತೆ ಭಾರತದಲ್ಲಿ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಬಂಧನ ಕೇಂದ್ರಗಳನ್ನು ಕಟ್ಟಲು ಹೊರಟಿದ್ದಾರೆ. ಇದರ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಜನರನ್ನು ಭೀತರಾಗುವಂತಹ ವಾತಾವರಣ ಸೃಷ್ಟಿಸುತ್ತಿವೆ. ತನ್ನ ಸಿದ್ದಾಂತ ಒಪ್ಪದವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹತ್ಯೆಯಾಗಿದೆ. ದೇಶದಲ್ಲಿ ಅಘೋಷಿತ ತುರ್ತುಪಡಿಸ್ಥಿತಿ ಇದೆ ಎಂದರು.

ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಎ ವಿರುದ್ಧ ವಿದ್ಯಾರ್ಥಿಗಳು, ಯುವಜನರು, ರೈತರು ಮತ್ತು ಮಹಿಳಾ ಸಂಘಟನೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರಬಲ ಹೋರಾಟಗಳನ್ನು ಮಾಡಬೇಕು. ಮನೆಮನೆಗೂ ಹೋಗಿ ಜನರಿಗೆ ಈ ಕಾಯ್ದೆಗಳ ಅಪಾಯದ ಕುರಿತು ಮನವರಿಕೆ ಮಾಡಬೇಕು. ದೇಶದಲ್ಲಿ ಕೇರಳ ಸೇರಿದಂತೆ 13 ರಾಜ್ಯಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. ಇದು ಬಿಜೆಪಿಯ ಶಕ್ತಿಯನ್ನು ಕುಂದಿಸುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್.ಸಿ ಪ್ರಕಾರ ಮಹಾತ್ಮ ಗಾಂಧಿಗೂ ಪೌರತ್ವ ನೀಡಲು ಬರುವುದಿಲ್ಲ. ಗಾಂಧೀ ರಾಮ್-ರಹೀಮ್ ಇಬ್ಬರೂ ಒಂದೇ ಎಂದರು. ಈಗಿನ ಪರಿಸ್ಥಿತಿ ರಾಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರಹೀಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಅಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಮನಿಗೆ ಪೌರತ್ವ ನೀಡಿದರೆ, ರಹೀಮನಿಗೆ ಪೌರತ್ವ ಇಲ್ಲ. ಹಿಂದೂಗಳು ಪೌರತ್ವ ಪಡೆಯುವುದು ಕಷ್ಟದ ಕೆಲಸ. ಹೀಗಾಗಿ ಕೇಂದ್ರದ ಕಾಯ್ದೆಗಳ ವಿರುದ್ಧ ಜನರು ಅಸಹಕಾರ ತೋರಬೇಕು ಎಂದು ವಿವರಿಸಿದರು.

ಕಮ್ಯೂನಿಸ್ಟರು ಎಲ್ಲ ಧರ್ಮಗಳನ್ನ ಸಮಾನವಾಗಿ ಗೌರವಿಸುತ್ತಾರೆ. ಜನರ ನಂಬಿಕೆಗಳನ್ನು ಗೌರವಿಸುತ್ತಾರೆ. ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಬಯಸುತ್ತಾರೆ. ಆದರೆ ತಾರತಮ್ಯವನ್ನು ಸಹಿಸುವುದಿಲ್ಲ. ಗಾಂಧಿ, ಬುದ್ಧ ಇದೇ ಹಾದಿಯಲ್ಲಿ ನಡೆದವರು. ಸಂವಿಧಾನವೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸುತ್ತದೆ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟಗಳಲ್ಲಿ ಎಲ್ಲ ಜನವಿಭಾಗವು ಪಾಲ್ಗೊಳ್ಳಬೇಕು. ಜನ ವಿರೋಧಿ ನೀತಿಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...