Homeಮುಖಪುಟಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

- Advertisement -
- Advertisement -

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಎನ್.ಪಿ.ಆರ್ ನಂತಹ ಮಹತ್ವ ಮಸೂದೆಗಳನ್ನು ವ್ಯವಹಾರಗಳ ಸಲಹಾ ಸಮಿತಿ ಮುಂದೆ ಚರ್ಚೆಗಿಡದೆ ನೇರವಾಗಿ ಸಂಸತ್ತಿನಲ್ಲಿ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಗಳನ್ನಾಗಿ ಜಾರಿಗೊಳಿಸಿರುವುದು ಅಸಂವಿಧಾನಿಕ ಎಂದು ಸಿಪಿಎಂ ಪಕ್ಷದ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ ಆರೋಪಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಫೆ.23ರಂದು ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸಿಎಎ, ಎನ್ಆರ್.ಸಿ. ಎನ್.ಪಿ.ಆರ್ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ರಾಜಕೀಯ ಮತ್ತು ಸಂಸದೀಯ ಇತಿಹಾಸದಲ್ಲಿ ಇದೇ ಮೊದಲಿಗೆ ಧರ್ಮಾಧಾರಿತ ಪೌರತ್ವ ನೋಂದಣಿ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಧರ್ಮಾಧಾರಿತ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಅವರ ನಿಜವಾದ ಬಣ್ಣ ಬಯಲಾಗಿದೆ. ಸಂವಿಧಾನಕ್ಕೆ ಪರ್ಯಾಯವಾಗಿ ದೇಶದಲ್ಲಿ ಅಧಿಕಾರ ಕೇಂದ್ರವೊಂದಿದೆ. ಅದು ಆರ್.ಎಸ್.ಎಸ್. ಮೂಲಸ್ಥಾನ ನಾಗಪುರ. ಅಲ್ಲಿ ಸಿದ್ದಗೊಳ್ಳುವ ನಿಯಮಗಳು ಕಾನೂನುಗಳಾಗುತ್ತಿವೆ. ಭಾರತೀಯ ಜನತಾ ಪಕ್ಷ ಆರ್.ಎಸ್.ಎಸ್.ನ ರಾಜಕೀಯ ಅಸ್ತ್ರವಾಗಿದೆ ಎಂದು ಹೇಳಿದರು.

ಹಿಂದೆ ಯಾವುದೇ ಕಾಯ್ದೆಗಳು ರೂಪುಗೊಳ್ಳುವ ಮೊದಲು ಸಾರ್ವಜನಿಕವಾಗಿ ಚರ್ಚೆಗೆ ಒಳಪಡುತ್ತಿದ್ದವು. ಹಲವು ಸಭೆಗಳಲ್ಲಿ, ಸಂಸತ್ ನಲ್ಲಿ ಗಂಭೀರವಾದ ಚರ್ಚೆ ನಡೆದು ಅದರ ಸಾಧಕಬಾಧಕಗಳನ್ನು ಗುರುತಿಸಿ ಆನಂತರ ಕಾಯ್ದೆಗಳು ಜಾರಿಯಾಗುತ್ತಿದ್ದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮಸೂಸೆಯ ಬಗ್ಗೆ ಚರ್ಚೆಗಳು ನಡೆದಿಲ್ಲ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇರವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಮಸೂದೆಗಳನ್ನು ಮಂಡಿಸಿ ಚರ್ಚಿಸಲು ಅವಕಾಶ ನೀಡದೆ ಕಾಯ್ದೆ ಜಾರಿಗೆ ತರಲಾಗಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದರು.

ಆರ್.ಎಸ್.ಎಸ್ ಹೇಳಿದಂತೆ ಬಿಜೆಪಿ ಕೇಳುತ್ತಿದೆ. ನಾಗಪುರದಲ್ಲಿ ಸಿದ್ದವಾಗುವ ನಿಯಮಗಳನ್ನು ಜನರ ಮೇಲೆ ಹೇರುವ ಕೆಲಸ ನಡೆಯುತ್ತಿದೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಹಾಳುಗೆಡವುತ್ತಿವೆ. ಜರ್ಮನಿಯ ಹಿಟ್ಲರ್ ಮಾಡಿದಂತೆ ಭಾರತದಲ್ಲಿ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಬಂಧನ ಕೇಂದ್ರಗಳನ್ನು ಕಟ್ಟಲು ಹೊರಟಿದ್ದಾರೆ. ಇದರ ವಿರುದ್ದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ ಜನರನ್ನು ಭೀತರಾಗುವಂತಹ ವಾತಾವರಣ ಸೃಷ್ಟಿಸುತ್ತಿವೆ. ತನ್ನ ಸಿದ್ದಾಂತ ಒಪ್ಪದವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದೆ. ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹತ್ಯೆಯಾಗಿದೆ. ದೇಶದಲ್ಲಿ ಅಘೋಷಿತ ತುರ್ತುಪಡಿಸ್ಥಿತಿ ಇದೆ ಎಂದರು.

ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಎ ವಿರುದ್ಧ ವಿದ್ಯಾರ್ಥಿಗಳು, ಯುವಜನರು, ರೈತರು ಮತ್ತು ಮಹಿಳಾ ಸಂಘಟನೆಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರಬಲ ಹೋರಾಟಗಳನ್ನು ಮಾಡಬೇಕು. ಮನೆಮನೆಗೂ ಹೋಗಿ ಜನರಿಗೆ ಈ ಕಾಯ್ದೆಗಳ ಅಪಾಯದ ಕುರಿತು ಮನವರಿಕೆ ಮಾಡಬೇಕು. ದೇಶದಲ್ಲಿ ಕೇರಳ ಸೇರಿದಂತೆ 13 ರಾಜ್ಯಗಳು ಸಿಎಎ, ಎನ್ಆರ್.ಸಿ ಮತ್ತು ಎನ್.ಪಿ.ಆರ್ ಜಾರಿಗೊಳಿಸುವುದಿಲ್ಲ ಎಂದು ಹೇಳಿವೆ. ಇದು ಬಿಜೆಪಿಯ ಶಕ್ತಿಯನ್ನು ಕುಂದಿಸುವಂತೆ ಮಾಡಿದೆ ಎಂದರು.

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್.ಸಿ ಪ್ರಕಾರ ಮಹಾತ್ಮ ಗಾಂಧಿಗೂ ಪೌರತ್ವ ನೀಡಲು ಬರುವುದಿಲ್ಲ. ಗಾಂಧೀ ರಾಮ್-ರಹೀಮ್ ಇಬ್ಬರೂ ಒಂದೇ ಎಂದರು. ಈಗಿನ ಪರಿಸ್ಥಿತಿ ರಾಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ರಹೀಮನನ್ನು ಆಯ್ಕೆ ಮಾಡಿಕೊಳ್ಳಬೇಕು. ಅಂತಹ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಮನಿಗೆ ಪೌರತ್ವ ನೀಡಿದರೆ, ರಹೀಮನಿಗೆ ಪೌರತ್ವ ಇಲ್ಲ. ಹಿಂದೂಗಳು ಪೌರತ್ವ ಪಡೆಯುವುದು ಕಷ್ಟದ ಕೆಲಸ. ಹೀಗಾಗಿ ಕೇಂದ್ರದ ಕಾಯ್ದೆಗಳ ವಿರುದ್ಧ ಜನರು ಅಸಹಕಾರ ತೋರಬೇಕು ಎಂದು ವಿವರಿಸಿದರು.

ಕಮ್ಯೂನಿಸ್ಟರು ಎಲ್ಲ ಧರ್ಮಗಳನ್ನ ಸಮಾನವಾಗಿ ಗೌರವಿಸುತ್ತಾರೆ. ಜನರ ನಂಬಿಕೆಗಳನ್ನು ಗೌರವಿಸುತ್ತಾರೆ. ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಬಯಸುತ್ತಾರೆ. ಆದರೆ ತಾರತಮ್ಯವನ್ನು ಸಹಿಸುವುದಿಲ್ಲ. ಗಾಂಧಿ, ಬುದ್ಧ ಇದೇ ಹಾದಿಯಲ್ಲಿ ನಡೆದವರು. ಸಂವಿಧಾನವೂ ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡುವುದನ್ನು ವಿರೋಧಿಸುತ್ತದೆ. ಈ ಹಿನ್ನೆಲೆಯಲ್ಲಿ ಜನಪರ ಹೋರಾಟಗಳಲ್ಲಿ ಎಲ್ಲ ಜನವಿಭಾಗವು ಪಾಲ್ಗೊಳ್ಳಬೇಕು. ಜನ ವಿರೋಧಿ ನೀತಿಗಳನ್ನು ವಿರೋಧಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...