Homeಮುಖಪುಟಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಬೃಹತ್ ಹಗರಣ ಬಯಲಾಗುತ್ತಿದ್ದಂತೆ, ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಜೆಪಿ ಅನುಸರಿಸುತ್ತಿರುವ ರಾಜಕೀಯದ ಮಾದರಿಯನ್ನು ಗಮನಿಸಿದರೆ, ಚುನಾವಣಾ ಬಾಂಡ್ ಹಗರಣ ತನ್ನಗಾಗಿಸಲು ಸಿಎಎ ಅನುಷ್ಠಾನ ಮಾಡಲಾಗಿದೆ ಎಂದ ಗಮನಿಸಬಹುದು ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ ಇದಾಗಿದೆ ಎಂದು ರಾಮ್ ಪುನಿಯಾನಿ ದಿ ವೈರ್‌ನಲ್ಲಿ ಬರೆದ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕೈಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ನಂತರ ಭಾರತದಲ್ಲಿ ಸಿಎಎ ಮುನ್ನೆಲೆಗೆ ಬಂದಿದೆ. ಜನರಲ್ಲಿ ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಕೇಳಲಾಯಿತು. ಅಸ್ಸಾಂನಲ್ಲಿ 15 ಮಿಲಿಯನ್ ಬಾಂಗ್ಲಾದೇಶಿ ಮುಸ್ಲಿಮರು ನುಸುಳಿದ್ದಾರೆ ಮತ್ತು ಈ ಕ್ರಮವು ಅವರನ್ನು ಹೊರಹಾಕಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಅವರನ್ನು ಗೆದ್ದಲುಗಳು ಎಂದು ಕರೆಯಲಾಯ್ತು, ಬಂಧನ ಕೇಂದ್ರಗಳಲ್ಲಿಡಲಾಯತು. ಈಗ ಅಸ್ಸಾಂ NRCಯ ಫಲಿತಾಂಶಗಳು ಆಶ್ಚರ್ಯಕರವಾಗಿವೆ. ಸರಿಯಾದ ದಾಖಲೆಗಳಿಲ್ಲದ ಸುಮಾರು 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಎನ್ನುವುದು ಗಮನಾರ್ಹವಾಗಿದೆ.

ಸಿಎಎ ಪ್ರಕಾರ, ಡಿಸೆಂಬರ್ 2014ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರಿಗೆ ಪೌರತ್ವ ನೀಡಬೇಕಾಗಿತ್ತು. ಕುತೂಹಲಕಾರಿಯಾಗಿ, ಮುಸ್ಲಿಮರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ. ಇದು ದೇಶದಾದ್ಯಂತ ಬಲವಾದ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ವಿಶೇಷವಾಗಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಇದು ಹೊಸದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ಸ್ವತಂತ್ರ ಭಾರತದ ಅತಿದೊಡ್ಡ ಜನಾಂದೋಲನಕ್ಕೆ ಕಾರಣವಾಯಿತು. ಈ ಪ್ರತಿಭಟನೆಗಳು ದೇಶದಾದ್ಯಂತ ಮುಸ್ಲಿಂ ಮಹಿಳೆಯರ ನೇತೃತ್ವದಲ್ಲಿ ನಡೆದವು. ಕೈಯಲ್ಲಿ ಸಂವಿಧಾನ ಮತ್ತು ಹೃದಯದಲ್ಲಿ ಗಾಂಧಿಯನ್ನು ಇಟ್ಟುಕೊಂಡು ಪ್ರತಿಭಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಈ ಪ್ರತಿಭಟನೆಗಳು ಹಿಂದೂಗಳಿಗೆ ಬೆದರಿಕೆಯಾಗಿದ್ದು, ಪ್ರತಿಭಟನಾಕಾರರು ಅವರನ್ನು ಅತ್ಯಾಚಾರ ಮಾಡಿ ಕೊಲ್ಲಬಹುದು ಎಂದು ಹೇಳಿದ್ದರು. ಮತ್ತೊಬ್ಬ ಬಿಜೆಪಿ ನಾಯಕ ಕಪಿಲ್ ಶರ್ಮಾ, ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸದಿದ್ದರೆ ಅವರೇ ಅದನ್ನು ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಕಡಿವಾಣ ಹಾಕಲು ಆಗಿನ ರಾಜ್ಯ ಸಚಿವ ಔನ್ರಾಗ್ ಠಾಕೂರ್ ‘ಗೋಲಿ ಮಾರೋ’ ಎಂಬ ಘೋಷಣೆಯನ್ನು ನೀಡಿದರು. ಶೀಘ್ರದಲ್ಲೇ ರಾಜಧಾನಿಯಲ್ಲಿ ದಂಗೆಗಳು ನಡೆದವು – 51 ಜನರು ಪ್ರಾಣ ಕಳೆದುಕೊಂಡರು ಅದರಲ್ಲಿ 38 ಮಂದಿ ಮುಸ್ಲಿಮರಾಗಿದ್ದರು. ಇದು ಮುಸ್ಲಿಮರ ವಿರುದ್ಧ ಪ್ರಚೋದಿಸಲು ಸಿಎಎಯನ್ನು ಆಯುಧವಾಗಿ ಬಳಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.

ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಜನರಿಗೆ ಆಶ್ರಯ ನೀಡುವ ಮಾನದಂಡಗಳು ಯಾವುವು? ಇಂದಿರಾ ಜೈಸಿಂಗ್ ಅವರು ಗಮನಸೆಳೆದಿದ್ದಾರೆ; ಸಂವಿಧಾನವು ಯಾವುದೇ ಧರ್ಮವನ್ನು ಲೆಕ್ಕಿಸದೆ ಹುಟ್ಟು, ವಂಶಸ್ಥರು ಮತ್ತು ವಲಸೆಯ ಮೂಲಕ ಪೌರತ್ವವನ್ನು ನೀಡುತ್ತದೆ, ಪೌರತ್ವದ ಕಾಯಿದೆ -1955ರ ಕಾಯಿದೆಯು ಪೌರತ್ವವನ್ನು ನೀಡಲು ಧರ್ಮವನ್ನು ಮಾನದಂಡವನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತದೆ. ಆದರೆ ತಿದ್ದುಪಡಿ ನಿಯಮ ಕೇವಲ ಧರ್ಮದ ಆಧಾರದ ಮೇಲೆ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ನೀಡುತ್ತದೆ. ಈ ತಿದ್ದುಪಡಿಯು ಆರ್ಟಿಕಲ್ 14 ನ್ನು ಉಲ್ಲಂಘಿಸುತ್ತದೆ, ಆರ್ಟಿಕಲ್ 14 ಧರ್ಮವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಸಮಾನತೆ ಮತ್ತು ಸಮಾನ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಆರ್ಟಿಕಲ್ 14 ಎಲ್ಲ ವ್ಯಕ್ತಿಗಳಿಗೂ ಅನ್ವಯಿಸುತ್ತದೆ. CAA ಮುಸ್ಲಿಮರಿಗೆ ತ್ವರಿತ ಪೌರತ್ವವನ್ನು ನಿರಾಕರಿಸುತ್ತದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ದೇಶಗಳ ಜನರನ್ನು ಹೊರಗಿಡುತ್ತದೆ. ಪಾಕಿಸ್ತಾನದಲ್ಲಿರುವ ಅಹ್ಮದೀಯ ಮುಸ್ಲಿಮರು ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಲ್ಲಿ ಒಬ್ಬರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಆದರೆ ಧಾರ್ಮಿಕ ಮಾನದಂಡಗಳ ಕಾರಣದಿಂದಾಗಿ ಸಿಎಎ ಮೂಲಕ ಅವರಿಗೆ ಪೌರತ್ವವನ್ನು ನಿರಾಕರಿಸಲಾಗಿದೆ.

ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ತ್ವರಿತ ಪೌರತ್ವವನ್ನು ಒದಗಿಸಲು CAAನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಆದರೂ, ಕಾಯಿದೆಯ ಕಾನೂನು ಅಥವಾ ನಿಯಮಗಳು ಕಿರುಕುಳವನ್ನು ಉಲ್ಲೇಖಿಸುವುದಿಲ್ಲ ಮತ್ತು ಪೌರತ್ವವನ್ನು ನೀಡುವ ಮೊದಲು ಕಿರುಕುಳದ ಪುರಾವೆ ಅಗತ್ಯವಿಲ್ಲ ಎಂದು ಹೇಳುತ್ತಿದೆ. CAA ನಿಯಮಗಳ ಅಡಿಯಲ್ಲಿ, ಮೂರು ದೇಶಗಳ ವಲಸಿಗರು ತಮ್ಮ ಧರ್ಮ, ಭಾರತೀಯ ಪ್ರವೇಶ ದಿನಾಂಕ ಮತ್ತು ಮೂಲದ ದೇಶ ಮತ್ತು ಭಾರತೀಯ ಭಾಷೆಯ ಜ್ಞಾನವನ್ನು ಮಾತ್ರ ಸಾಬೀತುಪಡಿಸಬೇಕು. ಮೂಲದ ದೇಶದ ಪುರಾವೆಗೆ ಸಂಬಂಧಿಸಿದ ನಿಯಮಗಳನ್ನು ಗಣನೀಯವಾಗಿ ಸಡಿಲಿಸಲಾಗಿದೆ. ಭಾರತದಿಂದ ಮಾನ್ಯವಾದ ವಸತಿ ಪರವಾನಗಿ ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನೀಡಿದ ಮಾನ್ಯವಾದ ಪಾಸ್‌ಪೋರ್ಟ್‌ನ ಹಿಂದಿನ ಅಗತ್ಯವನ್ನು ತೆಗೆದುಹಾಕಲಾಗಿದೆ. ಕಿರುಕುಳದ ಪುರಾವೆಯನ್ನು ಕೇಳಲಾಗಿಲ್ಲ ಎನ್ನವುದು ಗಮನಾರ್ಹ.

ಈ ದೇಶಗಳಲ್ಲಿರುವ ಹಿಂದೂಗಳು ಮಾತ್ರ ಭಾರತಕ್ಕೆ ಬರಬಹುದು ಮತ್ತು ಮುಸ್ಲಿಮರು ಇಸ್ಲಾಂ ಧರ್ಮವನ್ನು ಅನುಸರಿಸುವ ಯಾವುದೇ ದೇಶಕ್ಕೆ ಹೋಗಬಹುದು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಈ ತರ್ಕವು ದೋಷಪೂರಿತವಾಗಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳನ್ನು ಹೊರತುಪಡಿಸಿ, ಅಹ್ಮದೀಯರು ಮತ್ತು ಕಡಿಯಾನಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಶೋಷಣೆಗೆ ಒಳಗಾದ ಸಮುದಾಯಗಳಿಗೆ ನಾವು ಆಶ್ರಯ ನೀಡುವ ಬಗ್ಗೆ ಮಾತನಾಡುವಾಗ ನಮ್ಮ ಮಾನವೀಯ ಮೌಲ್ಯಗಳು ಮುನ್ನೆಲೆಗೆ ಬರಬೇಕು. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಿರುಕುಳಕ್ಕೊಳಗಾದ ಗುಂಪುಗಳು ಶ್ರೀಲಂಕಾದಲ್ಲಿ ಹಿಂದೂಗಳು (ತಮಿಳರು) ಮತ್ತು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳು. ಭಾರತದಲ್ಲಿ ಪೌರತ್ವ ನೀಡುವವರ ಪಟ್ಟಿಯಿಂದ ಅವರನ್ನು ಏಕೆ ಕೈಬಿಡಲಾಗಿದೆ? ಇದು ಭಾರತದಲ್ಲಿನ ಮುಸ್ಲಿಂ ಸಮುದಾಯದ ವಿರುದ್ಧ ಬಳಸಲಿರುವ ಮತ್ತೊಂದು ಸಾಧನವಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಭಾರತದಲ್ಲಿ ವ್ಯಾಪಕವಾದ ದ್ವೇಷ ಹಿಂಸೆಯಂತಹ ಘಟನೆಗಳು ನಾವು ಕಂಡಿದ್ದೇವೆ. ಬಿಜೆಪಿ ತನ್ನ ಚುನಾವಣಾ ಶಕ್ತಿಯನ್ನು ಬಲಪಡಿಸಲು ಭಾವನಾತ್ಮಕ ಮತ್ತು ವಿಭಜಕ ವಿಷಯಗಳನ್ನು ನಿರಂತರವಾಗಿ ಮುನ್ನೆಲೆಗೆ ತಂದಿದೆ. ಅದರ ಒಂದು ಭಾಗವೇ CAA ಎನ್ನುವುದು ಗೌಪ್ಯವಾಗಿ ಉಳಿದಿಲ್ಲ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...