Homeಮುಖಪುಟಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಬೃಹತ್ ಹಗರಣ ಬಯಲಾಗುತ್ತಿದ್ದಂತೆ, ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಜೆಪಿ ಅನುಸರಿಸುತ್ತಿರುವ ರಾಜಕೀಯದ ಮಾದರಿಯನ್ನು ಗಮನಿಸಿದರೆ, ಚುನಾವಣಾ ಬಾಂಡ್ ಹಗರಣ ತನ್ನಗಾಗಿಸಲು ಸಿಎಎ ಅನುಷ್ಠಾನ ಮಾಡಲಾಗಿದೆ ಎಂದ ಗಮನಿಸಬಹುದು ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ ಇದಾಗಿದೆ ಎಂದು ರಾಮ್ ಪುನಿಯಾನಿ ದಿ ವೈರ್‌ನಲ್ಲಿ ಬರೆದ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕೈಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ನಂತರ ಭಾರತದಲ್ಲಿ ಸಿಎಎ ಮುನ್ನೆಲೆಗೆ ಬಂದಿದೆ. ಜನರಲ್ಲಿ ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಕೇಳಲಾಯಿತು. ಅಸ್ಸಾಂನಲ್ಲಿ 15 ಮಿಲಿಯನ್ ಬಾಂಗ್ಲಾದೇಶಿ ಮುಸ್ಲಿಮರು ನುಸುಳಿದ್ದಾರೆ ಮತ್ತು ಈ ಕ್ರಮವು ಅವರನ್ನು ಹೊರಹಾಕಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಅವರನ್ನು ಗೆದ್ದಲುಗಳು ಎಂದು ಕರೆಯಲಾಯ್ತು, ಬಂಧನ ಕೇಂದ್ರಗಳಲ್ಲಿಡಲಾಯತು. ಈಗ ಅಸ್ಸಾಂ NRCಯ ಫಲಿತಾಂಶಗಳು ಆಶ್ಚರ್ಯಕರವಾಗಿವೆ. ಸರಿಯಾದ ದಾಖಲೆಗಳಿಲ್ಲದ ಸುಮಾರು 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಎನ್ನುವುದು ಗಮನಾರ್ಹವಾಗಿದೆ.

ಸಿಎಎ ಪ್ರಕಾರ, ಡಿಸೆಂಬರ್ 2014ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರಿಗೆ ಪೌರತ್ವ ನೀಡಬೇಕಾಗಿತ್ತು. ಕುತೂಹಲಕಾರಿಯಾಗಿ, ಮುಸ್ಲಿಮರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ. ಇದು ದೇಶದಾದ್ಯಂತ ಬಲವಾದ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ವಿಶೇಷವಾಗಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಇದು ಹೊಸದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ಸ್ವತಂತ್ರ ಭಾರತದ ಅತಿದೊಡ್ಡ ಜನಾಂದೋಲನಕ್ಕೆ ಕಾರಣವಾಯಿತು. ಈ ಪ್ರತಿಭಟನೆಗಳು ದೇಶದಾದ್ಯಂತ ಮುಸ್ಲಿಂ ಮಹಿಳೆಯರ ನೇತೃತ್ವದಲ್ಲಿ ನಡೆದವು. ಕೈಯಲ್ಲಿ ಸಂವಿಧಾನ ಮತ್ತು ಹೃದಯದಲ್ಲಿ ಗಾಂಧಿಯನ್ನು ಇಟ್ಟುಕೊಂಡು ಪ್ರತಿಭಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಈ ಪ್ರತಿಭಟನೆಗಳು ಹಿಂದೂಗಳಿಗೆ ಬೆದರಿಕೆಯಾಗಿದ್ದು, ಪ್ರತಿಭಟನಾಕಾರರು ಅವರನ್ನು ಅತ್ಯಾಚಾರ ಮಾಡಿ ಕೊಲ್ಲಬಹುದು ಎಂದು ಹೇಳಿದ್ದರು. ಮತ್ತೊಬ್ಬ ಬಿಜೆಪಿ ನಾಯಕ ಕಪಿಲ್ ಶರ್ಮಾ, ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸದಿದ್ದರೆ ಅವರೇ ಅದನ್ನು ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಕಡಿವಾಣ ಹಾಕಲು ಆಗಿನ ರಾಜ್ಯ ಸಚಿವ ಔನ್ರಾಗ್ ಠಾಕೂರ್ ‘ಗೋಲಿ ಮಾರೋ’ ಎಂಬ ಘೋಷಣೆಯನ್ನು ನೀಡಿದರು. ಶೀಘ್ರದಲ್ಲೇ ರಾಜಧಾನಿಯಲ್ಲಿ ದಂಗೆಗಳು ನಡೆದವು – 51 ಜನರು ಪ್ರಾಣ ಕಳೆದುಕೊಂಡರು ಅದರಲ್ಲಿ 38 ಮಂದಿ ಮುಸ್ಲಿಮರಾಗಿದ್ದರು. ಇದು ಮುಸ್ಲಿಮರ ವಿರುದ್ಧ ಪ್ರಚೋದಿಸಲು ಸಿಎಎಯನ್ನು ಆಯುಧವಾಗಿ ಬಳಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.

ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಜನರಿಗೆ ಆಶ್ರಯ ನೀಡುವ ಮಾನದಂಡಗಳು ಯಾವುವು? ಇಂದಿರಾ ಜೈಸಿಂಗ್ ಅವರು ಗಮನಸೆಳೆದಿದ್ದಾರೆ; ಸಂವಿಧಾನವು ಯಾವುದೇ ಧರ್ಮವನ್ನು ಲೆಕ್ಕಿಸದೆ ಹುಟ್ಟು, ವಂಶಸ್ಥರು ಮತ್ತು ವಲಸೆಯ ಮೂಲಕ ಪೌರತ್ವವನ್ನು ನೀಡುತ್ತದೆ, ಪೌರತ್ವದ ಕಾಯಿದೆ -1955ರ ಕಾಯಿದೆಯು ಪೌರತ್ವವನ್ನು ನೀಡಲು ಧರ್ಮವನ್ನು ಮಾನದಂಡವನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತದೆ. ಆದರೆ ತಿದ್ದುಪಡಿ ನಿಯಮ ಕೇವಲ ಧರ್ಮದ ಆಧಾರದ ಮೇಲೆ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ನೀಡುತ್ತದೆ. ಈ ತಿದ್ದುಪಡಿಯು ಆರ್ಟಿಕಲ್ 14 ನ್ನು ಉಲ್ಲಂಘಿಸುತ್ತದೆ, ಆರ್ಟಿಕಲ್ 14 ಧರ್ಮವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಸಮಾನತೆ ಮತ್ತು ಸಮಾನ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಆರ್ಟಿಕಲ್ 14 ಎಲ್ಲ ವ್ಯಕ್ತಿಗಳಿಗೂ ಅನ್ವಯಿಸುತ್ತದೆ. CAA ಮುಸ್ಲಿಮರಿಗೆ ತ್ವರಿತ ಪೌರತ್ವವನ್ನು ನಿರಾಕರಿಸುತ್ತದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ದೇಶಗಳ ಜನರನ್ನು ಹೊರಗಿಡುತ್ತದೆ. ಪಾಕಿಸ್ತಾನದಲ್ಲಿರುವ ಅಹ್ಮದೀಯ ಮುಸ್ಲಿಮರು ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಲ್ಲಿ ಒಬ್ಬರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಆದರೆ ಧಾರ್ಮಿಕ ಮಾನದಂಡಗಳ ಕಾರಣದಿಂದಾಗಿ ಸಿಎಎ ಮೂಲಕ ಅವರಿಗೆ ಪೌರತ್ವವನ್ನು ನಿರಾಕರಿಸಲಾಗಿದೆ.

ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ತ್ವರಿತ ಪೌರತ್ವವನ್ನು ಒದಗಿಸಲು CAAನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಆದರೂ, ಕಾಯಿದೆಯ ಕಾನೂನು ಅಥವಾ ನಿಯಮಗಳು ಕಿರುಕುಳವನ್ನು ಉಲ್ಲೇಖಿಸುವುದಿಲ್ಲ ಮತ್ತು ಪೌರತ್ವವನ್ನು ನೀಡುವ ಮೊದಲು ಕಿರುಕುಳದ ಪುರಾವೆ ಅಗತ್ಯವಿಲ್ಲ ಎಂದು ಹೇಳುತ್ತಿದೆ. CAA ನಿಯಮಗಳ ಅಡಿಯಲ್ಲಿ, ಮೂರು ದೇಶಗಳ ವಲಸಿಗರು ತಮ್ಮ ಧರ್ಮ, ಭಾರತೀಯ ಪ್ರವೇಶ ದಿನಾಂಕ ಮತ್ತು ಮೂಲದ ದೇಶ ಮತ್ತು ಭಾರತೀಯ ಭಾಷೆಯ ಜ್ಞಾನವನ್ನು ಮಾತ್ರ ಸಾಬೀತುಪಡಿಸಬೇಕು. ಮೂಲದ ದೇಶದ ಪುರಾವೆಗೆ ಸಂಬಂಧಿಸಿದ ನಿಯಮಗಳನ್ನು ಗಣನೀಯವಾಗಿ ಸಡಿಲಿಸಲಾಗಿದೆ. ಭಾರತದಿಂದ ಮಾನ್ಯವಾದ ವಸತಿ ಪರವಾನಗಿ ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನೀಡಿದ ಮಾನ್ಯವಾದ ಪಾಸ್‌ಪೋರ್ಟ್‌ನ ಹಿಂದಿನ ಅಗತ್ಯವನ್ನು ತೆಗೆದುಹಾಕಲಾಗಿದೆ. ಕಿರುಕುಳದ ಪುರಾವೆಯನ್ನು ಕೇಳಲಾಗಿಲ್ಲ ಎನ್ನವುದು ಗಮನಾರ್ಹ.

ಈ ದೇಶಗಳಲ್ಲಿರುವ ಹಿಂದೂಗಳು ಮಾತ್ರ ಭಾರತಕ್ಕೆ ಬರಬಹುದು ಮತ್ತು ಮುಸ್ಲಿಮರು ಇಸ್ಲಾಂ ಧರ್ಮವನ್ನು ಅನುಸರಿಸುವ ಯಾವುದೇ ದೇಶಕ್ಕೆ ಹೋಗಬಹುದು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಈ ತರ್ಕವು ದೋಷಪೂರಿತವಾಗಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳನ್ನು ಹೊರತುಪಡಿಸಿ, ಅಹ್ಮದೀಯರು ಮತ್ತು ಕಡಿಯಾನಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಶೋಷಣೆಗೆ ಒಳಗಾದ ಸಮುದಾಯಗಳಿಗೆ ನಾವು ಆಶ್ರಯ ನೀಡುವ ಬಗ್ಗೆ ಮಾತನಾಡುವಾಗ ನಮ್ಮ ಮಾನವೀಯ ಮೌಲ್ಯಗಳು ಮುನ್ನೆಲೆಗೆ ಬರಬೇಕು. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಿರುಕುಳಕ್ಕೊಳಗಾದ ಗುಂಪುಗಳು ಶ್ರೀಲಂಕಾದಲ್ಲಿ ಹಿಂದೂಗಳು (ತಮಿಳರು) ಮತ್ತು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳು. ಭಾರತದಲ್ಲಿ ಪೌರತ್ವ ನೀಡುವವರ ಪಟ್ಟಿಯಿಂದ ಅವರನ್ನು ಏಕೆ ಕೈಬಿಡಲಾಗಿದೆ? ಇದು ಭಾರತದಲ್ಲಿನ ಮುಸ್ಲಿಂ ಸಮುದಾಯದ ವಿರುದ್ಧ ಬಳಸಲಿರುವ ಮತ್ತೊಂದು ಸಾಧನವಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಭಾರತದಲ್ಲಿ ವ್ಯಾಪಕವಾದ ದ್ವೇಷ ಹಿಂಸೆಯಂತಹ ಘಟನೆಗಳು ನಾವು ಕಂಡಿದ್ದೇವೆ. ಬಿಜೆಪಿ ತನ್ನ ಚುನಾವಣಾ ಶಕ್ತಿಯನ್ನು ಬಲಪಡಿಸಲು ಭಾವನಾತ್ಮಕ ಮತ್ತು ವಿಭಜಕ ವಿಷಯಗಳನ್ನು ನಿರಂತರವಾಗಿ ಮುನ್ನೆಲೆಗೆ ತಂದಿದೆ. ಅದರ ಒಂದು ಭಾಗವೇ CAA ಎನ್ನುವುದು ಗೌಪ್ಯವಾಗಿ ಉಳಿದಿಲ್ಲ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...