Homeಮುಖಪುಟಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಬೃಹತ್ ಹಗರಣ ಬಯಲಾಗುತ್ತಿದ್ದಂತೆ, ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಜೆಪಿ ಅನುಸರಿಸುತ್ತಿರುವ ರಾಜಕೀಯದ ಮಾದರಿಯನ್ನು ಗಮನಿಸಿದರೆ, ಚುನಾವಣಾ ಬಾಂಡ್ ಹಗರಣ ತನ್ನಗಾಗಿಸಲು ಸಿಎಎ ಅನುಷ್ಠಾನ ಮಾಡಲಾಗಿದೆ ಎಂದ ಗಮನಿಸಬಹುದು ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ ಇದಾಗಿದೆ ಎಂದು ರಾಮ್ ಪುನಿಯಾನಿ ದಿ ವೈರ್‌ನಲ್ಲಿ ಬರೆದ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕೈಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ನಂತರ ಭಾರತದಲ್ಲಿ ಸಿಎಎ ಮುನ್ನೆಲೆಗೆ ಬಂದಿದೆ. ಜನರಲ್ಲಿ ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಕೇಳಲಾಯಿತು. ಅಸ್ಸಾಂನಲ್ಲಿ 15 ಮಿಲಿಯನ್ ಬಾಂಗ್ಲಾದೇಶಿ ಮುಸ್ಲಿಮರು ನುಸುಳಿದ್ದಾರೆ ಮತ್ತು ಈ ಕ್ರಮವು ಅವರನ್ನು ಹೊರಹಾಕಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಅವರನ್ನು ಗೆದ್ದಲುಗಳು ಎಂದು ಕರೆಯಲಾಯ್ತು, ಬಂಧನ ಕೇಂದ್ರಗಳಲ್ಲಿಡಲಾಯತು. ಈಗ ಅಸ್ಸಾಂ NRCಯ ಫಲಿತಾಂಶಗಳು ಆಶ್ಚರ್ಯಕರವಾಗಿವೆ. ಸರಿಯಾದ ದಾಖಲೆಗಳಿಲ್ಲದ ಸುಮಾರು 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಎನ್ನುವುದು ಗಮನಾರ್ಹವಾಗಿದೆ.

ಸಿಎಎ ಪ್ರಕಾರ, ಡಿಸೆಂಬರ್ 2014ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರಿಗೆ ಪೌರತ್ವ ನೀಡಬೇಕಾಗಿತ್ತು. ಕುತೂಹಲಕಾರಿಯಾಗಿ, ಮುಸ್ಲಿಮರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ. ಇದು ದೇಶದಾದ್ಯಂತ ಬಲವಾದ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ವಿಶೇಷವಾಗಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಇದು ಹೊಸದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ಸ್ವತಂತ್ರ ಭಾರತದ ಅತಿದೊಡ್ಡ ಜನಾಂದೋಲನಕ್ಕೆ ಕಾರಣವಾಯಿತು. ಈ ಪ್ರತಿಭಟನೆಗಳು ದೇಶದಾದ್ಯಂತ ಮುಸ್ಲಿಂ ಮಹಿಳೆಯರ ನೇತೃತ್ವದಲ್ಲಿ ನಡೆದವು. ಕೈಯಲ್ಲಿ ಸಂವಿಧಾನ ಮತ್ತು ಹೃದಯದಲ್ಲಿ ಗಾಂಧಿಯನ್ನು ಇಟ್ಟುಕೊಂಡು ಪ್ರತಿಭಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಈ ಪ್ರತಿಭಟನೆಗಳು ಹಿಂದೂಗಳಿಗೆ ಬೆದರಿಕೆಯಾಗಿದ್ದು, ಪ್ರತಿಭಟನಾಕಾರರು ಅವರನ್ನು ಅತ್ಯಾಚಾರ ಮಾಡಿ ಕೊಲ್ಲಬಹುದು ಎಂದು ಹೇಳಿದ್ದರು. ಮತ್ತೊಬ್ಬ ಬಿಜೆಪಿ ನಾಯಕ ಕಪಿಲ್ ಶರ್ಮಾ, ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸದಿದ್ದರೆ ಅವರೇ ಅದನ್ನು ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಕಡಿವಾಣ ಹಾಕಲು ಆಗಿನ ರಾಜ್ಯ ಸಚಿವ ಔನ್ರಾಗ್ ಠಾಕೂರ್ ‘ಗೋಲಿ ಮಾರೋ’ ಎಂಬ ಘೋಷಣೆಯನ್ನು ನೀಡಿದರು. ಶೀಘ್ರದಲ್ಲೇ ರಾಜಧಾನಿಯಲ್ಲಿ ದಂಗೆಗಳು ನಡೆದವು – 51 ಜನರು ಪ್ರಾಣ ಕಳೆದುಕೊಂಡರು ಅದರಲ್ಲಿ 38 ಮಂದಿ ಮುಸ್ಲಿಮರಾಗಿದ್ದರು. ಇದು ಮುಸ್ಲಿಮರ ವಿರುದ್ಧ ಪ್ರಚೋದಿಸಲು ಸಿಎಎಯನ್ನು ಆಯುಧವಾಗಿ ಬಳಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.

ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಜನರಿಗೆ ಆಶ್ರಯ ನೀಡುವ ಮಾನದಂಡಗಳು ಯಾವುವು? ಇಂದಿರಾ ಜೈಸಿಂಗ್ ಅವರು ಗಮನಸೆಳೆದಿದ್ದಾರೆ; ಸಂವಿಧಾನವು ಯಾವುದೇ ಧರ್ಮವನ್ನು ಲೆಕ್ಕಿಸದೆ ಹುಟ್ಟು, ವಂಶಸ್ಥರು ಮತ್ತು ವಲಸೆಯ ಮೂಲಕ ಪೌರತ್ವವನ್ನು ನೀಡುತ್ತದೆ, ಪೌರತ್ವದ ಕಾಯಿದೆ -1955ರ ಕಾಯಿದೆಯು ಪೌರತ್ವವನ್ನು ನೀಡಲು ಧರ್ಮವನ್ನು ಮಾನದಂಡವನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತದೆ. ಆದರೆ ತಿದ್ದುಪಡಿ ನಿಯಮ ಕೇವಲ ಧರ್ಮದ ಆಧಾರದ ಮೇಲೆ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ನೀಡುತ್ತದೆ. ಈ ತಿದ್ದುಪಡಿಯು ಆರ್ಟಿಕಲ್ 14 ನ್ನು ಉಲ್ಲಂಘಿಸುತ್ತದೆ, ಆರ್ಟಿಕಲ್ 14 ಧರ್ಮವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಸಮಾನತೆ ಮತ್ತು ಸಮಾನ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಆರ್ಟಿಕಲ್ 14 ಎಲ್ಲ ವ್ಯಕ್ತಿಗಳಿಗೂ ಅನ್ವಯಿಸುತ್ತದೆ. CAA ಮುಸ್ಲಿಮರಿಗೆ ತ್ವರಿತ ಪೌರತ್ವವನ್ನು ನಿರಾಕರಿಸುತ್ತದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ದೇಶಗಳ ಜನರನ್ನು ಹೊರಗಿಡುತ್ತದೆ. ಪಾಕಿಸ್ತಾನದಲ್ಲಿರುವ ಅಹ್ಮದೀಯ ಮುಸ್ಲಿಮರು ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಲ್ಲಿ ಒಬ್ಬರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಆದರೆ ಧಾರ್ಮಿಕ ಮಾನದಂಡಗಳ ಕಾರಣದಿಂದಾಗಿ ಸಿಎಎ ಮೂಲಕ ಅವರಿಗೆ ಪೌರತ್ವವನ್ನು ನಿರಾಕರಿಸಲಾಗಿದೆ.

ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ತ್ವರಿತ ಪೌರತ್ವವನ್ನು ಒದಗಿಸಲು CAAನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಆದರೂ, ಕಾಯಿದೆಯ ಕಾನೂನು ಅಥವಾ ನಿಯಮಗಳು ಕಿರುಕುಳವನ್ನು ಉಲ್ಲೇಖಿಸುವುದಿಲ್ಲ ಮತ್ತು ಪೌರತ್ವವನ್ನು ನೀಡುವ ಮೊದಲು ಕಿರುಕುಳದ ಪುರಾವೆ ಅಗತ್ಯವಿಲ್ಲ ಎಂದು ಹೇಳುತ್ತಿದೆ. CAA ನಿಯಮಗಳ ಅಡಿಯಲ್ಲಿ, ಮೂರು ದೇಶಗಳ ವಲಸಿಗರು ತಮ್ಮ ಧರ್ಮ, ಭಾರತೀಯ ಪ್ರವೇಶ ದಿನಾಂಕ ಮತ್ತು ಮೂಲದ ದೇಶ ಮತ್ತು ಭಾರತೀಯ ಭಾಷೆಯ ಜ್ಞಾನವನ್ನು ಮಾತ್ರ ಸಾಬೀತುಪಡಿಸಬೇಕು. ಮೂಲದ ದೇಶದ ಪುರಾವೆಗೆ ಸಂಬಂಧಿಸಿದ ನಿಯಮಗಳನ್ನು ಗಣನೀಯವಾಗಿ ಸಡಿಲಿಸಲಾಗಿದೆ. ಭಾರತದಿಂದ ಮಾನ್ಯವಾದ ವಸತಿ ಪರವಾನಗಿ ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನೀಡಿದ ಮಾನ್ಯವಾದ ಪಾಸ್‌ಪೋರ್ಟ್‌ನ ಹಿಂದಿನ ಅಗತ್ಯವನ್ನು ತೆಗೆದುಹಾಕಲಾಗಿದೆ. ಕಿರುಕುಳದ ಪುರಾವೆಯನ್ನು ಕೇಳಲಾಗಿಲ್ಲ ಎನ್ನವುದು ಗಮನಾರ್ಹ.

ಈ ದೇಶಗಳಲ್ಲಿರುವ ಹಿಂದೂಗಳು ಮಾತ್ರ ಭಾರತಕ್ಕೆ ಬರಬಹುದು ಮತ್ತು ಮುಸ್ಲಿಮರು ಇಸ್ಲಾಂ ಧರ್ಮವನ್ನು ಅನುಸರಿಸುವ ಯಾವುದೇ ದೇಶಕ್ಕೆ ಹೋಗಬಹುದು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಈ ತರ್ಕವು ದೋಷಪೂರಿತವಾಗಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳನ್ನು ಹೊರತುಪಡಿಸಿ, ಅಹ್ಮದೀಯರು ಮತ್ತು ಕಡಿಯಾನಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಶೋಷಣೆಗೆ ಒಳಗಾದ ಸಮುದಾಯಗಳಿಗೆ ನಾವು ಆಶ್ರಯ ನೀಡುವ ಬಗ್ಗೆ ಮಾತನಾಡುವಾಗ ನಮ್ಮ ಮಾನವೀಯ ಮೌಲ್ಯಗಳು ಮುನ್ನೆಲೆಗೆ ಬರಬೇಕು. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಿರುಕುಳಕ್ಕೊಳಗಾದ ಗುಂಪುಗಳು ಶ್ರೀಲಂಕಾದಲ್ಲಿ ಹಿಂದೂಗಳು (ತಮಿಳರು) ಮತ್ತು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳು. ಭಾರತದಲ್ಲಿ ಪೌರತ್ವ ನೀಡುವವರ ಪಟ್ಟಿಯಿಂದ ಅವರನ್ನು ಏಕೆ ಕೈಬಿಡಲಾಗಿದೆ? ಇದು ಭಾರತದಲ್ಲಿನ ಮುಸ್ಲಿಂ ಸಮುದಾಯದ ವಿರುದ್ಧ ಬಳಸಲಿರುವ ಮತ್ತೊಂದು ಸಾಧನವಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಭಾರತದಲ್ಲಿ ವ್ಯಾಪಕವಾದ ದ್ವೇಷ ಹಿಂಸೆಯಂತಹ ಘಟನೆಗಳು ನಾವು ಕಂಡಿದ್ದೇವೆ. ಬಿಜೆಪಿ ತನ್ನ ಚುನಾವಣಾ ಶಕ್ತಿಯನ್ನು ಬಲಪಡಿಸಲು ಭಾವನಾತ್ಮಕ ಮತ್ತು ವಿಭಜಕ ವಿಷಯಗಳನ್ನು ನಿರಂತರವಾಗಿ ಮುನ್ನೆಲೆಗೆ ತಂದಿದೆ. ಅದರ ಒಂದು ಭಾಗವೇ CAA ಎನ್ನುವುದು ಗೌಪ್ಯವಾಗಿ ಉಳಿದಿಲ್ಲ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...